ಕಲಬುರಗಿ-ಬೆಂಗಳೂರು ನಡುವೆ ಎರಡು ಹೊಸ ರೈಲು ಸಂಚಾರ ಆರಂಭಿಸಲು ಆಗ್ರಹ

Date:

ಕಲಬುರಗಿಯಿಂದ ಪ್ರತಿ ತಿಂಗಳಿಗೆ ಅಂದಾಜು ಎರಡು ಲಕ್ಷ ಮಂದಿ ಬೆಂಗಳೂರಿಗೆ ಪ್ರವಾಸ ಮಾಡುತ್ತಾರೆ. ಆದರೆ, ಮುಂಬೈ ವಲಯ ಕಚೇರಿ ಮತ್ತು ಸೊಲ್ಲಾಪೂರ ವಿಭಾಗೀಯ ಕಚೇರಿಗಳು ಕಲಬುರಗಿಯಿಂದ ಹೊಸದಾಗಿ ರೈಲು ಪ್ರಾರಂಭಿಸುವ ಬಗ್ಗೆ ಕಿಂಚಿತ್ತೂ ಗಮನ ಕೊಡದೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆರೋಪಿಸಿದೆ.

ಶೀಘ್ರದಲ್ಲೇ ಕಲಬುರಗಿಯಿಂದ ಬೆಂಗಳೂರಿಗೆ ಮತ್ತು ಬೀದರ ಮಾರ್ಗವಾಗಿ ಕಲಬುರಗಿ ಮೂಲಕ ಯಾದಗಿರಿ, ರಾಯಚೂರು ಮುಖಾಂತರ ಬೆಂಗಳೂರಿಗೆ ಹೊಸ ರೈಲುಗಳು ಕಾಲಮಿತಿಯಲ್ಲಿ ಮಾಡದಿದ್ದರೆ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಕಲಬುರಗಿ ರೈಲ್ವೆ ನಿಲ್ದಾಣದ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಂಬೈ ವಲಯದ ನರಲ್ ಮ್ಯಾನೇಜರ್‌ಗೆ ಕಲಬುರಗಿಯ ಸ್ಟೇಷನ್ ಮಾಸ್ಟರ್ ಮುಖಾಂತರ ಹಕ್ಕೊತ್ತಾಯ ಪತ್ರವನ್ನು ಕ್ಯಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ನೇತೃತ್ವದಲ್ಲಿ ಸಮಿತಿಯ ನಿಯೋಗ, ಕಲಬುರಗಿ ರೈಲ್ವೆ ಸ್ಟೇಷನ್ ಮಾಸ್ಟರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಮುಂಬೈ ಸ್ಟೇಷನ್ ಮಾಸ್ಟರ್ ಜನರಲ್ ಮ್ಯಾನೇಜರ್ ಅವರಿಗೆ ಪತ್ರವನ್ನು ನೀಡಿ ಕಾಲಮಿತಿಯಲ್ಲಿ ಕಲಬುರಗಿ-ಬೆಂಗಳೂರು ಹೊಸ ರೈಲು ಆರಂಭಿಸಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾರ್ವಜನಿಕ ಈಜುಕೊಳದಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ಆಗ್ರಹ

ಸಿಕಿಂದ್ರಾಬಾದ್‌ ವಲಯಕ್ಕೆ ಪತ್ರ ಬರೆದು, ಬೀದರ್‌ ಕಲಬುರಗಿ, ಯಾದಗೀರಿ, ರಾಯಚೂರು ಮಾರ್ಗವಾಗಿ ಹೊಸ ರೈಲು ಆರಂಭಿಸಲು ಒತ್ತಾಯಿಸಿದರು. ಒಟ್ಟಾರೆ, ಬೀದರ್‌ನಿಂದ ಮತ್ತು ಕಲಬುರಗಿಯಿಂದ ಎರಡು ಹೊಸ ರೈಲುಗಳು ಬೆಂಗಳೂರಿಗೆ ತುರ್ತಾಗಿ ಪ್ರಾರಂಭಿಸಿ, ಈ ಭಾಗದ ಜನರ ಬೇಡಿಕೆಗೆ ಗಂಭೀರವಾಗಿ ಸ್ಪಂಧಿಸಿ, ರೈಲ್ವೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಮಿತಿಯ ಮುಖಂಡರಾದ ಮಾಜಿದ್ ದಾಗಿ, ಕಲ್ಯಾಣರಾವ ಪಾಟೀಲ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಸಂಧ್ಯಾರಾಜ ಸ್ಯಾಮ್ಯೂವೆಲ್, ಸಾಜೀದ ಅಲಿ ರಂಜೋಲಿ, ಸಂತೋಷ ಜವಳಿ, ಮಹ್ಮದ ಗೌಸ್, ಶರಣಬಸಪ್ಪ ಕುರಿಕೋಟಾ, ರಾಜು ಜೈನ್, ಶಿವಾನಂದ ಬಿ, ಬಾಬಾ ಫಕ್ರುದ್ದೀನ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...