ಹಾಸನ | ಸರ್ಕಾರಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

Date:

  • ಕಾಡಾನೆ ಸಮಸ್ಯೆ ಪೀಡಿತ ಪ್ರದೇಶದಲ್ಲಿರುವ ಹಲಸುಲಿಗೆ ಗ್ರಾಮ
  • ಶಾಸಕ ಸಿಮೆಂಟ್‌ ಮಂಜು ಶಾಲೆಗೆ ಭೇಟಿ ನೀಡುವಂತೆ ಒತ್ತಾಯ

ಬೇಸಿಗೆ ರಜೆ ಮುಗಿದು ತರಗತಿಗಳು ಆರಂಭವಾಗಿವೆ. ಲವಲವಿಕೆಯಿಂದ ಶಾಲೆಗಳತ್ತ ಬರುವ ಮಕ್ಕಳನ್ನು ಸ್ವಾಗತಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವುದು ಶಿಕ್ಷಣ ಇಲಾಖೆ ಅಧಿಕಾರಿಗಳ ಜವಾಬ್ದಾರಿ. ಆದರೆ, ಇಲ್ಲೊಂದು ಸರ್ಕಾರಿ ಶಾಲೆ ಕನಿಷ್ಠ ಮೂಲ ಸೌಕರ್ಯಗಳೂ ಇಲ್ಲದೆ ನಲುಗುತ್ತಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯ ಬಗ್ಗೆ ಗ್ರಾಮಸ್ಥ ಸಂದೇಶ್‌ ಎಂಬುವರು ಫೇಸ್‌ಬುಕ್‌ ಪೋಸ್ಟ್‌ ಹಾಕುವ ಮೂಲಕ ಶಾಸಕರು ಶಾಲೆಗೆ ಭೇಟಿ ನೀಡಿ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಲಸುಲಿಗೆ ಗ್ರಾಮ ಕಾಡಾನೆ ಸಮಸ್ಯೆ ಪೀಡಿತ ಪ್ರದೇಶ. ಈ ಭಾಗದಲ್ಲಿ ನಿತ್ಯ ಕಾಡಾನೆಗಳು ಸಂಚಾರ ಮಾಡುತ್ತಲೇ ಇರುತ್ತವೆ. ಈ ಕಾರಣದಿಂದಾಗಿ ಗ್ರಾಮದ ಮಕ್ಕಳು ಪಟ್ಟಣದ ಶಾಲೆಗೆ ಹೋಗಿಬರುವುದು ಕಷ್ಟ. ಹಾಗಾಗಿ ಇರುವ ಒಂದು ಶಾಲೆಗಾದರೂ ಅಗತ್ಯ ಸೌಕರ್ಯ ಕಲ್ಪಿಸಿ ಎಂಬುದು ಅವರ ಆಗ್ರಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ಫೋಟೊಗಳ ಜೊತೆಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಸಂದೇಶ್‌, “ಇದು ನಮ್ಮ ಹಲಸುಲಿಗೆ ಪಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅವಸ್ಥೆ ಮತ್ತು ಅವ್ಯವಸ್ಥೆ. ಶಾಲೆಯ ಮುಖ್ಯ ದ್ವಾರದ ಬೋರ್ಡ್ ನೋಡಿ ಎಷ್ಟೊಂದು ಸುಂದರವಾಗಿದೆ. ಶೌಚಾಲಯ ಎಷ್ಟೊಂದು ಶುಚಿತ್ವ, ಅಚ್ಚುಕಟ್ಟಾಗಿ ಇದೆ” ಎಂದು ಪರೋಕ್ಷವಾಗಿ ಅವ್ಯವಸ್ಥೆಯ ಕುರಿತು ವ್ಯಂಗ್ಯವಾಡಿದ್ದಾರೆ.

ಸಕಲೇಶಪುರ

“ಈ ಶಾಲೆಯ ಆವರಣದಲ್ಲಿ ಗಿಡಗುಂಟೆಗಳು ಬೆಳೆದು ನಿಂತಿವೆ. ಇದು ನಮ್ಮೂರಿನ ಹೆಮ್ಮೆಯ ಶಾಲೆ, ಕಟ್ಟಡ ನೋಡಿ ಎಷ್ಟು ಶೀತಿಲವಾಗಿದೆ, ಅನಾತಿ ದೂರದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಇದ್ದರೂ ಪಂಚಾಯಿತಿ ಅಧ್ಯಕ್ಷರಾಗಲಿ ಸದಸ್ಯರಾಗಲಿ ಈ ಬಗ್ಗೆ ಗಮನ ಹರಿಸಿಲ್ಲ” ಎಂದು ಆರೋಪಿಸಿದ್ದಾರೆ.

“ಸಕಲೇಶಪುರ ಕ್ಷೇತ್ರದಿಂದ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಎಚ್ ಕೆ ಕುಮಾರಸ್ವಾಮಿ ಅವರನ್ನು ದೂರಿ ಎನು ಪ್ರಯೋಜನ ಇಲ್ಲ. ಯಾಕೆಂದರೆ ಇದು ಅವರ ಗಮನಕ್ಕೆ ಬಾರದ ವಿಷಯ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು ಶಾಸಕರ ಗಮನಕ್ಕೆ ತಂದ್ದಿದ್ದರೆ ಈ ಶಾಲೆಗೆ ಅನುದಾನ ನಿಡುತ್ತಿದ್ದರೇನೊ” ಎಂದು ಜನ ಪ್ರತಿನಿಧಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

“ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಹಲಸುಲಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಗೆ ಮೂಲ ಸೌಕರ್ಯ ಕಲ್ಪಿಸುವ ಬಗ್ಗೆ ಗಮನಹರಿಸಬೇಕು. ಈ ಶಾಲೆಗೆ ಸುಸಜ್ಜಿತವಾದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು. ದಯವಿಟ್ಟು ಒಮ್ಮೆ ಈ ಶಾಲೆಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಿ” ಎಂದು ಮನವಿ ಮಾಡಿರುವ ಅವರು, “ಇಲ್ಲವಾದರೆ ಸಾರ್ವಜನಿಕರೇ ಈ ಶಾಲೆಗೆ ಒಂದು ಉತ್ತಮ ಗುಣಮಟ್ಟದ ಶೌಚಾಲಯ ನಿರ್ಮಿಸುವ ಬಗ್ಗೆ ಯೋಚನೆ ಮಾಡಬೇಕಾದೀತು” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ನಿವೇಶನ ಇದ್ದರೂ ಕನ್ನಡ ಭವನ ನಿರ್ಮಾಣಕ್ಕೆ ಹಿಂದೇಟು: ಶಾಂತಲಿಂಗ ಮಠಪತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...