ಕಲಬುರಗಿ ಜಿಲ್ಲೆಗೆ ಹಸಿ ಬರಗಾಲವೆಂದು ಘೋಷಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ನೀಡಿ: ಸ್ಥಳೀಯ ಸಂಘಟನೆಗಳ ಆಗ್ರಹ

Date:

ಕಲಬುರಗಿ ಜಿಲ್ಲೆಗೆ ಹಸಿ ಬರಗಾಲವೆಂದು ಘೋಷಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ಕೊಡಿ, ರೈತರ ಸಾಲ ಮನ್ನಾ ಮಾಡಿ ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತ, ದಲಿತ, ಕನ್ನಡ, ವಿದ್ಯಾರ್ಥಿ, ಮಹಿಳಾ, ಕಾರ್ಮಿಕ ಪರ ಸಂಘಟನೆಗಳ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ.

ಕಲಬುರಗಿ ನಗರದಲ್ಲಿ ಇಂದು ಮಧ್ಯಾಹ್ನ ದುಂಡು ಮೇಜಿನ ಸಭೆ ನಡಸಿ ಒಮ್ಮತವಾಗಿ ತಿರ್ಮಾನಿಸಿದ್ದು, “ನದಿಗಳು ನೀರಿನಿಂದ ಜಲಾವೃತವಾಗಿರುವ ಮುಳುಗಡೆ ಪ್ರದೇಶಕ್ಕೆ ಶಾಶ್ವತ ಪರಿಹಾರ ಮಾಡಿಕೊಡಬೇಕು. ದನಕರುಗಳು ಮೃತಪಟ್ಟ ಕುಟುಂಬಕ್ಕೆ ಪರಿಹಾರ ಕೊಡಬೇಕು. ಹಿಂಗಾರು ಬಿತ್ತನೆಗೆ ಬಿತ್ತನೆಬೀಜ, ರಸಗೊಬ್ಬರವನ್ನು ಉಚಿತವಾಗಿ ನೀಡಬೇಕು” ಎಂದು ಆಗ್ರಹಿಸಿದರು.

“ಅಕ್ಟೋಬರ್‌ 2ರಿಂದ ಕೆರಿ ಬಂಡ್ ರೊಡ್ ಜಗತ್ ಸರ್ಕಲ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿ, 13ರಂದು ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಮೇಲೆ. ಬಂಪರ್‌ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಒಂದೆಡೆ ಬರ, ಇನ್ನೊಂದೆಡೆ ನೆರೆ. ಎರಡನ್ನೂ ಪಾರಾಗಿ ಉತ್ತಮ ಬೆಳೆ ಬಂದರೂ ಕೂಡ ಸೂಕ್ತ ಬೆಲೆ ಸಿಗದೇ ರೈತ ಕಂಗಾಲಾಗುವಂತೆ ಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಲಬುರಗಿಯ ಸ್ಥಳೀಯ ಸಂಘಟನೆಗಳು

ಈ ಸುದ್ದಿ ಓದಿದ್ದೀರಾ? ಜಿಬಿಎ ವ್ಯಾಪ್ತಿಯ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ: ಅ. 8 ರಂದು ಸಿಎಂ ನೇತೃತ್ವದಲ್ಲಿ ಸಭೆ

ಭಾರತ ಜ್ಞಾನ ವಿಜ್ಞಾನ ಸಮಿತಿ(ಬಿಜಿವಿಎಸ್)‌ ಶಿವುಶರಣಪ್ಪಾ ಮುಳೆಗಾಂವ, ಎ ಬಿ ಹೊಸಮನಿ, ಅರ್ಜುನ್ ಗೊಬ್ಬುರು, ಕಲಬುರಗಿ HKCCI ಅಧ್ಯಕ್ಷ ಶರಣು ಪಪ್ಪಾ, ಕೆಪಿಆರ್‌ಎಸ್‌ ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸ್ಸಪ್ಪಾ ಮಮಶೆಟ್ಟಿ,
ರಾಜ್ಯ ರೈತ ಸಂಘ ಅಧ್ಯಕ್ಷ, ಆದಿನಾತ ಹಿರಾ ಪ್ರಗತಿ ಪರ ರೈತ ದಯಾನಂದ ಪಾಟಿಲ್, AIAWU ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಗದೀಶ್ ಪಾಟೀಲ್, ಜಗದೇವಿ ರಾಜ್ಯ ರೈತ ಸಂಘದ ಉಮಾಪತಿ ಪಾಟೀಲ್, ತೊಗರಿ ಬೆಳೆಗಾರರ ಸಂಘ ಅಧ್ಯಕ್ಷ ಬಸವರಾಜ ಇಂಗಿನ, ಎಐಕೆಎಸ್‌ ಅಧ್ಯಕ್ಷ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ರಾಜ್ಯ ರೈತ ಸಂಘ ಹಸಿರು ಸೈನ್ಯ ಕಲಬುರಗಿ ಜಿಲ್ಲಾ ಅಧ್ಯಕ್ಷ ಮಾಹಾಂತ ಗೌಡ ಪಾಟಿಲ್, ಮಂಜುಳಾ ಬಜಂತ್ರಿ, ಕನ್ನಡ ಪರ ಸಂಘಟನೆ ಅಧ್ಯಕ್ಷ ರವಿ ದೆಗಾಂವ, ದಿವ್ಯಾ ಹಾಗರಗಿ, ಕನ್ನಡ ಪರ ಸಂಘಟನೆಗಳ ಜಿಲ್ಲಾಧ್ಯಕ್ಷ ಸಂದಿಪ್ ಭರಣಿ, ಚಂದ್ರಶೇಖರ ಪಾಟಿಲ್ ಹರಸುರು, ಸಿಐಟಿಯು ಎಂ ಬಿ ಸಂಜನ, ಜೆಎಂಎಸ್‌ ಪದ್ಮಿನಿ ಕಿರಣಗಿ ಕೆಆರ್‌ಎಸ್‌ ಸಿದ್ದು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...