ಹಾಸನ | ಮಾಜಿ ಶಾಸಕರ ಬಂದೂಕು ಪರವಾನಗಿ ರದ್ದು; ಆದೇಶ ಹಿಂಪಡೆಯಲು ಆಗ್ರಹ

Date:

  • ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ವತಿಯಿಂದ ಮನವಿ ಸಲ್ಲಿಕೆ
  • ಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ  

ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ ಈ ಬಾರಿಯ ವಿಧಾನಸಭಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ಹೇಳಿದೆ. ಹಾಸನ ಜಿಲ್ಲೆಯ ಸಕಲೇಶಪುರ ಉಪವಿಭಾಗಾಧಿಕಾರಿಗೆ ಸಂಘಟನೆಯ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ.

“ಎಚ್.ಎಂ ವಿಶ್ವನಾಥ್‌ 2004ರಿಂದ 2008ರ ವರೆಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಅವರ ಅವಧಿಯಿಂದಲೂ ಈ ಭಾಗದಲ್ಲಿ ಕಾಡಾನೆ ಸಮಸ್ಯೆ ಇದ್ದು, ಅಲ್ಲಿಂದ ಈವರೆಗೂ ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ. ಮಲೆನಾಡು ಭಾಗದ ಕಾಡಾನೆ ಸಮಸ್ಯೆ ಬಗ್ಗೆ ಅವರು ಸತತವಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ಗಮನಸೆಳೆಯುತ್ತಲೇ ಬಂದಿದ್ದಾರೆ” ಎಂದು ಮನವಿ ಪತ್ರದಲ್ಲಿ ಕಾಫಿ ಬೆಳೆಗಾರರು ಉಲ್ಲೇಖಿಸಿದ್ದಾರೆ.

“ಮಲೆನಾಡು ಭಾಗದಲ್ಲಿ ಕಾಡಾನೆ ಮತ್ತು ಇತರೆ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಡಾನೆ ದಾಳಿಗೆ ಈವರೆಗೆ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದಲ್ಲಿ ಬೆಳೆಹಾನಿ ಉಂಟಾಗುತ್ತಲೇ ಇದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಪ್ರಸ್ತುತ ಅಂದಾಜು 80 ರಿಂದ 90 ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆ ಹಾವಳಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ ತೀವ್ರಗೊಳ್ಳುತ್ತಿದಂತೆ ಕಳೆದ ಎರಡು ವರ್ಷಗಳಿಂದ ಆನೆಗಳ ಚಲನವಲನ ತಿಳಿದು ಜನರಿಗೆ ಮಾಹಿತಿ ನೀಡಲು ಆರ್ ಆರ್ ಟಿ ಮತ್ತು ಟಾಸ್ಕ್ ಫೋರ್ಸ್ ಎಂಬ ಪಡೆಗಳನ್ನು ನೇಮಿಸಲಾಗಿದೆ. ಆದರೆ, ಅವರು ಕಾಡಾನೆ ಹಾವಳಿ ನಿಯಂತ್ರಿಸಲು ವಿಫಲವಾಗಿದ್ದು, ಹಿಡುವಳಿ ಜಮೀನಿನಲ್ಲಿ ರೈತರು ಬೆಳೆದ ಬೆಳೆಯನ್ನು ಕಾಡಾನೆಗಳಿಂದ ಮೇಯಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಬೇಸತ್ತು ಹೋರಾಟ ತೀವ್ರಗೊಂಡ ಬಳಿಕ ಸರ್ಕಾರ ನೇಮಿಸಿದ್ದ ಸಮಿತಿಯ ಸಕಲೇಶಪುರಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಭೆಯಲ್ಲಿ ಕಾಡಾನೆಗಳ ಹಾವಳಿಯಿಂದ ಬೇಸತ್ತು ಭಾವನಾತ್ಮಕವಾಗಿ ಮಾತನಾಡುವ ವೇಳೆ “ನನ್ನ ತೋಟದಲ್ಲಿ ಕಾಡಾನೆಗಳಿದ್ದು, ನನ್ನ ಮೇಲೆ ದಾಳಿಗೆ ಮುಂದಾದರೆ ಆತ್ಮರಕ್ಷಣೆಗಾಗಿ ಗುಂಡು ಹೊಡೆಯುತ್ತೇನೆ” ಎಂದು ಹೇಳಿದ್ದರು. ಬಳಿಕ ಬಂದೂಕು ಲೈಸೆನ್ಸ್‌ ರದ್ಧು ಮಾಡಿ ಬಂದೂಕನ್ನು ಠೇವಣಿ ಇರಿಸಿಕೊಳ್ಳಲಾಗಿತ್ತು” ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

“ಈ ಬಗ್ಗೆ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಮೌಖಿಕವಾಗಿ ಸೂಚನೆ ನೀಡಿದ್ದರೂ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್‌ ಅವರ ಲೈಸೆನ್ಸ್ ಮತ್ತು ಬಂದೂಕನ್ನು ಅಮಾನತು ಮಾಡಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ವಿಷಯವು ಬೆಳೆಗಾರರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತಿದ್ದು, ತಕ್ಷಣವೇ ಆದೇಶವನ್ನು ಹಿಂಪಡೆದು ಪಡೆದು ಸಾರ್ವಜನಿಕವಾಗಿ ಮಲೆನಾಡಿನಲ್ಲಿ ಶಾಂತಿಯಿಂದ ಬದುಕಲು ಅವರ ಲೈಸೆನ್ಸ್ ಮತ್ತು ಬಂದೂಕನ್ನು ವಾಪಾಸ್ ನೀಡಬೇಕೆಂದು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಒತ್ತಾಯಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆ.ಜಿ.ಎಫ್ (ಕರ್ನಾಟಕ ಬೆಳೆಗಾರರ ಒಕ್ಕೂಟ)ದ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಲೋಹಿತ್ ಕೌಡಹಳ್ಳಿ, ಎಚ್.ಡಿ.ಪಿ.ಎ ಕಾರ್ಯದರ್ಶಿ ಎಂ ಬಿ ರಾಜೀವ್, ಕಾಫಿ ಬೆಳೆಗಾರರದ ಬಿರಡಹಳ್ಳಿ ಮದನ್, ಹಾನುಬಾಳ್ ಚೇತನ್, ಹಲಸುಲಿಗೆ ರಮೇಶ್ ಹಾಗೂ ಇತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...