ಮೈಸೂರು | ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪರಿಶಿಷ್ಟ ಜಾತಿಯವರಿಗೆ ಮೀಸಲಿಟ್ಟಿರುವ ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ ಮಾಡುತ್ತಿರುವ ಆಧಿಕಾರಿಗಳ ವಿರುದ್ಧ ಕಲಂ 24 ಮತ್ತು 25ರಂತೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲು ಸಮಯ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹದೇವಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗೆ ಚರ್ಚಿಸುವ ಅವಕಾಶಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.

“ಪರಿಶಿಷ್ಟ ಜಾತಿಯವರ ಉಪಹಂಚಿಕೆ ಹಣವು ಬಡತನ ನಿವಾರಣೆಗಾಗಿ ಮೀಸಲಿಟ್ಟ ಹಣವಲ್ಲ. ಸಾಯುವವರೆಗೂ ಪ್ರತಿ ವರ್ಷ ಸಹಾಯಧನ, ಸೌಲಭ್ಯ ನೀಡಲು ರೂಪಿಸಿದ ಯೋಜನೆಯಲ್ಲ. ನಿಗದಿತ ಸಮಯದೊಳಗೆ(10 ವರ್ಷದೊಳಗೆ) ಪರಿಶಿಷ್ಟ ಜಾತಿಯವರ ಅಭಿವೃದ್ಧಿ ಮಾಡಬೇಕೆಂದು ರೂಪಿಸಿದ ಯೋಜನೆಯಾಗಿದ್ದು, ಕೂಡಲೇ ಇದರಂತೆ ನಡೆದುಕೊಳ್ಳಬೇಕು. 2011ರ ಜನಗಣತಿಯಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಟ್ಟು 1,04,74,992 ಮಂದಿ ಜನಸಂಖ್ಯೆಯಲ್ಲಿ(ಶೇ.17.15ರ) ಜಾತಿವಾರು ನಿಗಮಗಳಿಗೆ, ಜಾತಿಗಳ ಜನಸಂಖ್ಯೆಯಷ್ಟು ಹಣವನ್ನು ವಿಂಗಡಿಸಿ ಎಲ್ಲ ಹಣವನ್ನು ನಿಗಮಗಳಿಗೆ ಹಂಚಿಕೆ ಮಾಡಬೇಕು ಮತ್ತು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“14,000 ಕೋಟಿ ರೂಪಾಯಿ ಅನುದಾನವನ್ನು 5 ಗ್ಯಾರಂಟಿಗಳಿಗೆ ಖರ್ಚು ಮಾಡುತ್ತಿರುವ ಹಣವನ್ನು ಸಾಮಾನ್ಯ ಹಣದಲ್ಲಿ ಖರ್ಚು ಮಾಡಬೇಕು. ಪರಿಶಿಷ್ಟ ಜಾತಿ/ಪಂಗಡದವರ ಅಭಿವೃದ್ಧಿಗೆ ಮಾರಕವಾಗಿರುವ ಹಣ ದುರ್ಬಳಕೆಯಾಗಲು ಕಾರಣವಾಗುತ್ತಿರುವ ಕರ್ನಾಟಕ ಪರಿಶಿಷ್ಟ ಜಾತಿ/ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ 2013ರ ಕಲಂ 7(ಬಿ) ಮತ್ತು 7(ಸಿ)ಯನ್ನು ಕಾಯ್ದೆಯಿಂದ ತೆಗೆದು ಹಾಕಬೇಕು” ಎಂದು ಒತ್ತಾಯಿಸಿದರು.

“ಪರಿಶಿಷ್ಟ ಜಾತಿ/ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ 2013ರ ಕಾಯ್ದೆಗೆ ಎರಡು ಬಾರಿ ಸರ್ಕಾರಕ್ಕೆ ಇಷ್ಟಬಂದಾಗ ತಿದ್ದುಪಡಿ ಮಾಡಿದ್ದು, ಕೂಡಲೇ ಈ ಕಾಯ್ದೆಯಲ್ಲಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಅಭಿವೃದ್ಧಿ ವಿರೋಧಿ ಕಲಂಗಳನ್ನು ತೆಗೆಯಲು ಜನಾಂಗದವರಿಂದ ಮತ್ತು ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಪಡೆದು ಕೂಡಲೇ ತಿದ್ದುಪಡಿ ಮಾಡಬೇಕು” ಎಂದರು.

“2023-24ರಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳು ಇಲ್ಲದೇ 11,000 ಕೋಟಿ ರೂಗಳನ್ನು ಇತರೆ ಬಳಕೆಗೆ ಖರ್ಚು ಮಾಡಿದ್ದು, ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಅನುಷ್ಠಾನ ಮಾಡುತ್ತಿರುವ ಇಲಾಖೆಗಳ ಅಧಿಕಾರಿಗಳ ಮೇಲೆ ಕಾಯ್ದೆ ಕಲಂ 24 ಮತ್ತು 25ರಂತೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಉಪಹಂಚಿಕೆ ಕಾಯ್ದೆ 2013ರ ಕಲಂ 2(ಬಿ)ಯಲ್ಲಿ ಆಡಳಿತಾತ್ಮಕ ವೆಚ್ಚಗಳನ್ನು ಹೊರತುಪಡಿಸಿ ಎಂದು ತಿಳಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಅದರ ಅಂಗ ಸಂಸ್ಥೆಗಳು ಆಡಳಿತ ವೆಚ್ಚಕ್ಕೆ ಖರ್ಚು ಮಾಡಿರುವ ಮತ್ತು ಮಾಡುತ್ತಿರುವ ಹಣವನ್ನು ಪರಿಶಿಷ್ಟ ಜಾತಿ/ಪಂಗಡಗಳ ಉಪಹಂಚಿಕೆ ಹಣದಲ್ಲಿ ಖರ್ಚು ಮಾಡುತ್ತಿದ್ದು, ಕೂಡಲೇ ಆಡಳಿತತ್ಮಾಕ ಸಾಮಾನ್ಯ ಹಣದಲ್ಲಿ ಖರ್ಚು ಮಾಡಬೇಕು. ಹತ್ತು ವರ್ಷಗಳಿಂದ ಖರ್ಚು ಮಾಡಿದ ಇಲಾಖೆಯ ಸಂಬಂದಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ; ಕ್ರಮಕ್ಕೆ ದಸಂಸ ಆಗ್ರಹ

“ಕಾಯ್ದೆ ಜಾರಿಗೆ ಬಂದು 10 ವರ್ಷಗಳು ಕಳೆದಿದ್ದು(2014-15 ರಿಂದ 2023-24 ರವರೆಗೆ) ಕಾಯ್ದೆಯ 7(ಎ), 7(ಬಿ), 7(ಸಿ) ಮತ್ತು 7(ಡಿ)ಯಲ್ಲಿ ಯೋಜನೆಗಳಲ್ಲಿ ಖರ್ಚಾಗಿರುವ ಹಣದಲ್ಲಿ ಯಾವ ವ್ಯಕ್ತಿಗಳ ಕುಟುಂಬಗಳ ಮತ್ತು ಏರಿಯಾಗಳ ಅಭಿವೃದ್ಧಿಯಾಗಿದೆಯೆಂದು ಜಿಲ್ಲಾ, ತಾಲೂಕು, ಗ್ರಾಮಾವಾರು ಪ್ರಗತಿಯ ಅಭಿವೃದ್ಧಿಯ ವಿವರಗಳನ್ನು ಕೂಡಲೇ ಬಹಿರಂಗಪಡಿಸಬೇಕು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...