ಬೆಳಗಾವಿ | ʼಶರಣರ ಶಕ್ತಿʼ ಚಿತ್ರದ ಪ್ರದರ್ಶನ ತಡೆ ಹಿಡಿಯಲು ಆಗ್ರಹ

Date:

ನಿರ್ಮಾಪಕಿ ಆರಾಧನಾ ಕುಲಕರ್ಣಿ ಹಾಗೂ ದಿಲೀಪ ಶರ್ಮಾ ನಿರ್ದೇಶಕದಲ್ಲಿ ಬಿಡುಗಡೆಯಾದ ಸಿನಿಮಾದಲ್ಲಿ ಶರಣರ ಬಗ್ಗೆ ತಪ್ಪು ಸಂದೇಶಗಳನ್ನು ಬಿಂಬಿಸಲಾಗಿದ್ದು, ಕೂಡಲೇ ʼಶರಣರ ಶಕ್ತಿʼ ಚಿತ್ರ ಪ್ರದರ್ಶನ ತಡೆ ಹಿಡಿಯಬೇಕು ಎಂದು ಬೆಳಗಾವಿ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಆಗ್ರಹಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಶರಣರ ಶಕ್ತಿʼ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಶರಣರ ಬಗ್ಗೆ ಸತ್ಯ ಸಂಗತಿಗೆ ವಿರುದ್ಧವಾದ ಸನ್ನಿವೇಶಗಳಿವೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಶರಣರ ಬಗ್ಗೆ ಅವಹೇಳನಕಾರಿಯಾದ ಮತ್ತು ಸತ್ಯಸಂಗತಿಗೆ ವಿರುದ್ಧವಾದ ಸನ್ನಿವೇಶಗಳಿವೆ. ಬಸವಣ್ಣ ಅವರನ್ನು ಖಡ್ಗದಿಂದ ಸಂಹಾರ ಮಾಡುವ ಸನ್ನಿವೇಶವಿದೆ. ಅಕ್ಕನಾಗಮ್ಮನವರ ವೈವಾಹಿಕ ಜೀವನ ಚರಿತ್ರೆ ತಿರುಚಲಾಗಿದೆ ಹಾಗೂ ಜಂಗಮರನ್ನು ‘ಪುಂಡಜಂಗಮ’ ಎಂದು ಜರಿಯಲಾಗಿದೆʼ ಎಂದು ಕಿಡಿಕಾರಿದರು.

ʼ30-35 ಸೆಕೆಂಡುಗಳ ಟ್ರೇಲರಿನಲ್ಲಿನಲ್ಲಿಯೇ ಇಷ್ಟೊಂದು ತಪ್ಪುಗಳಿರಬೇಕಾದರೆ ಚಿತ್ರದುದ್ದಕ್ಕೂ ಇನ್ನೆನು ಗಂಡಾಂತರಕಾರಿಯಾದ ಸನ್ನಿವೇಶ, ಸಂಭಾಷಣೆಗಳಿರಬಹುದೆಂಬ ಆತಂಕ ಲಿಂಗಾಯತರಲ್ಲಿ ಹುಟ್ಟುಹಾಕಿದೆ. ಇದು ಲಿಂಗಾಯತರ ಭಾವನೆಗಳಿಗೆ ದಕ್ಕೆ ತರುತ್ತವೆ. ಒಂದು ಧರ್ಮವನ್ನು ಅವಹೇಳನ ಮಾಡುವುದು ಕಾನೂನು ಬಾಹಿರ ಮಾತ್ರವಲ್ಲದೇ, ಭಾರತ ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಬೆಳಗಾವಿ | ಬೆಳ್ಳುಳ್ಳಿ ಬೆಳೆಗೆ ಉತ್ತಮ ಬೆಲೆ; ರೈತರ ಮುಖದಲ್ಲಿ ಮಂದಹಾಸ

ಕರ್ನಾಟಕ ಸರಕಾರ ವಿಶ್ವ ಗುರುಬಸವಣ್ಣನವರನ್ನು ʼಸಾಂಸ್ಕೃತಿಕ ನಾಯಕʼ ನೆಂದು ಘೋಷಿಸಿ ತನ್ನನ್ನು ತಾನೇ ಗೌರವಿಸಿಕೊಂಡಿದೆ. ಅವರ ಆದರ್ಶವನ್ನು ಕೊಂಡಾಡಬೇಕಾದ ದಿನಗಳಲ್ಲಿ ಶರಣರ ಬಗ್ಗೆ ತಪ್ಪು ಸಂದೇಶ ನೀಡುವುದು ಅಕ್ಷಮ್ಯವಾಗಿದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...