ಬೀದರ್‌ | ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯಲು ಕರವೇ ಆಗ್ರಹ

Date:

ಔರಾದ್ ಹಾಗೂ ಕಮಲನಗರ ತಾಲೂಕಿನ ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಔರಾದ ತಾಲೂಕು ಘಟಕ ಆಗ್ರಹಿಸಿದೆ.

ಈ ಕುರಿತು ಕರವೇ ಪದಾಧಿಕಾರಿಗಳು ಶನಿವಾರ ಶಿಕ್ಷಣ ಸಚಿವರಿಗೆ ಹಾಗೂ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ʼಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಔರಾದ್ ಮತ್ತು ಕಮಲನಗರ ತಾಲೂಕಿನ ಗ್ರಾಮ ಹಾಗೂ ತಾಂಡಾ ನಿವಾಸಿಗಳು ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮ ಕಲಿಸಲು ಉತ್ಸಾಹ ತೋರಿದ್ದರೂ ಶಿಕ್ಷಣ ಇಲಾಖೆ ಕನ್ನಡ ಮಾಧ್ಯಮ ವಿಭಾಗ ತೆರೆಯುವ ವ್ಯವಸ್ಥೆ ಮಾಡಲಿಲ್ಲ. ಪೋಷಕರು ಹಲವು ಬಾರಿ ಇಲಾಖೆಗೆ ಲಿಖಿತ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ಬಸವನವಾಡಿ ತಾಂಡಾ, ಹುಲ್ಯಾಳ, ಹುಲ್ಯಾಳ ತಾಂಡಾ ಸೇರಿದಂತೆ ತಾಲೂಕಿನ ಅನೇಕ ಕಡೆ ಮರಾಠಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ ವಿಭಾಗವಿಲ್ಲದ ಕಾರಣ ಮಕ್ಕಳು ಕನ್ನಡ ಕಲಿಕೆಯಿಂದ ವಂಚಿತರಾಗುತ್ತಿದ್ದಾರೆʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಔರಾದ ತಾಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಸದ್ಯ 1 ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮ ವಿಭಾಗವಿದ್ದು, 8ನೇ ತರಗತಿವರೆಗೆ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಹಲವು ಸಲ ಬೇಡಿಕೆಯಿಟ್ಟಿದ್ದರೂ ಪ್ರಯೋಜನವಾಗಿಲ್ಲ. ಹಲವು ಗ್ರಾಮ, ತಾಂಡಾಗಳಲ್ಲಿ ಕನ್ನಡ ಮಾಧ್ಯಮ ಇಲ್ಲದ ಕಾರಣ ದೂರದ ಊರುಗಳಿಂದ ವಿದ್ಯಾರ್ಥಿಗಳು ಔರಾದ್ ಪಟ್ಟಣದ ಖಾಸಗಿ ಶಾಲೆಗಳಿಗೆ ದಾಖಲಾಗುತ್ತಿದ್ದಾರೆ.ಇದರಿಂದ ಸರ್ಕಾರಿ ಶಾಲೆಗಳ ಅಸ್ತಿತ್ವವೇ ಇಲ್ಲದಂತಾಗಿದೆʼ ಎಂದರು.

ʼಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಬಸವನವಾಡಿ ತಾಂಡಾ, ಹುಲ್ಯಾಳ ತಾಂಡಾ ಹಾಗೂ ಹುಲ್ಯಾಳ ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ವಿಭಾಗ ತೆರೆಯಬೇಕು. ಡೊಂಗರಗಾಂವ ಗ್ರಾಮದಲ್ಲಿ 6 ರಿಂದ 8ನೇ ತರಗತಿವರೆಗೆ ವ್ಯವಸ್ಥೆ ಮಾಡುವುದು ಸೇರಿ ಗಡಿ ತಾಲೂಕಿನ ಗ್ರಾಮ ಹಾಗೂ ತಾಂಡಾಗಳಲ್ಲಿ ಪೋಷಕರ ಮನವಿಗೆ ಸ್ಪಂದಿಸಿ ಕನ್ನಡ ಮಾಧ್ಯಮ ವಿಭಾಗ ತೆರೆದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಸಾಂವಿಧಾನಿಕ 371(ಜೆ) ಕಲಂ ವಿರುದ್ಧ ಅಪಪ್ರಚಾರ; ಬೀದರ್‌ನಲ್ಲಿ ಸಿಡಿದ ಆಕ್ರೋಶ

ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಅನಿಲ ದೇವಕತ್ತೆ, ಗೌರವಾಧ್ಯಕ್ಷ ಬಸವರಾಜ ಶಟಕಾರ ಹಾಗೂ ಕರವೇ ಪ್ರಮುಖರಾದ ಸೋನು ರಾಥೋಡ, ಆಕಾಶ ಮೇತ್ರೆ, ಬಾಲಾಜಿ ಕಾಸ್ಲೆ, ಭೀಮರಾವ ಪವಾರ್, ದಿಲೀಪ ಹಕ್ಕೆ, ರಾಜು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...