ವಿಜಯಪುರ | ʼವಚನ ದರ್ಶನʼ ಪುಸ್ತಕ ರದ್ದುಗೊಳಿಸಲು ಆಗ್ರಹ

Date:

ವಿಜಯಪುರ ನಗರದಲ್ಲಿ ಸೆ.5ರಂದು ʼವಚನ ದರ್ಶನʼ ಪುಸ್ತಕ ಬಿಡುಗಡೆ ಸಮಾರಂಭವನ್ನು ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ವಿರೋಧಿಸಿ ಖಂಡಿಸಿದೆ.

ಶರಣ ಸಂಸ್ಕೃತಿಯನ್ನು ಮತ್ತು ಲಿಂಗಾಯತ ಧರ್ಮತತ್ವಗಳನ್ನು ನಾಶಪಡಿಸುವ ಉದ್ದೇಶದಿಂದ ವಚನ ದರ್ಶನ ಪುಸ್ತಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವುದು ಬಸವ ಭಕ್ತರು ಹಾಗು ಲಿಂಗಾಯತರಿಗೆ ನೋವು ತಂದಿದೆʼ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ವಚನ ದರ್ಶನ ಪುಸ್ತಕವನ್ನು ಪ್ರತಿ ಜಿಲ್ಲೆಗಳಲ್ಲಿ 3 ರಿಂದ 5 ಲಕ್ಷ ರೂಪಾಯಿ ಖರ್ಚು ಮಾಡಿ ಬಿಡುಗಡೆ ಮಾಡುತ್ತಿರುವುದರ ಹಿಂದಿನ ಹುನ್ನಾರ ಬಯಲಾಗಬೇಕಿದೆ. ಈ ಪುಸ್ತಕ ಬಿಡುಗಡೆ ನಾಡಿನಾದ್ಯಂತ ಸಾಮಾಜಿಕ ಸ್ವಾಸ್ಥ್ಯ ಕದಡಲಿದೆ. ಹೀಗಾಗಿ ಈ ಪುಸ್ತಕ ಬಿಡುಗಡೆಯ ಸಮಾರಂಭವನ್ನು ನಾವು ಸಾತ್ವಿಕವಾಗಿ ವಿರೋಧಿಸುತ್ತೇವೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನ ಚಳುವಳಿಯ ಆಶಯ, ಲಿಂಗಾಯತ ಸಂಸ್ಕೃತಿಯನ್ನು ನಾಶಗೊಳಿಸುವ ಪ್ರಯತ್ನ ಇಂದು ನಿನ್ನೆಯದಲ್ಲ. ಎಂ.ಆರ್. ಶ್ರೀನಿವಾಸಮೂರ್ತಿ, ಆರ್.ಆರ್.ದಿವಾಕರ, ಡಂಕಿನ್ ಝಳಕಿ, ರಾಜಾರಾಮ್ ಹೆಗಡೆ ಮುಂತಾದವರಿಂದ ಲಿಂಗಾಯತ ಧರ್ಮ ಹತ್ತಿಕ್ಕುವ ಪ್ರಯತ್ನ ನಡೆದಿದೆʼ ಎಂದರು.

ಶರಣರ ಕ್ರಾಂತಿಯ ಹಿನ್ನೆಲೆಯನ್ನು ನೋಡದೆ ಸನಾತನ ವೈದಿಕ ದರ್ಶನದ ಚೌಕಟ್ಟಿನಲ್ಲಿ ಸೇರಿಸಿ ಅದೊಂದು ಶುಷ್ಕ ಭಕ್ತಿ ಚಳುವಳಿ ಎಂಬಂತೆ ಬಿಂಬಿಸುವ ಪ್ರಯತ್ನದ ವಿರುದ್ದ ಬಸವಾನುಯಾಯಿಗಳು ಸಾತ್ವಿಕ ಹಾಗು ತಾತ್ವಿಕ ಆಕ್ರೋಶ ಹೊಂದಿದ್ದಾರೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ಶರಣ ಸಂಸ್ಕೃತಿ ಹಾಗೂ ಲಿಂಗಾಯತ ಧರ್ಮ ರಕ್ಷಣಾ ವೇದಿಕೆ ಸಂಚಾಲಕ ಡಾ.ಜೆ.ಎಸ್.ಪಾಟೀಲ, ಸೇರಿದಂತೆ ಪ್ರಮುಖರಾದ ಜಿ.ಬಿ.ಸಾಲಕ್ಕಿ, ಮನಗೂಳಿ ವಿರಕ್ತಮಠದ ವಿರತೀಶಾನಂದಸ್ವಾಮೀಜಿ, ಕಲಕೇರಿ ಶಿವಾಚಾರ್ಯಸ್ವಾಮೀಜಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗುಳಿ, ಕಲ್ಲಪ್ಪ ಕಡೆಚೂರ, ಹನುಮಂತ ಚಿಂಚಲಿ, ಮಹಾದೇವಿ ಗೋಕಾಕ, ರಾಜೇಶ್ವರಿ ಅರನಾಳ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...