ರಾಯಚೂರು | ಎಂ ಈರಣ್ಣ ವೃತ್ತದಲ್ಲಿ ತರಕಾರಿ ವ್ಯಾಪಾರ ತೆರವಿಗೆ ಆಗ್ರಹ

Date:

ನಗರದ ಎಂ.ಈರಣ್ಣ ವೃತ್ತದಲ್ಲಿ ತರಕಾರಿ ವ್ಯಾಪಾರ ಮುಂದುವರೆಸಲು ರವೀಂದ್ರ ಜಲ್ದಾರ ಸ್ನೇಹಿತರು ಹೈಕೋರ್ಟನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದ್ದರಿಂದ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಕ್ಟೋಬರ್‌ 11ರ ನಂತರ ಮಾರಟಗಾರರನ್ನು ತೆರವು ಗೊಳಿಸಬೇಕು ಎಂದು ಉಸ್ಮಾನೀಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎನ್.ಮಹಾವೀರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರವೀಂದ್ರ ಜಲ್ದಾರ್ ಜನವಿರೋಧಿ ಕೆಲಸ ಮಾಡುತ್ತಲೇ ಬಂದಿದ್ದಾರೆ. ನಗರದ ಅಭಿವೃದ್ದಿಯನ್ನು ಕಡೆಗಣಿಸಿ ಸ್ವ-ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾದರೂ, ಪ್ರತಿಷ್ಟೆಗಾಗಿ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಕಳೆದ ಜುಲೈ ೨೩ರಂದು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ, ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟ ತೆರವುಗೊಳಿಸಲಾಗಿತ್ತು. ಆಗ ಸೆಪ್ಟಂಬರ್ ೨೬ರಂದು ಹೈಕೋರ್ಟಿನಿಂದ ತಡೆಯಾಜ್ಞೆ ತರಲಾಗಿತ್ತು. ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ನೀಡಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ಹೈಕೋರ್ಟ ಆದೇಶದಂತೆ  ಅಕ್ಟೋಬರ್‌ ೧೧ರವರೆಗೆ ಮಾರಾಟಕ್ಕೆ ಅವಕಾಶ ನೀಡಿ, ನಂತರ ತೆರವಿಗೆ ಸೂಚಿಸಲಾಗಿದೆ,” ಎಂದರು.

ಮುಂದುವರೆದು, ನಗರದದ ಶಾಸಕರು ಅಭಿವೃದ್ಧಿಯನ್ನು ಕಡೆಗಣಿಸುತ್ತಿದ್ದು, ಜನರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಇಲ್ಲ ಎಂದು ಹೇಳುತ್ತಿದ್ದಾರೆ. ಅವರು ಕೂಡಲೇ ರಾಜೀನಾಮೆ ನೀಡಿ, ಮನೆಯಲ್ಲಿ ಕುಳಿತುಕೊಳ್ಳಬೇಕು. ಶಾಸಕರಾಗಿ ಅಧಿಕಾರ ಹಿಡಿದು ಆರೂ ತಿಂಗಳು ಗತಿಸುತ್ತಿದ್ದರೂ, ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಪ್ರಾರಂಭಿಸುತ್ತಿಲ್ಲ. ನಗರದ ರಸ್ತೆಗಳು ಹದಗೆಟ್ಟು ಹೋಗಿವೆ. ಬೀದಿ ದೀಪಗಳಿಲ್ಲ, ನಗರ ಕತ್ತಲೆಯಲ್ಲಿದೆ. ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಕಸ ವಿಲೇವಾರಿಯೂ ಸಮರ್ಪಕವಾಗಿ ನಿರ್ವಹಣೆಯಾಗುತ್ತಿಲ್ಲ. ಆದರೆ, ನಗರಸಭೆಯನ್ನು, ಮಹಾನಗರ ಪಾಲಿಕೆ ಮಾಡುವದಾಗಿ ಸುಳ್ಳು ಹೇಳುತ್ತಲೇ ಬಂದಿದ್ದಾರೆ. ೨೪ಗಂಟೆ ಕುಡಿಯುವ ನೀರು, ವಿಮಾನ ನಿಲ್ದಾಣ ಸೇರಿದಂತೆ ಬರೀ ಸುಳ್ಳು ಹೇಳಿ, ಜನರನ್ನ ದಿಕ್ಕುತಪ್ಪಿಸುತ್ತಿದ್ದಾರೆ. ತಾವು ಮಾತ್ರ ಐದ ನೂರು ಕೋಟಿ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಅಕ್ರಮ ಆಸ್ತಿ ಮಾಡಿರುವ ಶಾಸಕರ ವಿರುದ್ದ ಜನಪ್ರತಿನಿಧಿ ಕಾಯ್ದೆಯಡಿದ ದೂರು ನೀಡುವದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ವಿರುದ್ಧ, ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಾಗಿದೆ. ಇತ್ತೀಚೆಗಷ್ಟೇ ಆದಾಯ ತೆರಿಗೆ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಕೆಲವು ಮಾಹಿತಿಯನ್ನು ನೀಡುವಂತೆ ಕೇಳಿದೆ. ಪೂರ್ಣ ಮಾಹಿತಿ ಒದಗಿಸಿ ದೂರು ನೀಡುಲಾಗುವುದು ಎಂದು ಅವರು ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಪ್ರಭುನಾಯಕ, ಉದಯಕುಮಾರ, ರಿಜ್ವಾನ್ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...