ಕೋಲಾರ | ಪತ್ರಕರ್ತರಿಗೆ ‘ಕಲ್ಯಾಣ ಯೋಜನೆ’ ರೂಪಿಸಲು ಆಗ್ರಹ

Date:

  • ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೌಕರ್ಯ
  • ಬಹುಸಂಖ್ಯಾತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ ಗೋಪಿನಾಥ್ ಒತ್ತಾಯಿಸಿದರು.

ಸೋಮವಾರ ಕೋಲಾರದ ಪತ್ರಕರ್ತರ ಭವನದಲ್ಲಿ ಸಂಘವು ಆಯೋಜಿಸಿದ್ದ ಕಾರ್ಮಿಕ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಲಾಗಿದೆ. ಇದು ಮೂಲತಃ ಕಾರ್ಮಿಕ ಸಂಘಟನೆಯಾಗಿದ್ದರೂ ಇದುವರೆಗೂ ಕಾರ್ಮಿಕ ಇಲಾಖೆಯಿಂದ ಯಾವುದೇ ಸೌಕರ್ಯಗಳನ್ನು ಪತ್ರಕರ್ತರಿಗೆ ಒದಗಿಸದೇ ಇರುವುದು ವಿಷಾಧಕರ” ಎಂದು ಹೇಳಿದರು.

“ಪತ್ರಕರ್ತರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪ್ರಶ್ನಿಸಿದರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯತ್ತ ಬೊಟ್ಟು ಮಾಡಿ ತೋರಿಸಲಾಗುತ್ತದೆ. ಆದರೆ, ವಾರ್ತಾ ಇಲಾಖೆಯು ಕೇವಲ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಸೌಕರ್ಯಗಳನ್ನು ಒದಗಿಸುತ್ತಿದೆ. ಇದರಿಂದ ಬಹುಸಂಖ್ಯಾತ ಕಾರ್ಯನಿರತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದ ಕಾರಣ ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿ ಕಾರ್ಯನಿರ್ವಹಿಸುತ್ತಿರುವ ಕೆಯುಡಬ್ಲ್ಯೂಜೆ ಸದಸ್ಯರನ್ನು ಕಾರ್ಮಿಕರೆಂದೇ ಪರಿಗಣಿಸಿ ಕಾರ್ಮಿಕ ಇಲಾಖೆ ಅಥವಾ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಸೌಕರ್ಯಗಳನ್ನು ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದರು.

ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ ಸಿ ವಿ ನಾಗರಾಜ್, “ಪತ್ರಕರ್ತರು ಕಾರ್ಮಿಕರೇ ಎಂಬ ಪ್ರಶ್ನೆ ಇದೆ. ನಾವೆಲ್ಲಾ ಪತ್ರಿಕಾ ಮನೆಯಲ್ಲಿ ಕೆಲಸ ಮಾಡುವ  ಕಾರ್ಯನಿರತ ಪತ್ರಕರ್ತರು. 1947ರ ಕಾಯ್ದೆ, 1955ರ ಕಾಯ್ದೆ ಪ್ರಕಾರ ಪತ್ರಿಕಾ ಕಚೇರಿಯ ಸಹಾಯಕರು, ತಂತ್ರಜ್ಞರು ಕೂಡ ಕಾರ್ಯನಿರತ ಪತ್ರಕರ್ತರು. ಪತ್ರಕರ್ತರಿಂದ ದಿನಕ್ಕೆ 5 ರಿಂದ 6 ಗಂಟೆ ಕೆಲಸ ಮಾಡಿಸಬೇಕು ಎಂಬುದಿದೆ” ಎಂದರು.

“2020ರ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಉದ್ಯೋಗ ಭದ್ರತೆ ಕಿತ್ತುಕೊಂಡಿದೆ. ನಿರುದ್ಯೋಗ ಸಮಸ್ಯೆ ಹುಟ್ಟು ಹಾಕಿ ಪತ್ರಕರ್ತರ ಉತ್ಸಾಹ ಕುಗ್ಗಿಸಿದೆ. ನಿಷ್ಪಕ್ಷಪಾತ ಕೆಲಸಕ್ಕೆ ಅಡ್ಡಿಪಡಿಸಿದೆ. ಬಹಳಷ್ಟು ಮಂದಿ ಕೆಲಸ ಬಿಡುತ್ತಿದ್ದಾರೆ. ಸ್ವಾತಂತ್ರ‍್ಯವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಸಂಸ್ಥೆಯನ್ನು ಪ್ರಶ್ನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾದ ಅನಿವಾರ್ಯ ಬಂದೊದಗಿದೆ” ಎಂದು ವಿವರಿಸಿದರು.

“ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ತಮ್ಮದೇ ಆದ ಮಂಡಳಿ ಹೊಂದಿದ್ದು, ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಪತ್ರಕರ್ತರಿಗೆ ಮಂಡಳಿ ಇದ್ದರೂ ಏನೂ ಕೆಲಸ ನಡೆದಿಲ್ಲ. ನಮ್ಮ ನಿರ್ಲಕ್ಷ್ಯಕ್ಕೆ ನಾವೂ ಕಾರಣ. ನಾವೂ ಪೂರ್ಣಕಾಲಿಕ ಕಾರ್ಮಿಕರು ಎಂಬುದನ್ನು ಸಾಬೀತುಪಡಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ ಮುನಿರಾಜು ಮಾತನಾಡಿ, “ಕಾರ್ಮಿಕ ದಿನಾಚರಣೆ ಸಂತಸ ತರುವ ಹಬ್ಬ. 1923ರಲ್ಲಿ ಮೊದಲ ಬಾರಿ ಆಚರಿಸಲಾಯಿತು. ಎಲ್ಲ ಕಾರ್ಮಿಕರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಎಲ್ಲರೂ ಒಂದೊಂದು ವಿಧದ ಕಾರ್ಮಿಕರು. ಎಲ್ಲರೂ ಒಂದೆ” ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ ಎಸ್ ಗಣೇಶ್ ಮಾತನಾಡಿ, ಪತ್ರಕರ್ತರು ಪರಿಪೂರ್ಣ ಕಾರ್ಮಿಕರೇ ಅಥವಾ ಅಸಂಘಟಿತ ಕಾರ್ಮಿಕರೇ ಎಂಬುದು ಗೊತ್ತಿಲ್ಲ. ಪತ್ರಕರ್ತರಿಗೆ ಎಲ್ಲ ಸೌಲಭ್ಯಗಳು ಸಿಗಬೇಕು. ಸಂಘಟಿತ ಹೋರಾಟ ನಡೆಸಿದರೆ ಸರ್ಕಾರದ ಗಮನ ಸೆಳೆಯಬಹುದು. ಕಾರ್ಮಿಕರ ಹಕ್ಕು ಮತ್ತು ರಕ್ಷಣೆ ಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಕೆ ಬಿ ಜಗದೀಶ್, ಬಿ ಸುರೇಶ್, ಅಬ್ಬಣಿಶಂಕರ್, ಓಂಕಾರಮೂರ್ತಿ, ವೆಂಕಟೇಶ ಬಾಬಾ, ಎಸ್ ಸೋಮಶೇಖರ್, ಕಾರ್ಯಕಾರಿ ಸಮಿತಿ ಸದಸ್ಯರಾದ ನಾ ಮಂಜುನಾಥ್, ಆಸೀಫ್‌ಪಾಷ, ಎನ್ ಗಂಗಾಧರ, ಗೋಪಿ, ಎಲ್ ಕಿರಣ್, ಸರ್ವಜ್ಞಮೂರ್ತಿ, ಸಿ ಅಮರೇಶ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...