ಏ.14ರಂದೇ ಜಿಲ್ಲಾಡಳಿತ ಭವನದ ಮುಂದೆ ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣಕ್ಕೆ ಒತ್ತಾಯ

Date:

ಕೋಲಾರ: ನಗರದ ಹೊರವಲಯದ ಜಿಲ್ಲಾಡಳಿತ ಭವನದ ಆವರಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದ್ದು ಏಪ್ರಿಲ್ 14 ರ ಅವರ ಜಯಂತಿ ದಿನದಂದೇ ಅನಾವರಣಗೊಳಿಸಲು ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ನಗರದ ನಚಕೇತನ‌ ನಿಲಯದ ಆವರಣದಲ್ಲಿ ಸೋಮವಾರ ದಮನಿತರ ಸೇವಾ ಸಮಿತಿ ರಾಜ್ಯಾಧ್ಯಕ್ಷ ಮೇಡಹಾಳ ಮುನಿಅಂಜಿನಪ್ಪ ಮಾತನಾಡಿ ಅಂಬೇಡ್ಕರ್ ಪುತ್ಥಳಿ ದಲಿತ ಸಂಘಟನೆಗಳ ಬಹುದಿನ ಬೇಡಿಕೆಯಾಗಿದ್ದು ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ಅವರು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಅದು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿದ ನಂತರ ಸ್ಥಾಪಿಸಲು ಅನುಮತಿ ನೀಡಿದ್ದಾರೆ ಅವರಿಗೆ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು ಕೂಡಲೇ ಪೂರ್ವ ಸಿದ್ದತೆ ಮಾಡಿಕೊಂಡು ಏಪ್ರಿಲ್14 ರಂದು ಅನಾವರಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮುಂದಾಗುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದರಕಾಸ್ತು ಸಮಿತಿ ಸದಸ್ಯ ಖಾದ್ರಿಪುರ ಬಾಬು ಮಾತನಾಡಿ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸಂವಿಧಾನವನ್ನು ಬರೆದು ಕೊಟ್ಟು ಭಾರತದ ಸಂವಿಧಾನಾತ್ಮಕ ಆಡಳಿತ ನಡೆಸಲು ಸಹಕಾರಿಯಾಗಿದ್ದಾರೆ ಅಭಿವೃದ್ಧಿ ಭಾರತ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಧೀಮಂತ ನಾಯಕರಾಗಿದ್ದು ಅವರ ಪುತ್ಥಳಿ ಅನಾವರಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ 50 ಲಕ್ಷ ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್ ಹಾಗೂ ನಸೀರ್ ಅಹಮದ್ ತಲಾ 12 ಲಕ್ಷ ಕೊಟ್ಟಿದ್ದಾರೆ ಅವರಿಗೆ ಸಂಘಟನೆಗಳ ಪರವಾಗಿ ಧನ್ಯವಾದಗಳು ಉಳಿಕೆದ್ದು ಸರ್ಕಾರದ ಅನುದಾನ ಬಳಸಿ ಕೂಡಲೇ ಪುತ್ಥಳಿ ನಿರ್ಮಾಣ ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಿರಿಯ ದಲಿತ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ಮಾತನಾಡಿ ತುಳಿತಕ್ಕೊಳಪಟ್ಟ ಶೋಷಿತರ ಸಮಾನತೆಯ ಸಮಬಾಳು ಸಮಪಾಲು ದೊರಕಿಸಿಕೊಟ್ಟಿದ್ದು ಹಾಗೂ ದೇಶಕ್ಕೆ ಅಪಾರ ಕೊಡುಗೆ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಜಿಲ್ಲಾಡಳಿತ ಭವನದಲ್ಲಿ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರ ಮೂಲಕ ಸರ್ಕಾರಕ್ಕೆ ಅರ್ಜಿಸಿದ್ದು ಸರ್ಕಾರವು ಸ್ಪಂದಿಸಿದ್ದು ಕೂಡಲೇ ಅನಾವರಣಗೊಳಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? 25000 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಪಾತ್ರವಾದ ಚಿಕ್ಕಬಳ್ಳಾಪುರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಸೂಲೂರು ಅಂಜಿನಪ್ಪ, ಮುಖಂಡರಾದ ಡಿಪಿಎಸ್ ಮುನಿರಾಜು, ಬೈರಂಡಹಳ್ಳಿ ನಾಗೇಶ್, ಈನೆಲ ಈಜಲ ವೆಂಕಟಾಚಲಪತಿ, ಆರ್.ನಾರಾಯಣಪ್ಪ, ರಾಂಪುರ ಮುನಿರಾಜು, ಗದ್ದೆಕಣ್ಣೂರು ನಾರಾಯಣಪ್ಪ, ಶಿವಣ್ಣ, ಬೆಟ್ಟಹೊಸಪುರ ರವಿ, ನಾಗೇಂದ್ರ, ಕಲ್ಕರೆ ನಾರಾಯಣಸ್ವಾಮಿ, ಮೋಚಿಪಾಳ್ಳ ನಾಗೇಶ್, ಅಂಬೇಡ್ಕರ್ ನಗರ ರವಿ, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...