ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

Date:

  • ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ
  • ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ

ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಕೊಲೆ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸ್ವಾಮೀಜಿ, “ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುವೆ” ಎಂದಿದ್ದಾರೆ.

“ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿಲ್ವಾ? ಈಡಿಗ ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನಾರಾಯಣ ಗುರು ರಥ ಬಂದಾಗ ಒಂದೇ ಒಂದು ಹಾರವನ್ನು ಮಧು ಬಂಗಾರಪ್ಪ ಹಾಕಿದರಾ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಭೂಮಿ ಕಳ್ಳತನ ಮಾಡಿದವರಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

“ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಅವರಿಗೆ ಹಕ್ಕು ಕೊಟ್ಟವರು ಯಾರು. ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೇ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆ. ಸಮುದಾಯಕ್ಕೆ ನಿಮ್ಮ ಸಾಧನೆ ಏನು? ಈಗ ಜೆಡಿಎಸ್​ನಿಂದ ಕಾಂಗ್ರೆಸ್ಸಿಗೆ ಬಂದಿದ್ದೀರಾ. ಮುಂದೆ ಯಾವ ಪಕ್ಷಕ್ಕೆ ಹೋಗುತ್ತೀರಾ ಅಂತ ಗೊತ್ತಿಲ್ಲ” ಎಂದು ಕಿಡಿಕಾರಿದರು.

“ಸಿಎಂ ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು. ಸ್ಪೀಕರ್ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ಧ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ” ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಸಿದರು.

ಯಾರಿಗೆ ಬೇಕಾದರೂ ದೂರು‌ ಕೊಡಲಿ: ಮಧು ಬಂಗಾರಪ್ಪ

ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, “ಪ್ರಣವಾನಂದಶ್ರೀ ಯಾಕೆ ಕಣ್ಣೀರು ಹಾಕಿದ್ದಾರೆ, ತಪ್ಪು ಮಾಡಿದ್ದಾರಾ? ಪ್ರಣವಾನಂದಶ್ರೀ ಇಂತಹ ಬುರುಡೆಗಳನ್ನ ಬಿಟ್ಟುಕೊಂಡೇ ಬಂದಿದ್ದಾರೆ. ಪ್ರಣವಾನಂದಶ್ರೀ ನಮ್ಮ ಸಮಾಜದವರೇ ಅಲ್ಲ. ಅವರೇನು ಈಡಿಗ ಸಮಾಜದವರಾ? ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ಧ ಬೆಂಗಳೂರು ನಗರ ಪೊಲೀಸ್ ಕಮಿಷನರ್, ಸ್ಪೀಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು‌ ಕೊಡಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...