ಚಿತ್ರದುರ್ಗ | ಬೆಂಬಲ ಬೆಲೆ ರಾಗಿ ಖರೀದಿ ಹಣ ಪಾವತಿ ವಿಳಂಬ; ರೈತ ಸಂಘ ಆಕ್ರೋಶ

Date:

  • ಒಬ್ಬ ರೈತನಿಂದ 20 ಕ್ವಿಂಟಲ್ ರಾಗಿ ಖರೀದಿ ಮಾಡಿದೆ
  • ಎರಡು ದಿನಗಳಲ್ಲಿ ನೀಡದಿದ್ದಲ್ಲಿ ಕಚೇರಿಗೆ ಮುತ್ತಿಗೆ

ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರಾಗಿ ಖರೀದಿಸಿ ತಿಂಗಳುಗಳೇ ಕಳೆದಿದ್ದರು ಇನ್ನೂ ಹಣ ಬಂದಿಲ್ಲ. ರಾಗಿ ನೀಡಿದ ನಂತರ ನೀಡುವ ವೋಚರ್ (ರಾಗಿ ಮಾರಾಟದ ಬಿಲ್ ಹಣದ ವಿವರ) ಬದಲಿಗೆ ಬಿಳಿ ಹಾಳೆಯಲ್ಲಿ ಮಾಹಿತಿ ಬರೆದಿದ್ದಾರೆ ಎಂದು ರೈತ ಸಂಘದ ಹೊಸದುರ್ಗ ತಾಲೂಕಿನ ಗೌರವಾಧ್ಯಕ್ಷ ಮಹೇಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಸರ್ಕಾರ ಒಬ್ಬ ರೈತನಿಂದ 20 ಕ್ವಿಂಟಲ್ ರಾಗಿ ಖರೀದಿ ಮಾಡಿದೆ. ಖರೀದಿಯಾಗಿ ಒಂದೆರಡು ದಿನದಲ್ಲಿ ಗ್ರೆನ್‌ ವೋಚರ್ ನೀಡುವ ಬದಲಾಗಿ ಕೆಲ ರೈತರಿಗೆ ಖಾಲಿ ಹಾಳೆಯಲ್ಲಿ ವಿವರ ಬರೆದು ಕೊಟ್ಟಿದ್ದಾರೆ. ಗ್ರೆನ್ ವೋಚರ್ ಇಲ್ಲದಿದ್ದರೆ, ನಾವು ರಾಗಿ ಮಾರಾಟ ಮಾಡಿದ್ದಕ್ಕೆ ಖಾತ್ರಿಯೇ ಇಲ್ಲದಂತಾಗುತ್ತದೆ. ಸಾಲದ್ದಕ್ಕೆ ಒಂದು ಕ್ವಿಂಟಲ್ ರಾಗಿಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕ ಕೆ ಆರ್ ಶಿವಕುಮಾ‌ರ ಅವರು ತುಮಕೂರಿಗೆ ವರ್ಗಾವಣೆ ಯಾಗಲಿದ್ದಾರೆ. ಹೊಸದುರ್ಗದ ರೈತರಿಗೆ ರಾಗಿ ಖರೀದಿ ಹಣ ಒದಗಿಸಿ ನಂತರ ಅವರು ವರ್ಗಾವಣೆಯಾಗಲಿ. ಮುಂಗಾರು ಸಮಯವಾದರೂ ರಾಗಿ ಹಣ ಬಂದಿಲ್ಲ. ಇದರಿಂದ ಉಳುಮೆಗೆ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಹಲವು ಕಾರ್ಯಗಳಿಗೆ ಹಣಕಾಸಿನ ತೊಡಕು ಉಂಟಾಗಿದೆ. ಖಾಸಗಿ ದಲ್ಲಾಳಿಗಳಿಗೆ ರಾಗಿ ನೀಡಿದ್ದರೂ ಇಷ್ಟರಲ್ಲಾಗಲೇ ಹಣ ಸಿಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಗಿ ಖರೀದಿಯ ಅನುಸಾರ ಇನ್ನೆರಡು ದಿನಗಳಲ್ಲಿ ಗ್ರೆನ್ ವೋಚರ್ ನೀಡದಿದ್ದಲ್ಲಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಲಿನ ದರ ಕಡಿತ ಮಾಡದಂತೆ ಕೆಎಂಎಫ್‌ಗೆ ಸೂಚನೆ

ಈ ಬಗ್ಗೆ ಆಹಾರ ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕ ಕೆ ಆರ್ ಶಿವಕುಮಾರ ಪ್ರತಿಕ್ರೀಯಿಸಿದ್ದು, ಮಾರ್ಚ್ ತಿಂಗಳಲ್ಲಿ ರಾಗಿ ಮಾರಾಟ ಮಾಡಿದವರಿಗೆ ಈಗಾಗಲೇ ಹಣ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ರೈತರಿಗೂ ಹಣ ನೀಡಲಾಗುತ್ತದೆ. ಗ್ರೆನ್ ವೋಚರ್ ಅನ್ನು ಬರುವ ಗುರುವಾರ ನೀಡಲಾಗುತ್ತದೆ. ರೈತರು ಅಂದು ಗ್ಲೆನ್ ವೋಚರ್ ಪಡೆಯಬಹುದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...