ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕು ಬರಪಿಡಿತ ಎಂದು ಘೋಷಿಸಿ: ಕೇಂದ್ರ ಸಚಿವ ಖೂಬಾ

Date:

ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕುಗಳನ್ನು ಬರಪಿಡಿತ ತಾಲುಕುಗಳೆಂದು ಘೊಷಣೆ ಮಾಡಬೇಕೆಂದು ಕೇಂದ್ರ
ನೂತನ ಹಾಗು ನವೀಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಹ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಭಾಲ್ಕಿ, ಹುಲಸೂರ ಮತ್ತು ಆಳಂದ ತಾಲೂಕುಗಳನ್ನು ಮಾತ್ರ ಬರಪಿಡಿತ ಎಂದು ಘೋಷಿಸಿದರೆ ಸಾಲದು, ಉಳಿದ
ತಾಲುಕುಗಳಲ್ಲಿಯೂ ಸಹ ಮಳೆಯಾಗಿರುವುದಿಲ್ಲ, ಔರಾದ ಹಾಗೂ ಚಿಂಚೋಳಿಯಲ್ಲಂತೂ ಕುಡಿಯಲು ನೀರು ಸಹ ಸಿಗುತ್ತಿಲ್ಲಾ, ಒಟ್ಟಿನಲ್ಲಿ ಬೀದರ ಲೋಕಸಭಾ ಕ್ಷೇತ್ರದ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಆದರೆ ಜಿಲ್ಲೆಯಲ್ಲಿ ಶತ ಪ್ರತಿಷತಃ ಉಳಿಮೆಯಾಗಿದೆ, ರೈತರು ಉಳಿಮೆಗಾಗಿ ತನ್ನಲ್ಲಿದ್ದ ದುಡ್ಡನ್ನು ಖರ್ಚು ಮಾಡಿಕೊಂಡಿದ್ದಾರೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ರೈತರ ಬಳಿ ದುಡ್ಡಿಲ್ಲಾ, ಇದರ ಜೊತೆಗೆ ಪಿ.ಎಮ್.ಕಿಸಾನ್ ನಿಧಿಯಡಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಹ ಬಂದ ಮಾಡಲಾಗಿದೆ, ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಕೂಡಲೇ ಪಿ.ಎಮ್. ಕಿಸಾನ್ ನಿಧಿಯಡಿ ನೀಡಲಾಗುತ್ತಿದ್ದ 4 ಸಾವಿರ ರೂ. ಪ್ರೊತ್ಸಾಹ ಧನವನ್ನು ರೈತರ ಖಾತೆಗೆ ಜಮೆ
ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಔರಾದ್ ಸೀಮೆಯ ಕನ್ನಡ | ‘ಮಳಿ ಹೆಚ್ಚ್ ಬಿದ್ದುರ್ ಬಿ ಹೈರಾಣ್, ಕಮ್ಮಿ ಆದುರ್ ಬೀ ಕಠಿಣೇ…’

“ಬೀದರ ಲೋಕಸಭಾ ಕ್ಷೇತ್ರದ ಎಲ್ಲಾ ತಾಲೂಕುಗಳು ಬರಪಿಡಿತ ಎಂದು ಘೋಷಿಸಿ, ಪ್ರತಿ ಹೆಕ್ಟರಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು, ರೈತರ ಹಿತವನ್ನು ಕಾಪಾಡುವ ಕೆಲಸ ಮಾಡಬೇಕೆಂದು” ಸರ್ಕಾರಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...