ಸಂಪುಟ ಸಭೆ | ಮತಾಂತರ ನಿಷೇಧ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ತೀರ್ಮಾನ

Date:

  • ಒಟ್ಟು 17 ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ
  • ಹಿಂದಿನ ಸರ್ಕಾರ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದು

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್ ತಿಳಿಸಿದರು.

ಗುರುವಾರ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಹಿಂದಿನ ಸರ್ಕಾರ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದು ಮಾಡಿ, ಹಿಂದಿನ ಪಠ್ಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಒಟ್ಟು 17 ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಎಚ್‌ ಕೆ ಪಾಟೀಲ್ ವಿವರ ಒದಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪುಟ ಸಭೆಯಲ್ಲಿ ಚರ್ಚಿತವಾದ ವಿಚಾರಗಳು

  • ಕರ್ನಾಟಕ ಹೈ ಕೋರ್ಟ್‌ನ ಆಡಳಿತ ವೆಚ್ಚ ಮಿತಿ, ಹಣಕಾಸು ಅಧಿಕಾರ ಹೆಚ್ಚಳ ಮಾಡಲು ಮತ್ತು ಹೆಚ್ಚಿನ ಅಧಿಕಾರಿಗಳ ನಿಯೋಜನೆಗೆ ಒಪ್ಪಿಗೆ.
  • ಕೆಪಿಎಸ್‌ಸಿಯಲ್ಲಿ ಖಾಲಿ ಇರುವ ಮೂರು ಸದಸ್ಯರ ಭರ್ತಿಗೆ ಸಿಎಂಗೆ ಅಧಿಕಾರ.
  • ಕರ್ನಾಟಕ ಮಾಹಿತಿ ತಂತ್ರಜ್ಞಾನ ಬಯೋಟೆಕ್ನಾಲಜಿ, ವಿಜ್ಞಾನ, ತಂತ್ರಜ್ಞಾನ ಇಲಾಖೆಯು ಇಸಿಎಂಎ ಅವರಿಗೆ ಫ್ಲಾಗ್ ಶಿಪ್ ಕಾರ್ಯಕ್ರಮ ಟೆಕ್ ಸಮಿಟ್ (ಇನ್ ಬೆಂಗಳೂರು ಬಿಯಾಂಡ್ ಬೆಂಗಳೂರು) ಮಾಡುವ ಪ್ರಸ್ತಾವನೆಗೆ ಒಪ್ಪಿಗೆ.
  • ಸಂಸದೀಯ ವ್ಯವಹಾರಗಳ ಇಲಾಖೆ ಡಿಸ್ ಕ್ವಾಲಿಫಿಕೇಶನ್ ಆಕ್ಟ್ ತಿದ್ದುಪಡಿ ಮಾಡಲು ಬಯಸಿದ್ದು, ಕಾನೂನು ಸಲಹೆಗಾರರನ್ನು ಹೊರಗಿಡಲಾಗಿದೆ.
  • ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಇಲಾಖೆ ತಂದ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.
  • ಎಪಿಎಂಸಿ ಕಾನೂನನ್ನು ಪರಿಷ್ಕರಿಸಿ ಹಿಂದಿನ ಸರ್ಕಾರದವರು ಸತ್ವ ಕಳೆದಿದ್ದರು. ಆ ತಿದ್ದುಪಡಿಯನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
  • ಸಮಾಜ ಕಲ್ಯಾಣ ಇಲಾಖೆಯು ತಂದ ಪ್ರಸ್ತಾವನೆಯಂತೆ, ಪ್ರತಿ ಕಾಲೇಜು, ಶಾಲೆಯಲ್ಲಿ ಸಂವಿಧಾನ ಪೀಠಿಕೆಯನ್ನು
    ಓದಲು ತೀರ್ಮಾನ.
  • ಸಾರಿಗೆ ನಿಗಮಗಳಿಂದ ಮೋಟರ್ ಟ್ಯಾಕ್ಸ್ ಮತ್ತು ಅರಿಯರ್ಸ್ 79.85 ಕೋಟಿ ಬಾಕಿ ಇದೆ. ಅದನ್ನು ಎಕ್ಸಂಮ್ಟೆಡ್ ಮಾಡಲಾಗಿದೆ. ನಿಗಮಗಳ ಭಾರವನ್ನು ತಗ್ಗಿಸುವುದು ಉದ್ದೇಶ.
  • ಸಾರಿಗೆ ನಿಗಮಗಳು ಡಬಲ್ ಡೆಕರ್, ಎಲೆಕ್ಟ್ರಿಕ್ ವಾಹನ 28 ಕೋಟಿ ಕೊಡಲು ಅನುಮತಿ.
  • ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಶೇ. 15 ಹೆಚ್ಚಿಸಲು ಘಟನೋತ್ತರ ಅನುಮತಿ.
  • ಗೃಹ ಲಕ್ಷ್ಮೀ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಸಮಸ್ಯೆ ರಹಿತವಾಗಿ ಮಾಡಲು ಟೆಕ್ನಾಲಜಿ ಬಳಸಲು
    ತೀರ್ಮಾನ.
  • ಡಾ.ಮೈತ್ರಿ ಕೆಎಎಸ್ ಜ್ಯೂ. ಹುದ್ದೆ ಪ್ರಸ್ತಾವನೆ ಬಗ್ಗೆ ಚರ್ಚೆಯಾಗಿದ್ದು, ತಡೆ ಹಿಡಿಯಲಾಗಿದೆ.
  • 1081 ಕೋಟಿ ರೂ. ವೆಚ್ಚದಲ್ಲಿ 243 ಎಂಎಲ್ ಡಿ ವೃಷಭಾವತಿ ನದಿಯ ನೀರನ್ನು 70 ಕೆರೆ ತುಂಬಿಸುವ ಪರಿಷ್ಕೃತ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರದ ಕೆರೆ ಭರ್ತಿ ಯೋಜನೆ.
  • ವಿಪತ್ತು ನಿರ್ವಹಣೆ ಸಂಬಂಧ ನಿರ್ದೇಶನ ನೀಡಲು ಸಂಪುಟ ಉಪ ಸಮಿತಿ ರಚಿಸಲು ಒಪ್ಪಿಗೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...