ವಿಬಿ ಜಿ-ರಾಮ್-ಜಿ ಕಾಯ್ದೆ ವಾಪಸ್‌ಗೆ ಆಗ್ರಹ

Date:

ಬಾಗೇಪಲ್ಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಹೆಸರಿನಲ್ಲಿ ಯೋಜನೆ ಮುಂದುವರಿಸಬೇಕು. ವಿಬಿ ಜಿ-ರಾಮ್-ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ತೋಳಪಲ್ಲಿ ಗ್ರಾಮದಲ್ಲಿ ರಾಜ್ಯ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು
ವಿಬಿ ಜಿ-ರಾಮ್-ಜಿ ಕಾಯ್ದೆ ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮದ 100ಕ್ಕೂ ಹೆಚ್ಚು ಗ್ರಾಮೀಣ ಕೂಲಿಕಾರ್ಮಿಕರು ಧಿಕ್ಕಾರ ಕೂಗಿದರು.

ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ ತೊಳ್ಳಪಲ್ಲಿ ಎಲ್.ವೆಂಕಟೇಶ್ ಮಾತನಾಡಿ 2004ರಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಯುಪಿಎ ಸರ್ಕಾರವು ಮಹಾತ್ಮ ಗಾಂಧೀಜಿ ಹೆಸರಿನಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದಿತ್ತು ಕೂಲಿ ಕಾರ್ಮಿಕರಿಗೆ 100 ದಿನಗಳ ಕಡ್ಡಾಯ ಕೂಲಿ ಕೆಲಸ ಮತ್ತು ಹಣ ನೀಡಲಾಗುತ್ತಿತ್ತು. ಆದರೆ ಈಗಿನ ಎನ್‌ಡಿಎ ಮೈತ್ರಿಕೂಟ ಸರ್ಕಾರವು ಮನರೇಗಾ ಯೋಜನೆ ಹೆಸರನ್ನು ವಿಬಿ ಜಿ-ರಾಮ್-ಜಿ ಆಗಿ ಮರುನಾಮಕರಣ ಮಾಡಿದೆ. ಅಷ್ಟೇ ಅಲ್ಲದೆ ಕಾಯ್ದೆಯಲ್ಲಿ ಮಾಡಿರುವ ತಿದ್ದುಪಡಿಗಳು ಕೂಲಿ ಕಾರ್ಮಿಕರಿಗೆ ಮರಣಶಾಸನವಾಗಿದೆ’ ಎಂದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಕೇಂದ್ರ ಸರ್ಕಾರ ಕಳೆದ ವರ್ಷದ ಡಿ.15ರಂದು ಮನರೇಗಾ ಕಾಯ್ದೆ ಸ್ಥಾನದಲ್ಲಿ ಮತ್ತೊಂದು ಕಾಯ್ದೆ ಪ್ರತಿಪಾದಿಸಿದೆ. ಡಿ. 17ರ ರಾತ್ರಿ ಚರ್ಚೆ ನಡೆದಿದೆ ಎಂದು 18ರಂದು ಮೇಜು ತಟ್ಟುವ ಮೂಲಕ ಅನುಮೋದನೆಗೆ ಪಡೆಯಲಾಗಿದೆ ನೂತನ ಮಸೂದೆಗೆ ಯಾವುದೇ ತಿದ್ದುಪಡಿ ಸೂಚಿಸಲು ಅನುಮತಿ ನೀಡಲಿಲ್ಲ ಇದು ಸಂಸದೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಕಾಯ್ದೆ ಪ್ರಕಾರ ರಾಜ್ಯಗಳಿಗೆ ಎಷ್ಟೆಷ್ಟು ನಿಧಿ ನೀಡಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ನಿರ್ಣಯಿಸುತ್ತದೆ. ಈ ಹಿಂದೆ ಮನರೇಗಾ ಯೋಜನೆಗೆ ತಗುಲುವ ಕಾರ್ಮಿಕರ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು ಆದರೆ ನೂತನ ಕಾಯ್ದೆ ಪ್ರಕಾರ ಜಿ-ರಾಮ್-ಜಿ ಯೋಜನೆಗೆ ಕೇಂದ್ರ ಸರ್ಕಾರವು ಶೇ 60ರಷ್ಟು ಅನುದಾನವಷ್ಟೇ ಬಿಡುಗಡೆ ಮಾಡಲಿದ್ದು ಉಳಿದ ಶೇ 40ರಷ್ಟು ಅನುದಾನವನ್ನು ರಾಜ್ಯ ಸರ್ಕಾರಗಳೇ ಭರಿಸಿಕೊಳ್ಳಬೇಕು. ಈಗಾಗಲೇ ಹಣಕಾಸು ಕೊರತೆಯಿಂದ ಸಂಕಷ್ಟದಲ್ಲಿರುವ ರಾಜ್ಯಗಳ ಮೇಲೆ ಇದು ಮತ್ತಷ್ಟು ಹೊರೆಯಾಗಲಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ…? ಗಣಿಗಾರಿಕೆ ಚಾಲಕ ಸಾವು ದೂರಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

ಪ್ರತಿಭಟನೆಯಲ್ಲಿ ಕೂಲಿಕಾರ್ಮಿಕರಾದ ಚಿನ್ನವೆಂಕಟರವಣಪ್ಪ, ಹುಸೇನ್‍ಸಾಬ್, ಎಲ್.ವೆಂಕಟಪ್ಪ, ವೆಂಕಟರಾಮಪ್ಪ, ಶ್ರೀನಿವಾಸ್, ಅರ್ಜುನಾ, ಫಕ್ರುದ್ದೀನ್ ಸಾಬ್, ವರಲಕ್ಷ್ಮಿ, ಲಲಿತಮ್ಮ, ಲಕ್ಷ್ಮಿದೇವಮ್ಮ, ಶಿವಮ್ಮ, ಅಶ್ವಥ್ಥಮ್ಮ, ನಾಗಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...