ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

Date:

  • ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ
  • ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವು

ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು 30 ಕಿ.ಮೀ ಉದ್ದದ ಹೊಸ ಯೋಜನೆಗೆ ರೂಪುರೇಷೆ ಸಿದ್ದಪಡಿಸಲಾಗಿದೆ. ಇದರಲ್ಲಿ 3.8 ಕಿ.ಮೀ ಸುರಂಗ ಮಾರ್ಗ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ಕಿಲೋಮೀಟರ್ ಪ್ರದೇಶ ಅರಣ್ಯ ಸಂರಕ್ಷಣಾ ಕಾಯಿದೆ ವ್ಯಾಪ್ತಿಯಲ್ಲಿದ್ದು, ಅರಣ್ಯ ಇಲಾಖೆಯೊಂದಿಗೆ ವ್ಯವಹರಿಸಿ ವನ್ಯ ಜೀವಿಗಳ ಚಲನ ವಲನಕ್ಕೆ ಧಕ್ಕೆ ಉಂಟಾಗದಂತೆ ಯೋಜನೆ ರೂಪಿಸಲಾಗುವುದು. ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿ ಗಮನಕ್ಕೆ ತರುತ್ತೇವೆ. ಅನುಮತಿ‌ ದೊರೆತ ನಂತರ ವಿಸ್ತೃತ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನದಿಂದ ಸಕಲೇಶಪುರ ಬೈಪಾಸ್‌ವರೆಗೆ ನವೆಂಬರ್‌ 1ರ ಒಳಗೆ ಕಾಮಗಾರಿ ಮುಗಿಸಬೇಕು. ಸಂಪೂರ್ಣ ಕಾಮಗಾರಿ 2024ರ ಮಾರ್ಚ್‌ ವೇಳೆಗೆ ಮುಕ್ತಾಯ ಮಾಡಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಪ್ರಗತಿ ಪರಿಶೀಲನೆ, ಮೇಲ್ವಿಚಾರಣೆ ಮಾಡಲಾಗುವುದು ಎಂದು ಹೇಳಿದರು.

ದೋಣಿಗಾಲ್ ಬಳಿ ಕಳೆದ ಹಲವು ವರ್ಷಗಳಿಂದಲೂ ಭೂ ಕುಸಿತದಿಂದ ಸಮಸ್ಯೆ ಉಂಟಾಗಿರುವ ಸ್ಥಳ ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ರಸ್ತೆ ಕಾಮಗಾರಿಯಿಂದ ಭೂ ಕುಸಿತ ಉಂಟಾಗಿ ಜಮೀನು ಕಳೆದುಕೊಂಡ ರೈತರ ಭೂ‌ಮಾಲೀಕರ ಅಹವಾಲು ಆಲಿಸಿ, ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.

ಸಕಲೇಶಪುರದಿಂದ ಗುಂಡ್ಯವರೆಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಅವರು ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

sathish jarakiholi

ಇದೇ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ತಾಂತ್ರಿಕ ತೊಂದರೆಯಿಂದ ಕಾಮಗಾರಿ ವಿಳಂಬವಾಗಿದೆ. ರಾಜ್ಯದಲ್ಲಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಲ್ಲಿ ಇದೂ ಒಂದು ಎಂದರು.

2017 ದಿಂದ ಕಾಮಗಾರಿ ನಡೆಯುತ್ತಿದ್ದು, ಎರಡು – ಮೂರು ವರ್ಷದ ಹಿಂದೆಯೇ ಕಾಮಗಾರಿ ಮುಗಿಯಬೇಕಿತ್ತು. ಮಳೆಗಾಲದಲ್ಲಿ ಭೂಕುಸಿತ ತಡೆಗೆ ಅಗತ್ಯವಿರುವ ಕಡೆ ಕಡ್ಡಾಯವಾಗಿ ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಿಂದೆ ಏನಾಗಿದೆ ಎಂಬುದನ್ನು ಗಮನಿಸುತ್ತಾ ಶೀಘ್ರ ಪೂರ್ಣಗೊಳಿಸುವುದು ಸದ್ಯದ ಸವಾಲು. ನಮ್ಮ ಸರ್ಕಾರ ಇದನ್ನು ಸಮರ್ಥವಾಗಿ ನಿಭಾಯಿಸಲಿದೆ. ಎಲ್ಲೆಲ್ಲಿ ಬಹಳ ಸಮಸ್ಯೆಯಿದೆ ಅಲ್ಲಿ ಕಾಂಕ್ರಿಟ್ ತಡೆಗೋಡೆ ಕಟ್ಟಲು ಸೂಚನೆ ನೀಡಿದ್ದೇವೆ. ಭೂಕುಸಿತದಿಂದ ನಷ್ಟ ಅನುಭವಿಸುವವರಿಗೆ ಪರಿಹಾರನೂ ಕೊಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ : ಪರಿಷತ್‌ಗೆ ಆಯ್ಕೆ ಬಳಿಕ ಜಗದೀಶ್ ಶೆಟ್ಟರ್

ಇದು ಬೆಂಗಳೂರು – ಮಂಗಳೂರಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗುವುದಿಲ್ಲ. ಸಮಯದ ಮಿತಿಗಳಲ್ಲಿ ಏಕಮುಖ ಸಂಚಾರ ಮಾಡಿ ವಾಹನ ಸಂಚರಿಸಲು ಅವಕಾಶ ನೀಡಲು ಚಿಂತನೆ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್‌ ಮಂಜು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ರಮೇಂದ್ರ, ಎಸ್ ಎಚ್.ಡಿ.ಪಿ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ್, ಉಪ ವಿಭಾಗಾಧಿಕಾರಿ ಅನ್ಮೋಲ್ ಜೈನ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...