ಬೀದರ್‌ | ಕೌಡಗಾಂವ್‌ನಲ್ಲಿ ಅಂಬೇಡ್ಕರ್‌-ಬಸವಣ್ಣ ಎರಡೂ ವೃತ್ತಗಳಿಗೆ ಅವಕಾಶ ಕಲ್ಪಿಸಲು ಆಗ್ರಹ

Date:

‌ಔರಾದ ತಾಲೂಕಿನ ಕೌಡಗಾಂವ್‌ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ.

ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ, ಶಿವಕುಮಾರ ತರನಾಳೆ, ಸುಭಾಷ ಮಲ್ಲಪನೋರ, ರಮೇಶ ಗಾಜಲ್ಲೆ ಮನವಿ ಪತ್ರಕ್ಕೆ ಸಹಿ ಹಾಕಿದ ಹಕ್ಕೊತ್ತಾಯ ಪತ್ರವನ್ನು ಲಿಂಗಾಯತ ಸಮಾಜ ಯುವ ಸಂಘದ ತಾಲೂಕಾಧ್ಯಕ್ಷ ವಿರೇಶ ಅಲಮಾಜೆ ನೇತ್ರತ್ವದಲ್ಲಿ ಔರಾದ ತಹಸೀಲ್ದಾರ್‌ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.

ಬೀದರ್ -ನಾಂದೇಡ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆ ರಸ್ತೆ ಬದಿಯಲ್ಲಿ ಅಂಬೇಡ್ಕರ್ ಹಾಗೂ ಬಸವೇಶ್ವರವರ ವೃತ್ತಗಳು ತೆರವುಗೊಳಿಸಿದ್ದರು. ಕಾಮಗಾರಿ ಬಳಿಕ ಗ್ರಾಮಸ್ಥರು ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರ ವೃತ್ತಗಳು ಪುನಃ ಅದೇ ಸ್ಥಳದಲ್ಲಿ ನಿರ್ಮಿಸಿದ್ದಾರೆ. ಗ್ರಾಮಸ್ಥರು ಆ ಎರಡು ವೃತ್ತಗಳು ಕೂಡಿಸಿದ ಹಿನ್ನೆಲೆ ಪೊಲೀಸ್ ಸಿಬ್ಬಂದಿಯವರನ್ನು ಬಲಿಪಶು ಮಾಡುವ ಪ್ರಯತ್ನ ಖಂಡನೀಯ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದಿನಂತೆ ಕೌಡಗಾಂವ ಬಸ್ ನಿಲ್ದಾಣದ ಹತ್ತಿರ ಎರಡು ವೃತ್ತಗಳಿದ್ದು, ಗ್ರಾಮಸ್ಥರು ಪುನಃ ಅದೇ ರೀತಿಯಲ್ಲಿ ವೃತ್ತಗಳು ನಿರ್ಮಿಸಿರುತ್ತಾರೆ. ಪ್ರಯುಕ್ತ ಆ ಎರಡು ವೃತ್ತಗಳಿಗೆ ಅವಕಾಶ ಕಲ್ಪಿಸಿ ಕೋಮುಗಲಭೆ ಆಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಕೆಲವರು ಕೋಮುಗಲಭೆಗೆ ಪುಷ್ಠಿ ನೀಡುವಂತಹ ಕೆಲ ಪ್ರಯತ್ನಗಳು ನಡೆಸುತ್ತಿರುವುದು ದುರದೃಷ್ಟಕರ” ಎಂದರು.

“ಈ ವಿಚಾರದಲ್ಲಿ ತಾಲೂಕು ಆಡಳಿತ ಮುತುವರ್ಜಿ ವಹಿಸಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಅಗತ್ಯ ಕ್ರಮ ವಹಿಸಿ ಪೊಲೀಸ್ ಸಿಬ್ಬಂದಿಯವರನ್ನು ಬಲಿಪಶು ಮಾಡುತ್ತಿರುವುದು ನಿಲ್ಲಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗಡಿ ತಾಲೂಕಿನಲ್ಲೊಂದು ಕಣ್ಮನ ಸೆಳೆಯುವ ಮಾದರಿ ಅಂಗನವಾಡಿ ಕೇಂದ್ರ

ಈ ಸಂದರ್ಭದಲ್ಲಿ ಲಿಂಗಾಯತ ಸಮಾಜ ಯುವ ಸಂಘದ ತಾಲೂಕಾಧ್ಯಕ್ಷ ವಿರೇಶ ಅಲ್ಮಾಜೆ ಸೇರಿದಂತೆ ಪ್ರಮುಖರಾದ ಬಾಲಾಜಿ ದಾಮಾ, ಆಕಾಶ ಯಡವೆ, ಪ್ರಶಾಂತ ಚಿದ್ರೆ, ದಿಲೀಪ ಲದ್ದೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...