ಉತ್ತರ ಕನ್ನಡಕ್ಕೆ ‘ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ’ಗಾಗಿ ಬೇಡಿಕೆ; ರಕ್ತದಲ್ಲಿ ಪತ್ರ ಅಭಿಯಾನ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಸೌಲಭ್ಯ ಹೊಂದಿರುವ ಸುಸಜ್ಜಿತ ಆಸ್ಪತ್ರೆಯಿಲ್ಲ. ಜಿಲ್ಲೆಗೆ ಸರ್ಕಾರಿ ‘ಮಲ್ಟಿಸ್ಪಷಾಲಿಟಿ ಆಸ್ಪತ್ರೆ’ ಬೇಕು. ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಜನರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಅವರ ಬೇಡಿಕೆ ಹಾಗೆಯೇ ಉಳಿದುಹೋಗಿದೆ. ಇದೀಗ, ತಮ್ಮ ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲೆಯ ಜನರು ಮುಖ್ಯಮಂತ್ರಿಗಳಿಗೆ ‘ರಕ್ತದಲ್ಲಿ ಪತ್ರ’ ಅಭಿಯಾನ ಆರಂಭಿಸಿದ್ದಾರೆ.

ಭಟ್ಕಳ ಮೂಲದ ಮಸ್ತಾಪ್ಪ ನಾಯ್ಕ್ ಬೆಳಸೆ ನೇತೃತ್ವದ ತಂಡವು ರಕ್ತದಲ್ಲಿ ಪತ್ರಗಳನ್ನು ಬರೆದು ಮುಖ್ಯಮಂತ್ರಿಗಳಿಗೆ ಕಳಿಸುವ ಅಭಿಯಾನ ಆರಂಭಿಸಿದೆ. “ಜಿಲ್ಲೆಯು ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿದೆ. ಜಿಲ್ಲೆಯ ಜನರು ಸುಸಜ್ಜಿತ ವೈದ್ಯಕೀಯ ಸೇವೆ ಸಿಗದ ತತ್ತರಿಸಿದ್ದಾರೆ. ಉನ್ನತ ಚಿಕಿತ್ಸೆಗಾಗಿ ನೂರಾರು ಕಿ.ಮೀ. ಪ್ರಯಾಣಿಸಬೇಕಾದ ದುಸ್ಥಿತಿ ಇದೆ. ಪರಿಣಾಮ, ಹಲವರು ಜೀವ ಕಳೆದುಕೊಂಡಿದ್ದಾರೆ. ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಗತ್ಯಗತ್ಯ” ಎಂದು ಒತ್ತಾಯಿಸಿದ್ದಾರೆ.

“ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನೀಡಿ, ಇಲ್ಲವೇ ದಯಾಮರಣ ಕೊಡಿ ಎಂಬ ಘೋಷಣೆಯೊಂದಿಗೆ ಪತ್ರ ಬರೆಯುತ್ತಿದ್ದೇವೆ. ಜಿಲ್ಲೆಯ ಸುಮಾರು 7 ಲಕ್ಷ ಜನರು ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಿದ್ದಾರೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲೂ ಪತ್ರ ಅಭಿಯಾನ ಆರಂಭವಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...