ಮೈಸೂರು | ನಿಝಾಮಿಯಾದಲ್ಲಿ ಪದವಿ, ಬಿಎಡ್ ಪ್ರಾರಂಭಕ್ಕೆ ಚಿಂತನೆ : ಶಾಸಕ ತನ್ವಿರ್ ಶೇಠ್

Date:

ಮೈಸೂರು ನಗರದ ಅಶೋಕಾ ರಸ್ತೆಯಲ್ಲಿರುವ ನಿಝಾಮಿಯಾ ಶಾಲಾ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಾಂಪೌಂಡ್ ಮತ್ತು ಸೈಕಲ್ ಸ್ಟ್ಯಾಂಡ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ತನ್ವಿರ್ ಶೇಠ್ ಶತಮಾನೋತ್ಸವ ಪೂರೈಸಿರುವ ನಿಝಾಮಿಯಾ ಶಾಲೆಯಲ್ಲಿ ಪದವಿ ಮತ್ತು ಬಿಎಡ್ ಪ್ರಾರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರೆ ಶಾಲಾ ದಾಖಲಾತಿ ಹೆಚ್ಚಿಸಬಹುದು. ಇದರಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

ನರಸಿಂಹರಾಜ ಕ್ಷೇತ್ರದಲ್ಲಿ ಒಟ್ಟು 71 ಸರ್ಕಾರಿ ಶಾಲೆಗಳಿವೆ, ಈ ಪೈಕಿ 36 ಶಾಲೆಗಳ ದಾಖಲಾತಿ ಇಲ್ಲ, ಶಾಂತಿನಗರ ಮತ್ತು ಗೌಸಿಯಾನಗದಲ್ಲಿ ಈ ಸಮಸ್ಯೆ ಇದೆ. ದಾನಿಗಳು ಕೊಟ್ಟ ಜಾಗದಲ್ಲಿ ಶಾಲೆ ನಿರ್ಮಿಸಲಾಗಿದೆ. ಇಂತಹ ಶಾಲೆಗಳ ದಾಖಲಾತಿಗಳನ್ನು ಜಿಲ್ಲಾಡಳಿತ ಪರಿಶೀಲಿಸಿ ಸರಿಪಡಿಸಿಕೊಡಬೇಕು. ಇದರಿಂದ ಇವುಗಳು ಸರ್ಕಾರಿ ಆಸ್ತಿಗಳಾಗಿ ಉಳಿಯುತ್ತವೆ. ಅಲ್ಲದೇ, ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಕೆಲವು ಶಾಲೆಗಳಿಗೆ ಬಾಕಿ ಬಿಲ್ ಬರುತ್ತಿದೆ. ಜಿಲ್ಲಾಧಿಕಾರಿಗಳು ಅದನ್ನು ಸೆಸ್ಕ್ ಇಲಾಖೆಯ ಸಭೆಯಲ್ಲಿ ಮಾತನಾಡಿ ಸರಿಪಡಿಸಿಕೊಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಗಳಿಗೆ ಉಚಿತವಾಗಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಮತ್ತು ಸರ್ಕಾರಿ ಶಾಲೆಗಳ ಶೌಚಾಲಯಗಳ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಸಂಸ್ಥೆ ವಹಿಸಿಕೊಳ್ಳಬೇಕೆಂದು ಕೋರಿದರು. ಇಂತಹ ಮೂಲಭೂತ ಸೌಲಭ್ಯಗಳನ್ನು ನಾವುಗಳು ಒದಗಿಸಿದರೆ ಸರ್ಕಾರಿ ಶಾಲೆಗಳ ದಾಖಲಾತಿಯೂ ಹೆಚ್ಚುತ್ತದೆ. ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಿದಂತಾಗುತ್ತದೆ ಎಂದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಮಾತನಾಡಿ, ‘ಎನ್‌ಆರ್ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಫಂಡ್ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಮೈಸೂರು ಮಹಾನಗರಪಾಲಿಕೆ ಆಯಕ್ತ ಷೇಕ್ ತನ್ವೀರ್ ಆಸೀಫ್ ಮಾತನಾಡಿ ‘ಶಾಲೆಗಳ ಶೌಚಾಲಯದ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಳ್ಳುವುದಾಗಿ’ ಹೇಳಿದರು. ಡಿಡಿಪಿಐ ಜವರೇಗೌಡ ಮಾತನಾಡಿ, ‘ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಲು ಸರ್ವ ಪ್ರಯತ್ನ ಮಾಡಲಾಗುವುದು’ ಎಂದರು

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=A4kqUxXWMIw

ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ “ನಿಝಾಮಿಯಾ ಶಾಲೆಗೆ ನಾನು ನಾಲ್ಕು ಬಾರಿ ಭೇಟಿ ನೀಡಿದ್ದೇನೆ. ಪ್ರತಿಯೊಂದು ಭೇಟಿ ಸಂದರ್ಭದಲ್ಲೂ ಶಾಲೆಯ ಸೊಬಗು ಹೆಚ್ಚುತ್ತಿದೆ, ಶಾಸಕರಾದ ತನ್ವೀರ್ ಸೇಠ್ ಅವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳಿಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತದೆ” ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಂಡ್ಯ | ‘ಸ್ವರಾಜ್ ಉತ್ಸವ’ : ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ

ಕಾರ್ಯಕ್ರಮದಲ್ಲಿ ಡಿಡಿಪಿಯು ನಾಗಮ್ಮ, ಕೆಆರ್‌ಐಡಿಎಲ್ ಇಂಜಿನಿಯರ್ ಶೋಭಾ, ಶಿಲ್ಪ, ಬಿಇಓ ರೇವಣ್ಣ, ಶಿಕ್ಷಣ ತಜ್ಞ ನಬೀಜಾನ್, ಸ್ಥಳೀಯ ಮುಖಂಡರಾದ ಖಲೀಲ್ ಉರ್ ರಹಮಾನ್, ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್, ನಸೀರುದ್ದೀನ್ ಬಾಬು, ನಿವೃತ್ತ ಡಿಡಿಪಿಐ ರುಕ್ಸಾನಾ ನಾಝನೀನ್, ಕಾಂಗ್ರೆಸ್ ಲೇಬರ್‌ಸೆಲ್ ವಿಭಾಗದ ಅಧ್ಯಕ್ಷ ಮೊಹಮ್ಮದ್ ಶಿಫ್ಟನ್, ಅಫ್ರೋಜ್ ಖಾನ್, ಸೈಯದ್ ಫಾರೂಖ್, ಇಲ್ಯಾಸ್ ಅಹಮದ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...