ಬೀದರ್‌ | ಮಾಸಿಕ 10 ಸಾವಿರ ಗೌರವ ಧನ ನೀಡಲು ಬೆಳೆ ಸಮೀಕ್ಷೆದಾರರ ಆಗ್ರಹ

Date:

ಬೆಳೆ ಸಮೀಕ್ಷೆದಾರರಿಗೆ ಮಾಸಿಕ ಗೌರವ ಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಬೆಳೆ ಸಮೀಕ್ಷೆದಾರರ ತಂಡ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿತು.

ʼಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಋತುವಿನಲ್ಲಿ ಬೆಳೆ ಸಮಿಕ್ಷೆ ಕಾರ್ಯಕೈಗೊಳ್ಳುತ್ತೇವೆ. ಆದರೆ ಸದರಿ ಬೆಳೆ ಸಮೀಕ್ಷೆ ಕಾರ್ಯ ಸುಗಮ ರೀತಿಯಲ್ಲಿ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಲ್ಲಿ ಹಲವು ಸಮಸ್ಯೆಗಳು ಎದುರಿಸುತ್ತಿದ್ದು, ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕುʼ ಎಂದು ಆಗ್ರಹಿಸಿದರು.

ʼಸರಕಾರದ ಆದೇಶದಂತೆ ಪ್ರತಿ ವರ್ಷ ಜಿಲ್ಲೆಯ ರೈತರ ಪಹಣಿ ಪ್ರತಿಕೆಯಲ್ಲಿ ಬೆಳೆ ನಮೂದಿಸಲು ಹಾಗೂ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಸೇರಿ ವಿವಿಧ ಬೆಳೆ ಹಾನಿ ಪ್ರಸಂಗಗಳಲ್ಲಿ ಬೆಳೆ ಹಾನಿ ಪರಿಹಾರ ಧನ ಪಡೆಯಲು ಮಾರುಕಟ್ಟೆಯಲ್ಲಿ ಬೆಳೆ ಮಾರಾಟ ಮಾಡಲು ಬೆಳೆ ಸಮೀಕ್ಷೆ ಅತ್ಯಗತ್ಯವಾಗಿರುತ್ತದೆ. ಸರ್ಕಾರದ ಯೋಜನೆಗಳಿಗೆ ಬೆಳೆ ಸಮೀಕ್ಷೆ ನಡೆಸಲು ಜಿಲ್ಲಾದ್ಯಂತ ಸುಮಾರು ಐನೂರಕ್ಕೂ ಅಧಿಕ ಸಮೀಕ್ಷೆದಾರರು ಕಾರ್ಯ ನಿರ್ವಹಿಸುತ್ತಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎಲ್ಲ ಋತುಮಾನದಲ್ಲಿ ಬೆಳೆ ಸಮೀಕ್ಷೆ ನಡೆಸುವ ನಮಗೆ ಇಲಾಖೆಯಾಗಲಿ, ಸರ್ಕಾರವಾಗಲಿ ಯಾವುದೇ ಸಂರಕ್ಷಣೆ ನೀಡುತ್ತಿಲ್ಲ. ಅಷ್ಟೇ ಅಲ್ಲದೆ ಕನಿಷ್ಠ ಗೌರವಧನ ಕೂಡ ನೀಡುತ್ತಿಲ್ಲ. ಪಿಯುಸಿ, ಪದವಿ ಮುಗಿಸಿದ ನಮಗೆ ಜೀವನ ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿದ್ದೇವೆʼ ಎಂದು ದೂರಿದರು.

ʼಬೆಳೆ ಸಮೀಕ್ಷೆದಾರರಿಗೆ ಸುರಕ್ಷಿತ ಕವಚ ಹಾಗೂ ಗುರುತಿನ ಚೀಟಿ ನೀಡಬೇಕು. ಬೆಳೆ ಸಮೀಕ್ಷೆಗೆ ಜಿ.ಪಿ.ಎಸ್ ನಕ್ಷೆ ವ್ಯವಸ್ಥೆ ಮಾಡಿಕೊಡಬೇಕು. ಸಮೀಕ್ಷೆದಾರರಿಗೆ ಜೀವ ಹಾನಿ ಸಂಭವಿಸಿದಲ್ಲಿ 5 ಲಕ್ಷ ರೂ. ಜೀವ ವಿಮೆ ನೀಡಬೇಕು. ಪ್ರತಿ ಪ್ಲಾಟ್‌ ಬೆಳೆಗೆ 50 ರೂ. ಅಥವಾ ಪಿಆರ್ ಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ರೂ. ಗೌರವ ಧನ ನಿಗದಿಪಡಿಸಬೇಕು. ಸಮೀಕ್ಷೆ ನಡೆಸಲು ಪ್ರತಿಯೊಬ್ಬರಿಗೆ ಹೊಸ ಮೊಬೈಲ್‌ ಫೋನ್ ಕೊಡುವುದು ಸೇರಿದಂತೆ ಇತರೆ ಸೌಲಭ್ಯಗಳು ಒದಗಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?‌ ಮಹಿಳಾ ಉದ್ಯಮಶೀಲತೆ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಸಮೀಕ್ಷೆದಾರರಾದ ಲೋಕೇಶ ಕಾಂಬಳೆ, ಏಕನಾಥ ಮೇತ್ರೆ, ಶಿವಕುಮಾರ್ ಶಿವಗೊಂಡ, ಮೋಹನ್ ಮಾನೆ, ಮಾಣಿಕ್ ಬಂಗಾರೆ, ಅವಿನಾಶ್, ಸುಜೀತ್, ಮಲಗೊಂಡ, ಸುಂದರ್, ಲೋಕೇಶ್ ಕುಂಟೆ, ರತಿಕಾಂತ್ ಕಾಂಬಳೆ, ರವಿ ಶಿಂಧೆ, ಷಡಕ್ಷರಿ, ಮಚೇಂದ್ರ, ವಿನೋದ್, ಬಸವರಾಜ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...