ಬಾಕಿ ವೇತನ ಪಾವತಿಗೆ ಆಗ್ರಹ; ಕಬ್ಬು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Date:

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಬ್ಬು ರೈತರು ಸಕ್ಕರೆ ಕಾರ್ಖಾನೆಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ನೀತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ರೈತ ಮುಖಂಡರೊಂದಿಗೆ ಮಾತುಕತೆ ನಡೆಯಿತು. ಅಧಿಕಾರಿಗಳು ರೈತರಿಗೆ ಶೀಘ್ರದಲ್ಲೇ ಬಾಕಿ ಪಾವತಿ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಡಳಿತ ಭವನದ ಗೇಟ್ ಬಂದ್ ಮಾಡಿ ಬ್ಯಾರಿಕೇಡ್ ಅಳವಡಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಯಿತು. ಬ್ಯಾರಿಕೇಡ್ ತಳ್ಳಿ ಆವರಣಕ್ಕೆ ತೆರಳಲು ರೈತರು ಯತ್ನಿಸಿದಾಗ ಪೊಲೀಸರು ತಡೆದರು. ಕೋಪಗೊಂಡ ರೈತ ಮುಖಂಡರು “ಜಿಲ್ಲಾಡಳಿತ ಭವನಕ್ಕೆ ಮನವಿ ನೀಡಲು ತೆರಳುತ್ತಿರುವ ನಮಗೆ ಗೌರವವಿಲ್ಲವೇ? ನಾವೇನು ಭಯೋತ್ಪಾದಕರಾ? ಜಿಲ್ಲಾಡಳಿತ ಪದೇ ಪದೆ ರೈತರ ಬಗ್ಗೆ ನಿರ್ಲಕ್ಷ ಧೋರಣೆ ತಾಳುತ್ತಿದೆ. ನಮಗೆ ಒಳಗೆ ಹೋಗಲು ಅವಕಾಶ ಕೊಡಿ ಕೊಡಿ” ಎಂದು ಆಕ್ರೋಶಗೊಂಡರು. ಪೊಲೀಸರು ಹಾಗೂ ರೈತರ ಮದ್ಯೆ ವಾಗ್ವದ ನಡೆಯಿತು. ಕೊನೆಗೆ ಪೊಲೀಸರು ರೈತರು ಒಳಗೆ ಹೋಗಲು ಅವಕಾಶ ಕೊಟ್ಟರು.

WhatsApp Image 2025 06 20 at 1.41.08 PM

ಸಭೆಯಲ್ಲಿ ಮಾತನಾಡಿದ ಆಹಾರ, ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ”ಜಿಲ್ಲೆಯ 14 ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಹಂಗಾಮಿಗೆ ಕಬ್ಬು ನುರಿಸಿವೆ. ಏ.23 ರಂದು ನಡೆಸಿದ ಸಭೆ ಸಂದರ್ಭದಲ್ಲಿ ಅಂದಾಜು 498 ಕೋಟಿ ರೂ. ಬಾಕಿ ಇತ್ತು. ಸಕ್ಕರೆ ಆಯುಕ್ತರ ನೇತೃತ್ವದಲ್ಲಿ ನೋಟಿಸ್ ನೀಡಿ ಬಾಕಿ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ 98 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಈ ಮಧ್ಯೆ 4 ಕಾರ್ಖಾನೆಗಳು ಬಾಕಿ ಪಾವತಿಗೆ ಕಾಲಾವಕಾಶ ಕೋರಿ ಹೈಕೋರ್ಟ್ ಮೊರೆಹೋಗಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಬಂಧನ

ಮುಖಂಡರಾದ ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ, ಯಲ್ಲಪ್ಪ ಹೆಗಡೆ, “ಬಾಕಿ ಪಾವತಿಸಬೇಕಾದ ಕಾರ್ಖಾನೆಗಳು ಹೈಕೋರ್ಟ್ ಮೊರೆ ಹೋದರೆ ರೈತರಿಗೆ ಯಾವಾಗ ಹಣ ದೊರೆಯಬೇಕು? ಕುಟುಂಬ ನಿರ್ವಹಣೆ ಕಷ್ಟಕರವಾಗಿರುವಾಗ ಬಾಕಿ ಕೊಡದಿದ್ದರೆ ಕೃಷಿ ಕೈಗೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಬೇಕು. ನಿಯಮದ ಪ್ರಕಾರ 14 ದಿನದಲ್ಲಿ ಬಾಕಿ ಕೊಡದಿದ್ದರೆ ಬಡ್ಡಿ ಪಾವತಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ನ್ಯಾಯಾಲಯದ ಗಮನ ಸೆಳೆಯಬೇಕು. ನಾವು ಕಾರ್ಖಾನೆಗಳ ಎದುರು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಕಬ್ಬು ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿ 20 ದಿನದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಕೊಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಎಂ ಮಾತನಾಡಿ, ”ಕಾನೂನಾತ್ಮಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಲಾಗುತ್ತದೆ. ತಡೆಯಾಜ್ಞೆ ತೆರವುಗೊಳಿಸಲು ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಲಿದ್ದಾರೆ. ಕಬ್ಬು ಆಯುಕ್ತರೊಂದಿಗೆ ಮಾತನಾಡಿ ಶೀಘ್ರದಲ್ಲಿ ಸಭೆ ಆಯೋಜಿಸಲಾಗುತ್ತದೆ. ನಮಗೆ 20 ದಿನ ಕಾಲಾವಕಾಶ ನೀಡಬೇಕು. ರೈತರ ಪರವಾಗಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ” ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಎಸ್‌ಪಿ ಅಮರನಾಥ ರೆಡ್ಡಿ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...