ಬೀದರ್‌ | ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

Date:

ಬೀದರ ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

ಈ ಕುರಿತು ವೇದಿಕೆಯ ಜಿಲ್ಲಾಧ್ಯಕ್ಷ ಗುರುದಾಸ ಅಮದಲಪಾಡ ನೇತ್ರತ್ವದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ನಗರ ಸಾರಿಗೆಯ ಎಲ್ಲ ಬಸ್‌ಗಳು ತಹಸೀಲ್ದಾರ್‌ ಕಛೇರಿ, ಜಿಲ್ಲಾ ನ್ಯಾಯಾಲಯ ಕಚೇರಿ, ಭಗತ್‌ ಸಿಂಗ್‌ ವೃತ್ತದ ಎದುರುಗಡೆ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ತೆರಳುತ್ತಿವೆ. ಆದರೆ, ನಗರದ ಹೃದಯ ಭಾಗವಾಗಿರುವ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದ ಸುತ್ತಲಿನ ಸಾರ್ವಜನಿಕರಿಗೆ ಬಸ್‌ ಇಲ್ಲದೆ ತೊಂದರೆಯಾಗುತ್ತಿದೆ. ಹೀಗಾಗಿ ಇಲಾಖೆಯ ಮೇಲಾಧಿಕಾರಿಗಳು ಕೂಡಲೇ ಬಸ್ ಮಾರ್ಗ ಬದಲಾಯಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ತಮ್ಮ ಸಂಸ್ಥೆಯ ನೀತಿ ನಿಯಮಗಳು ಪಾಲನೆ ಮಾಡದೆ ಮನ ಬಂದಂತೆ ಬಸ್ ಚಲಾವಣೆ ಮಾಡುತ್ತಿದ್ದಾರೆ. ವಡಗಾಂವ -ಚಿಂತಾಕಿ ಬೀದರ್ ಹಾಗೂ ಕರಂಜಿ-ಬೀದರ್ ಮಾರ್ಗಮಧ್ಯೆ ಸಂಚರಿಸುವ ಬಸ್‌ಗಳು ಜನವಾಡ ರಸ್ತೆಯಲ್ಲಿರುವ ಬಸ್‌ ನಿಲ್ದಾಣಕ್ಕೆ ವಾಪಸ್‌ ಬರುವಾಗ ಅಡ್ಡದಾರಿಯಿಂದ ಬರುತ್ತಿವೆ. ಈ ʼರಾಂಗ್‌ ರೂಟ್ʼ ಬಸ್ ಚಾಲನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ” ಎಂದು ದೂರಿದರು.

ಈ ಬಗ್ಗೆ ಸಾರಿಗೆ ಸಂಸ್ಥೆಯ ಮೇಲಾಧಿಕಾರಿಗೂ ಕೂಡಲೇ ಈ ವಿಷಯದ ಬಗ್ಗೆ ಗಮನ ಹರಿಸಿ ಇಲಾಖೆಯ ನಿಯಮದಂತೆ ಬಸ್‌ ಓಡಿಸಲು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಹಾಗೂ ನಗರ ಬಸ್ ಸಾರಿಗೆ ಸಂಚಾರ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜನವಾಡ ಗ್ರಾಪಂ ಪಿಡಿಒ ವರ್ಗಾವಣೆಗೆ ಸದಸ್ಯರ ಆಗ್ರಹ

ಈ ಸಂದರ್ಭದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲಾಧ್ಯಕ್ಷ ಗುರುದಾಸ ಅಮದಲಪಾಡ, ಕರ್ನಾಟಕ ದಲಿತ ಸೇನೆ ಜಿಲ್ಲಾಧ್ಯಕ್ಷ ಧನರಾಜ ಕೋಳಾರ, ಕ.ಸ.ಸೇ ಜಿಲ್ಲಾಧ್ಯಕ್ಷ ಸಂಜು ಲಕ್ಷ್ಮೀದೊಡ್ಡಿ ಹಾಗೂ ಮಹೇಂದ್ರ ಹೊಸಮನಿ, ಬಸವರಾಜ ಬಾವಿದೂಡ್ಡಿ ಇನ್ನಿತರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...