‘ಫ್ಯಾಸಿಸಂ’ ಸೋಲು ಜನಪರ ಚಳುವಳಿಗಳ ನಿರಂತರ ಹೋರಾಟದಿಂದ ಮಾತ್ರ ಸಾಧ್ಯ : ಚಿಂತಕ ಶಿವಸುಂದರ್

Date:

ದೇಶದಲ್ಲಿರುವ ಫ್ಯಾಸಿಸಂ ಅನ್ನು ಸೋಲಿಸಲು ಜನಪರ ಚಳುವಳಿಗಳು ಸಕ್ರಿಯವಾಗಬೇಕೆಂದು ಖ್ಯಾತ ಚಿಂತಕರಾದ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲೆ ಆಯೋಜಿಸಿದ್ದ “ಯುವ ಅಂದೋಲನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಫ್ಯಾಸಿಸಂ ಸೋಲಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಫ್ಯಾಸಿಸಂ ಮನಸ್ಥಿತಿಯನ್ನು ಹೋಗಲಾಡಿಸುವ ವ್ಯವಸ್ಥೆಯೇ ಈ ಸಮಸ್ಯೆಯ ಭಾಗವಾಗಿರುವುದು ವಾಸ್ತವಿಕತೆಯಾಗಿದ್ದು ಕಾಂಗ್ರೆಸ್ ಹೊರತಾದ ಚಳುವಳಿಯೊಂದನ್ನು ಸಕ್ರಿಯಗೊಳಿಸಬೇಕಾದ ಅಗತ್ಯವಿದೆ. ಈ ಚಳುವಳಿಗಳಿಂದ ತಕ್ಷಣ ಫಲಿತಾಂಶ ಹೊರಬಾರದಿದ್ದರೂ ದಶಕಗಳ ನಿರಂತರ ಪ್ರಯತ್ನದಿಂದ ಜನರ ಮನಸ್ಸಿನಲ್ಲಿ ಗಾಢವಾಗಿ ನೆಲೆಯೂರಿರುವ ಕೋಮುವಾದವನ್ನು ದೂರೀಕರಿಸಲು ಖಂಡಿತ ಸಾಧ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಶಕಗಳ ಹಿಂದೆ ಕನಿಷ್ಠ ವೋಟ್ ಶೇರಿಂಗ್ ಪಡೆದ ಬಿಜೆಪಿ ಇಂದು ದೇಶದಲ್ಲಿ 36 % ಮತಗಳಿಸಿದ್ದಿದ್ದರೆ ಅದರ ಹಿಂದೆ ನೂರು ವರ್ಷದ ಪರಿಶ್ರಮ ಇದೆ. ಈ ಮುಂಚೆ ಜನರ ಬಳಿ ಚಳುವಳಿಗಳು ಇದ್ದವು. ದಲಿತ ಚಳುವಳಿ, ಕಾರ್ಮಿಕ ಚಳುವಳಿ, ಮುಸ್ಲಿಮರ ವಿವಿಧ ಚಳುವಳಿಗಳು ಸಕ್ರಿಯವಾಗಿದ್ದ ಕಾರಣ ಜನ ಫ್ಯಾಸಿಸಂ ಅಜೆಂಡಾಗಳಿಗೆ ಬಲಿಯಾಗದಂತೆ ಚಳುವಳಿಗಳ ಜನರು ತಡೆಯುವಲ್ಲಿ ಸಫಲರಾಗುತ್ತಿದ್ದರು. ಇಂದು ಚಳುವಳಿಗಳ ವಿಭಜನೆ ಮತ್ತು ದುರ್ಬಲಗೊಂಡ ಕಾರಣ ಫ್ಯಾಸಿಸಂ ಬಲಿಷ್ಠವಾಗಿ ಬೆಳೆಯುತ್ತಿದೆ. ಈಗ ಫ್ಯಾಸಿಸಂನ ಹಿಂದೆ ಕಾರ್ಪೊರೇಟ್ ಶಕ್ತಿಗಳು ಕೂಡ ಇರುವುದರಿಂದ ಇದನ್ನು ಸೋಲಿಸಲು ನಿರಂತರ ಹೋರಾಟದ ಅವಶ್ಯಕತೆ ಇದೆ ಎಂದು ಹೇಳಿದರು.

ಚಿಂತಕ shiv sundar

ನಾವುಗಳು ಇಂದು ಚಳುವಳಿಗಳನ್ನು ನಮ್ಮ ಜೀವನದ ಆದ್ಯತೆ ಮಾಡಿಕೊಂಡರೆ ಭವಿಷ್ಯದ ಜನರಿಗೆ ಒಂದೊಳ್ಳೆಯ ಸಮಾಜ ನಿರ್ಮಿಸಿ, ಬಿಟ್ಟು ಹೋಗಲು ಸಾಧ್ಯವಾಗುತ್ತದೆ. ಈ ಫ್ಯಾಸಿಸಂ ಅನ್ನು ಸಂವಿಧಾನದ ಪರಿಧಿಯಲ್ಲಿ ಅರ್ಥೈಸಿಕೊಂಡು ಜನರಿಗೆ ವಿವಿಧ ಕಾರ್ಯಕ್ರಮಗಳ ಮುಖಾಂತರ ತಲುಪಬೇಕಾಗಿದೆ. ನಿರಂತರ ಸುಳ್ಳಿನಿಂದ ಜನರಲ್ಲಿ ದ್ವೇಷ ಬಿತ್ತುವ ಫ್ಯಾಸಿಸಂ ಶಕ್ತಿಗಳ ಹಾಗೆ ನಾವು ನಿರಂತರ ಸತ್ಯ ತಲುಪಿಸುವ ಮುಖಾಂತರ ಜನರ ಮನಸ್ಸು ತೆರೆಯಲು ಸಾಧ್ಯವಾಗುತ್ತದೆ. ಇವತ್ತು ದೇಶದಲ್ಲಿ ‌ಮುಸ್ಲಿಮರು ಫ್ಯಾಸಿಸ್ಟ್ ಶಕ್ತಿಗಳ ಕುರಿತು ಹೆಚ್ಚು ಅರಿವು ಮೂಡಿಸಿಕೊಂಡಿದ್ದಾರೆ. ಮುಸ್ಲಿಮೇತರರು ಈ ಕುರಿತು ಚಿಂತಿಸಿ ತಿರಸ್ಕರಿಸಬೇಕಾದ ಅಗತ್ಯವಿದೆ. ಎಲ್ಲರನ್ನೊಳಗೊಂಡ ಜನಪರ ಚಳುವಳಿಯಿಂದ ಖಂಡಿತ ಈ ಫ್ಯಾಸಿಸಂ ಅನ್ನು ಸೋಲಿಸಲು ಸಾಧ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ನಬೀಲ್ ಗುಜ್ಜರ್’ಬೆಟ್ಟು, ಶುಐಬ್ ಮಲ್ಪೆ, ಸರ್ಫರಾಜ್ ಮನ್ನಾ,ಎಸ್.ಐ.ಓನ ಆಯಾನ್ ಮಲ್ಪೆ, ಜಿ.ಐ.ಓನ ನೂಝ್ಲಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...