ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

Date:

  • ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ.
  • ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ.

ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಐಎಂಎಸ್ಎಸ್, ಎಐಡಿವೈಓ ಹಾಗೂ ಎಐಕೆಕೆಎಂಎಸ್ ಕಾರ್ಯಕರ್ತರು ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಈಶ್ವರಿ ಮಾತನಾಡಿ, “ರಾಜ್ಯದಲ್ಲಿ ಹೊಸದಾಗಿ ಸಾವಿರಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆಯ ನಿರ್ಧಾರ ಸಮಾಜಘಾತುಕವಾಗಿದೆ ಈಗಾಗಲೇ ಮದ್ಯಪಾನ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಒಂದೆಡೆ ಬೆಲೆ ಏರಿಕೆ, ಬಡತನ, ನಿರುದ್ಯೋಗದಿಂದ ಜೀವನ ತತ್ತರಿಸುತ್ತಿದ್ದರೆ ಇನ್ನೊಂದೆಡೆ ನೈತಿಕ ಮೌಲ್ಯ ಕುಸಿಯುತ್ತಿದೆ. ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನವೂ ಒಂದು ಮುಖ್ಯ ಕಾರಣ ಎಂದು ವರದಿಗಳು ಸಾಬೀತುಪಡಿಸುತ್ತಲೇ ಇವೆ. ಆದರೂ ಸರ್ಕಾರ ಇಂಥ ನಿರ್ಧಾರ ಕೈಗೆತ್ತಿಗೊಂಡಿರುವುದು ಸಮಂಜಸವಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೌಟುಂಬಿಕ ದೌರ್ಜನ್ಯಗಳು ಕ್ರೂರ ರೂಪ ಪಡೆದುಕೊಳ್ಳುತ್ತಿವೆ. ಹೆಣ್ಣು ಮಕ್ಕಳು ಬೆವರು ಸುರಿಸಿ ದುಡಿದ ಹಣವನ್ನು ಗಂಡಂದಿರು ಕುಡಿತಕ್ಕಾಗಿ ಹೊಡೆದು ಬಡಿದು ಕಸಿದುಕೊಳ್ಳುವುದು ಈಗಲೂ ಮನೆ ಮನೆಯ ಕಥೆಯಾಗಿದೆ. ಇದರಿಂದಾಗಿ ಎಷ್ಟೋ ಹೆಣ್ಣುಮಕ್ಕಳು ಪುಟ್ಟ ಮಕ್ಕಳನ್ನು ಒಡಲಲ್ಲಿ ಇಟ್ಟುಕೊಂಡು ಹೊಟ್ಟೆಗೆ ಹಿಟ್ಟಿಲ್ಲದೆ ಉಪವಾಸ ಮಲಗುವಂತಾಗುತ್ತಿದೆ. ಮಹಿಳೆಯರ ಸಬಲೀಕರಣ ಮಾಡುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಿರುವ ರಾಜ್ಯ ಸರ್ಕಾರ ಈಗ ಅದೇ ಮಹಿಳೆಯರ ಮೇಲೆ ಕ್ರೂರ ಅಪರಾಧಗಳಿಗೆ ಕಾರಣವಾಗುತ್ತಿದೆ. ಸಂಪೂರ್ಣ ಮದ್ಯ ನಿಷೇಧಕ್ಕಾಗಿ ಮಹಿಳಾ ಸಮುದಾಯ ಕೇಳಿಕೊಳ್ಳುತ್ತಿದ್ದರೆ ಸರ್ಕಾರ ಮಾತ್ರ ಇನ್ನೂ ಹೆಚ್ಚು ಪರವಾನಗಿ ಕೊಡುತ್ತಿದೆ. ಇದು ಯಾವುದೇ ಸರ್ಕಾರಗಳ ನೈಜ ಮುಖವಾಡ ಎಂದು ಮಹಿಳಾ ಸಮುದಾಯ ಅರ್ಥ ಮಾಡಿಕೊಂಡು ಒಕ್ಕೊರಲಿನಿಂದ ಇದರ ವಿರುದ್ಧ ಬೀದಿಗಿಳಿಯಬೇಕು” ಎಂದು ಕರೆ ನೀಡಿದರು

ಎಐಡಿವೈಓ ನ ಜಿಲ್ಲಾಧ್ಯಕ್ಷ ಎ.ಪಂಪಾಪತಿ, ಎಐಕೆಕೆಎಂಎಸ್ ನ ಜಿಲ್ಲಾಧ್ಯಕ್ಷ ಗೋವಿಂದ ಹಾಗೂ ಎಐಎಂಎಸ್ಎಸ್ ನ ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಜಗದೀಶ್,ರಾಜ ,ವಿದ್ಯಾ, ಗಿರಿಜಾ,ನಿಂಗರಾಜ್ ಸೇರಿದಂತೆ ಯುವ ಜನರು, ರೈತರು, ಹಲವಾರು ಬಡಾವಣೆಯ ಹೆಣ್ಣು ಮಕ್ಕಳು ಪ್ರತಿಭಟನೆಗೆ ಧ್ವನಿಗೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...