ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು ಹೆಚ್ಚಳಕ್ಕೆ ಆಗ್ರಹ

Date:

  • ಒಳಮೀಸಲಾತಿ ವರ್ಗೀಕರಣದಲ್ಲಿ ಶೇ. 1ರಷ್ಟು ಮೀಸಲಾತಿ ನೀಡಿರುವುದು ಅವೈಜ್ಞಾನಿಕ
  • ಅಲೆಮಾರಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಅಲೆಮಾರಿ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ. 2ಕ್ಕೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಎಸ್‌ಸಿ – ಎಸ್‌ಟಿ ಅಲೇಮಾರಿ ಬುಡಕಟ್ಟು ಮಹಾಸಭ ಮತ್ತು ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ನೇತೃತ್ವದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಕುರಿತು ರಾಜ್ಯ ಎಸ್‌ಸಿ – ಎಸ್‌ಟಿ ಅಲೇಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಕಾರ್ಯಾಧ್ಯಕ್ಷ ವಿ ಸಣ್ಣ ಅಜ್ಜಯ್ಯ ಈದಿನ.ಕಾಮ್ ಜೊತೆಗೆ ಮಾತನಾಡಿ, “ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ಶಿಫಾರಸ್ಸಿನಂತೆ ಎಸ್‌ಸಿ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವಂತೆ ದಶಕಗಳ ಕಾಲ ನಡೆಸಿದ ಹೋರಾಟಕ್ಕೆ ಸ್ಪಂದಿಸಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವುದು ಅಭಿನಂದನೀಯ” ಎಂದರು.

“ಆದರೆ, ಇದುವರೆಗೂ ಸಮಾಜದ ಮುಖ್ಯ ವಾಹಿನಿಯಿಂದ ವಂಚಿತವಾಗಿ ಗುಡಿಸಲುಗಳಲ್ಲಿ ವಾಸಿಸುತ್ತಾ ಧಾರ್ಮಿಕ ಭಿಕ್ಷಾಟನೆ ಮೂಲಕ ಜೀವನ ಸಾಗಿಸುತ್ತಿರುವ, ಇದುವರೆಗೂ ಶಾಲೆಯ ಮುಖವನ್ನೇ ನೋಡದ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೀಗೆ ಯಾವುದೇ ದಾಖಲೆಗಳಿಲ್ಲದೆ, ವಿಳಾಸವಿಲ್ಲದೆ, ಶಿಕ್ಷಣವಿಲ್ಲದೆ ಊರಿಂದ ಊರಿಗೆ ಅಲೆಯುವ ಅಲೆಮಾರಿ ಮತ್ತಿತರ ಸಮುದಾಯಗಳೆಂದು 4ನೇ ವರ್ಗದಲ್ಲಿ ಗುರುತಿಸಿ ಕೇವಲ ಶೇ. 1 ರಷ್ಟು ಮೀಸಲಾತಿ ನೀಡಿರುವುದು ಅತ್ಯಂತ ಅವೈಜ್ಞಾನಿಕ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೀಸಲಾತಿ ರದ್ದು ವಿರೋಧಿಸಿ ಬೀದಿಗಿಳಿದ ಮುಸ್ಲಿಮ್ ಮುಖಂಡರು

“ಪರಿಶಿಷ್ಟ ಜಾತಿಗೆ ಇದ್ದ ಶೇ. 15ರಷ್ಟು ಮೀಸಲಾತಿಯನ್ನು ಶೇ. 17ಕ್ಕೆ ಹೆಚ್ಚಿಸಲಾಗಿದೆ. ಕೇವಲ ಜನ ಸಂಖ್ಯೆ ಆಧಾರದ ಮೇಲೆ ಮೀಸಲಾತಿ ವರ್ಗೀಕರಣ ಮಾಡದೆ, ಇದುವರೆಗೂ ಯಾವ ವರ್ಗಗಳು ಈ ಶೇ. 15ರಷ್ಟು ಮೀಸಲಾತಿಯನ್ನು ಬಳಸಿಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಮಾಜಿಕವಾಗಿ ಅಭಿವೃದ್ಧಿ ಹೊಂದಿವೆಯೋ ಅಂತಹ ಜಾತಿಗಳಿಗೆ ಸ್ವಲ್ಪ ಕಡಿಮೆ ಮೀಸಲು ನೀಡಿ, ಇದುವರೆಗೂ ಮೀಸಲಾತಿ ವಂಚಿತರಾಗಿರುವ ಹಿಂದುಳಿದ ಅಲೆಮಾರಿ ಮತ್ತಿತರ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳೆಂದು ಗುರುತಿಸಿ ಶೇ. 1 ಮೀಸಲಾತಿ ನೀಡಿರುವುದು ಮೂಗಿಗೆ ತುಪ್ಪ ಸವರಿದಂತಿದೆ” ಎಂದು ದೂರಿದರು.

“ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕೆಂದರೆ ಕನಿಷ್ಠ ಶೇ. 2ರಷ್ಟು ಮೀಸಲಾತಿ ನೀಡಬೇಕು. ಅಲೆಮಾರಿಗಳ ಧ್ವನಿ ಕೇಳದೆ ಕಡೆಗಣಿಸಿದರೆ ಮುಂದೆ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಮುಖಂಡರಾದ ಸಣ್ಣ ಮಾರೆಪ್ಪ, ಕಿನ್ನರಿ ಶೇಕಪ್ಪ, ಭದ್ರಿ, ಗಾಳೆಪ್ಪ, ಶಿವಕುಮಾರ್, ಹನುಮಂತ, ಪಕ್ಕೀರಪ್ಪ ಬಾದಿಗಿ, ಬಾಲಾಜಿ, ರಾಜಕುಮಾರ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...