ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸ್ಥಳಕ್ಕೆ ದೆಹಲಿ ರೈತ ಹೋರಾಟಗಾರರ ಭೇಟಿ, ಚರ್ಚೆ

Date:

ದೇಶಾದ್ಯಂತ ಎಲ್ಲೆಡೆ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡುತ್ತಿದ್ದಾರೆ. ಭೂಮಿಗಾಗಿ ಕೃಷಿಕರನ್ನು ಶೋಷಣೆ ಮಾಡುತ್ತಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟವೂ ಎಲ್ಲರಿಗೂ ಮಾದರಿಯಾಗಿದೆ ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್ ಸಿಂಗ್‌ ಧಲ್ಲೇವಾಲ್‌ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, “ಇಷ್ಟು ದೀರ್ಘಾವಾಗಿ ಹೋರಾಟ ಮಾಡುತ್ತಿರುವ ಅನ್ನದಾತರ ಒಗ್ಗಟ್ಟೂ ಅನುಕರಣೀಯ” ಎಂದರು.

“ಪ್ರತಿ ವರ್ಷ ಭೂಮಿಯ ಬೆಲೆ ಹೆಚ್ಚುತ್ತಿದೆ. ಅದರ ಉಪಯೋಗವನ್ನು ಪಡೆಯಲು ಬಲಾಢ್ಯರು ಪ್ರಯತ್ನ ಮಾಡುತ್ತಿದ್ದಾರೆ. ಭೂಮಿ ಕೇಲವ ತಾಯಿ ಮಾತ್ರವಲ್ಲ, ನಮ್ಮ ಮನೆಯಲ್ಲಿರುವ ಹೆಣ್ಣು ಮಗಳಾಗಿದ್ದು, ಆಕೆಯನ್ನು ಕಳೆದುಕೊಂಡರೆ ನಮ್ಮ ಗೌರವನ್ನೇ ಕಳೆದುಕೊಂಡಂತೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೈಸರ್ಗಿಕ ಸಂಪನ್ಮೂಲಗಳನ್ನು ಕಾ‌ರ್ಪೊರೇಟ್‌ಗಳು ವಶಪಡೆಸಿಕೊಳ್ಳಲು ಸರ್ಕಾರದ ಮೂಲಕ ಯತ್ನಿಸುತ್ತಿದ್ದಾರೆ. ಕೃಷಿ ಭೂಮಿಯ ಮಾಲೀಕರನ್ನು ಕಾರ್ಪೊರೇಟ್‌ ಜೀತದಾಳುಗಳ ಮಾಡುವ ಈ ಷ್ಯಡಂತ್ರವನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಿದೆ’ ಎಂದು ಆಗ್ರಹಿಸಿದರು.

“ಭೂಮಿಯನ್ನು ನಂಬಿ ಬದುಕಿರುವ ರೈತರನ್ನು ಸಾವಿರಾರು ವರ್ಷಗಳಿಂದ ಭೂತಾಯಿಯೂ ಸಲಹುತ್ತಿದ್ದಾಳೆ. ಕುಟುಂಬವೆಲ್ಲ ಸೇರಿ ಸಂತೃಪ್ತವಾಗಿ ಬದುಕುತ್ತಿದ್ದೇವೆ. ಅಂತಹ ಮಹತ್ವದ ಜೀವನವನ್ನು ಕಸಿಯಲು ಯತ್ನಿಸುತ್ತಿರುವವರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಬೇಕು” ಎಂದು ಕರೆ ನೀಡಿದರು.

“ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷಗಳು ಅಧಿಕಾರದಲ್ಲಿದ್ದರೂ ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಭೂಮಿಯನ್ನು ಕಾರ್ಪೊರೇಟ್‌ಗಳಿಗೆ ನೀಡಲು ಭೇದ ಭಾವವಿಲ್ಲದೆ ಎಲ್ಲ ರಾಜಕೀಯ ಪಕ್ಷಗಳೂ ಕೂಡ ಮುಂದಾಗಿವೆ. ಯಾವ ಪಕ್ಷವನ್ನೂ ರೈತರು ನಂಬಕೂಡದು” ಎಂದು ಕಿವಿಮಾತು ಹೇಳಿದರು.

‘ಅಭಿವೃದ್ಧಿ ಹೆಸರಿನಲ್ಲಿ ವಿನಾಶ ಮಾಡುತ್ತಿದ್ದಾರೆ’

ರೈತರ ಭೂಮಿಯನ್ನು ಅಭಿವೃದ್ಧಿಗಾಗಿ ಭೂ ಸ್ವಾಧೀನ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ, ಇದು ನಿಜವಾದ ವಿನಾಶವಾಗಿದೆ. ಅದು ಅಭಿವೃದ್ಧಿಯಲ್ಲ, ಸಾವಿರಾರು ರೈತ ಕುಟುಂಬವನ್ನು ಹಾಳುಮಾಡುತ್ತಿದ್ದಾರೆ. ಸರ್ಕಾರ ಏಕೆ ಮಾಡಬೇಕು ನಮ್ಮ ಭೂಮಿಗಳನ್ನು ನಾವೇ ಅಭಿವೃದ್ಧಿ ಮಾಡೋಣ, ಕೃಷಿ ಕ್ಷೇತ್ರದಲ್ಲಿಯೇ ಅಭಿವೃದ್ಧಿಪಡಿಸೋಣ. ಸರ್ಕಾರದವರು ಬಂದಿರುವುದು ರೈತರಿಗೆ ಮೋಸ ಮಾಡಿ ಇಲ್ಲಿನ ನೈಸರ್ಗಿಕ ಸಂಪನ್ಮೂಲವನ್ನು ವಶಪಡಿಸಲು ಬಂದಿದ್ದಾರೆ. ಕಾರ್ಪೊರೇ ರೆಟ್‌ಗಳಿಗೆ ಅವರು ಸಹಕಾರ ನೀಡಿದದೆ ನಮ್ಮ ಹೋರಾಟ ನಿರಂತರವಾಗಿರಬೇಕು. ಸರ್ಕಾರದ ಅಸ್ತಿತ್ವವನ್ನು ಬುಡಮೇಲು ಮಾಡಲು ಮುಂದಾಗಬೇಕು” ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್ ಸಿಂಗ್‌ ಧಲ್ಲೇವಾಲ್‌ ತಿಳಿಸಿದರು.

ಇದನ್ನೂ ಓದಿದ್ದೀರಾ? ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಧರಣಿ ಸ್ಥಳಕ್ಕೆ ದೆಹಲಿ ರೈತ ಹೋರಾಟದ ಮುಖಂಡರು ಭೇಟಿ ನೀಡಿ ಚರ್ಚಿಸಿ, ಬೆಂಬಲ ವ್ಯಕ್ತಪಡಿಸಿದರು.

ಇದೇ ವೇಳೆ ಬಲದೇವ್ ಸಿಂಗ್ ಸಿರ್ಸಾ, ರಾಮ್ ಗೌಂಡರ್, ಸತ್ನಾಮ್ ಸಿಂಗ್ ಬೆಹ್ರು, ಅಭಿಮನ್ಯು ಕೊಹರ್, ಮನ್ಪ್ರೀತ್ ಬಾತ್, ವೆಂಕಟೇಶ್ವರ ರಾವ್, ಸಂದೀಪ್ ಸಿಂಗ್, ಹರ್ಪಾಲ್ ಚೌಧರಿ, ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯರು, ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...