ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

Date:

  • ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
  • ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ

ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಸಿಂಧನೂರು ಪ್ರಗತಿಪರ ಒಕ್ಕೂಟ ಒತ್ತಾಯಿಸಿದೆ.

ನಗರದ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆ ಕೂಗಿ ಸಿಂಧನೂರು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿ.ಎಚ್. ಕಾಂಬ್ಳಿ, “ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ನಾಪತ್ತೆಯಾಗಿ ಮರುದಿನ ಶವವಾಗಿ ಪತ್ತೆಯಾಗಿದ್ದಳು. ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದ ಸಿಬಿಐ, ಆರೋಪಿ ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿ 11 ವರ್ಷಗಳ ನಂತರ ಆತನನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿದೆ. ಆದರೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ನಿಜವಾದ ಆರೋಪಿಗಳು ಯಾರು ಎನ್ನುವುದು ಇಲ್ಲಿಯವರೆಗೂ ಪತ್ತೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೌಜನ್ಯ ಪೋಷಕರು, ಮಾವ ಸೇರಿದಂತೆ ಸಂಬಂಧಿಕರೆಲ್ಲರೂ ಪೊಲೀಸರು, ಸಿಐಡಿ ಹಾಗೂ ಸಿಬಿಐ ತನಿಖಾಧಿಕಾರಿಗಳ ಮುಂದೆ ತಮಗೆ ಸಂಶಯವಿರುವ ಆರೋಪಿಗಳನ್ನು ಹೆಸರಿಸಿದ್ದು, ಆದರೆ ಸಿಬಿಐ ಅವರ ಹೆಸರುಗಳನ್ನು ಪ್ರಸ್ತಾಪಿಸದೇ ನೆಪಮಾತ್ರಕ್ಕೆ ನಿರಪರಾಧಿ ವ್ಯಕ್ತಿಯೊಬ್ಬರನ್ನು ಪ್ರಕರಣದಲ್ಲಿ ಸಿಲುಕಿಸಿ, ಪ್ರಭಾವಿಗಳಾದ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ” ಎಂದು ಅವರು ಕಾಂಬ್ಳಿ ಆರೋಪಿಸಿದರು ..

“ಸಿಬಿಐನ ಈ ಲೋಪವನ್ನು ರಾಜ್ಯ ಹೈಕೋರ್ಟ್ ಬಲವಾಗಿ ಟೀಕಿಸಿದ್ದು, ಛೀಮಾರಿ ಹಾಕಿದೆ. ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ 40ಕ್ಕೂ ಅಧಿಕ ಅತ್ಯಾಚಾರ, ಕೊಲೆ, ಅಪಹರಣ, ಅಸಹಜ ಸಾವು ಮುಂತಾದ ಹಲವಾರ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಅಲ್ಲಿ ನಡೆದಿರುವ ಯಾವ ಪ್ರಕರಣದಲ್ಲೂ ಅಪರಾಧಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಿದ ಉದಾಹರಣೆಗಳಿಲ್ಲ. ಬದಲಿಗೆ ಆರೋಪಿಗಳಿಗೆ ಪೊಲೀಸರೇ ರಕ್ಷಣೆ ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಈ ಎಲ್ಲದರ ಸುತ್ತ ಅಲ್ಲಿನ ಬಲಿಷ್ಠ ಪಟ್ಟಭದ್ರ ಶಕ್ತಿಗಳು ಇರುವ ಅನುಮಾನವನ್ನು ಬಾಧಿತರ ಕುಟುಂಬಗಳು ವ್ಯಕ್ತಪಡಿಸಿವೆ. ಈ ಹಿಂದೆ ಅಲ್ಲಿ ನಡೆದ ವೇದವಲ್ಲಿ ಟೀಚರ್ ಅತ್ಯಾಚಾರ ಕೊಲೆ ಪ್ರಕರಣ, ಪದ್ಮಲತಾಳ ಅಪಹರಣ ಮತ್ತು ಕೊಲೆಗಳಲ್ಲೂ ನಿಜವಾದ ಅಪರಾಧಿಗಳನ್ನು ಬಂಧಿಸಲಾಗಿಲ್ಲ” ಎಂದು ಅವರು ಕಾಂಬ್ಳಿ ಕಿಡಿಕಾರಿದರು.

ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರುತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಸೌಜನ್ಯಳ ಕೊಲೆಗೆ ಸಂಬಂಧಿಸಿ ಅಲ್ಲಿಯ ಪ್ರಭಾವಿ ಧಾರ್ಮಿಕ ಕುಟುಂಬದ ಮುಖಂಡರೇ ಭಾಗಿಯಾಗಿದ್ದಾರೆ ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡಾ. ಜಯಪ್ರಕಾಶ ಬೆಟ್ಟದೂರು ಮೇಲೆ ಹಾಡಹಗಲೆ ಗುಂಡಿನ ದಾಳಿ

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ್ ಬಾದರ್ಲಿ, ಸಮದ ಚೌದ್ರಿ, ಜಮಾತ್ ಮುಖಂಡ ಹುಸೇನ್ ಸಾಬ್, ಮರಿಯಮ್ಮ ಪರಶುರಾಮ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...