ದಾವಣಗೆರೆ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

Date:

  • ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯ
  • ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ.

ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬುಳ್ಳಾಪುರದ ಹನುಮಂತಪ್ಪ ಮಾತನಾಡಿ, “ದಾವಣಗೆರೆ ಜಿಲ್ಲೆಯಲ್ಲಿ ರೈತರು ಬೆಳೆದ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳು ಬಹುತೇಕ ಮಳೆ ಬಾರದೆ ಒಣಗುತ್ತಿವೆ. ರೈತರು ಕೃಷಿ ಮಾಡಲು ದುಬಾರಿ ಬಿತ್ತನೆ ಬೀಜ ರಸಗೊಬ್ಬರ, ಕೂಲಿಗೆ ಹಣ ಖರ್ಚು ಮಾಡಿ ಆರ್ಥಿಕ ಸಂಕಷ್ಟದಲ್ಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್ ಸರಬರಾಜಿನಲ್ಲಿಯೂ ವ್ಯತ್ಯಯ ಉಂಟಾಗಿದ್ದು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇದಲ್ಲದೇ ಪಂಪ್ ಸೆಟ್ ಗಳಿಗೆ ವಿದ್ಯುತ್‌ ನೀಡುವಲ್ಲಿ ಅಧಿಕಾರಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಾವಣಗೆರೆ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬ್ಯಾಂಕುಗಳು ರೈತರು ಸಾಲ ಪಾವತಿಸಬೇಕೆಂದು ಮೇಲಿಂದ ಮೇಲೆ ನೋಟೀಸ್ ನೀಡುತ್ತಿವೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಸಂಬಂಧಿಸಿದಂತೆ ಅಧಿಕಾರಿಗಳು ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಇದಲ್ಲದೇ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಎಸ್ ಟಿ ಪರಮೇಶ್ವರಪ್ಪ, ಇ.ಶ್ರೀನಿವಾಸ್, ಕರಿಲಕ್ಕೇನಹಳ್ಳಿ ರೇವಣಸಿದ್ದಪ್ಪ, ಬಲ್ಲೂರು ನಾಗರಾಜ್ ರೆಡ್ಡಿ, ವಿಜಯಕುಮಾರ್, ಚಟ್ಟೋಬನಹಳ್ಳಿ ಕಮಲೇಶ್‌, ಈಚಘಟ್ಟದ
ವಿಜಯ್ ಕುಮಾರ್, ಕಿತ್ತೂರು ರುದ್ರೇಶ್, ಕುಮಾರ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ, ರುದ್ರೇಶ್, ಮಾಳಿಗೇರ ತಿಪ್ಪಣ್ಣ, ಬುಳ್ಳಾಪುರದ ಶರಣಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...