ಕಲಬುರಗಿ | ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹ

Date:

ಸರ್ಕಾರಿ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಬಿಡುಗಡೆ ಹಾಗೂ ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಸಮಿತಿಯಿಂದ ಕಲಬುರಗಿ ನಗರದ ಸಮಾಜ ಕಲ್ಯಾಣ ಇಲಾಖೆ ಎದುರಗಡೆ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಕಾಶಿನಾಥ ಬಂಡಿ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸೇರಿದಂತೆ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಇಂದಿರಾ ಗಾಂಧಿ, ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಹೊರಗುತ್ತಿಗೆ ನೌಕರರಿಗೆ ಸಕಾಲಕ್ಕೆ ವೇತನ ನೀಡದೇ ಬಾಕಿ ವೇತನ ಸಂದಾಯವಾಗದ ಪರಿಣಾಮ ನೌಕರರು ವೇತನಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ನೀಡುವ ಏಜೆನ್ಸಿಯವರು ಕಳೆದ ಮೂರು ವರ್ಷಗಳಿಂದ ಸರ್ಕಾರದ ಆದೇಶದಂತೆ ವೇತನ ಪಾವತಿಸದೇ ತಿಂಗಳಿಗೆ ಪ್ರತಿ ಸಿಬ್ಬಂದಿಗೆ 1 ಸಾವಿರ ರೂ. ವೇತನ ಕಡಿತಗೊಳಿಸುತ್ತಾರೆ. ಪಿಎಫ್‌, ಇಎಸ್‌ಐ ನೀಡುವಲ್ಲಿ ಮೋಸ ಮಾಡಿದ್ದಾರೆ. ಈ ಬಗ್ಗೆ 150 ಜನ ಸಿಬ್ಬಂದಿಯ ಬ್ಯಾಂಕ್‌ ಖಾತೆಯ ವಿವರವನ್ನು ಇಲಾಖೆಯ ಜಂಟಿ ನಿರ್ದೇಶಕರಿಗೆ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ” ಎಂದು ಆರೋಪಿಸಿದರು.

ಹಾಸ್ಟಲ್ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿಸಬೇಕು. 2024ರ ಏ.1 ರಿಂದ ಸರಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡಬೇಕು. ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಹಾಗೂ ಪಿಎಫ್‌, ಇಎಸ್‌ಐ ನೀಡದ ಏಜೆನ್ಸಿ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು ಮತ್ತು ಈಗಾಗಲೇ ಕ್ರೈಸ್ ವಸತಿ ನಿಲಯಗಳಿಗೆ ವೇತನ ಪಾವತಿಸಲು ಜಾರಿಯಾದ ಹೊಸ ಆದೇಶ ರದ್ದುಪಡಿಸಿ ಪುನಃ ಟೆಂಡರ್ ಕರೆಯಬೇಕು. ಐದು ವರ್ಷಗಳಿಂದ ಕೆಲಸ ಮಾಡುತ್ತಿರುವ ಯಾವುದೇ ಸಿಬ್ಬಂದಿಗಳಿಗೆ ಕೆಲಸದಿಂದ ತೆಗೆಯಬಾರದು. ವಾರಕ್ಕೊಂದು ರಜೆ ತಪ್ಪದೆ ಕೊಡುವುದು ಸೇರಿದಂತೆ ಹತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ʼಗೃಹಲಕ್ಷ್ಮಿʼಯಿಂದ ಬಂತು ಸಕ್ಕುಬಾಯಿಗೆ ʼದೃಷ್ಟಿಭಾಗ್ಯʼ

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಮೇಘರಾಜ ಕಠಾರೆ, ಸಹ ಕಾರ್ಯದರ್ಶಿ ಸುರೇಶ ದೊಡ್ಡಮನಿ, ಆಳಂದ ತಾಲೂಕಾಧ್ಯಕ್ಷೆ ನಾಗರತ್ನ ಮದನಕರ್, ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಕಮಕನೂರ, ಅಫಜಲಪೂರ ತಾಲೂಕು ಅಧ್ಯಕ್ಷ ಬಾಬು ಹೊಸಮನಿ , ಚಿತ್ತಾಪೂರ ತಾಲೂಕು ಅಧ್ಯಕ್ಷ ರವಿಚಂದ್ರ ಯರಗೋಳ, ಕಾಳಗಿ ತಾಲೂಕು ಅಧ್ಯಕ್ಷ ನಾಗರಾಜ ಕಟ್ಟಿಮನಿ ಸೇರಿದಂತೆ ಮಾಪಣ್ಣಾ ಜಾನಕರ್, ಪರಸುರಾಮ ಹಡಗಲಿ, ಶಿವರಾಜ್ ಸೇಡಂ, ಪರಶುರಾಮ್ ಹಡಗಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...