ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ.
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. ಅಂತಹ ವ್ಯಕ್ತಿಗೆ ಅವಮಾನ ಮಾಡಿರುವುದು ಖಂಡನೀಯ” ಎಂದಿದ್ದಾರೆ.
“ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿ, ಸಮಾಜದ ಸ್ವಾಸ್ತ್ರ ಕೆಡಿಸಿ, ಅರಾಜಕತೆ ಸೃಷ್ಟಿಸುತ್ತಿರುವುದು ದುರದೃಷ್ಠಕರ. ಇಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ರಾಜ್ಯದ ಎಲ್ಲಡೆ ಇರುವ ಅಂಬೇಡ್ಕರ್ ಪ್ರತಿಮೆಗಳ ಬಳಿ ಸಿ.ಸಿ ಕ್ಯಾಮೇರಾ ಅಳವಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲ ಜಗದೀಶ ಎನ್.ದಾಸನಕೇರಿ, ವಿಜಯಕುಮಾರ ಅಬ್ಬೆತುಮಕೂರ, ಬಸವರಾಜ ಮೇತ್ರಿ, ಸುಮಿತ್ರಪ್ಪ ಬಳಿಚಕ್ರ, ಹೆಚ್. ಆರ್.ಶಿವಮೂರ್ತಿ ನಾಗರಾಜ, ಮ್ಯಾಗೇರಿ, ನಾಗರಾಜ ರಾಯಚೂರಕರ,
ಮಲ್ಲಿಕಾರ್ಜುನ ಕುರಕುಂದ, ಯೇಸುರಾಜ ಹುಲಕಲ್ ಇನ್ನಿತರರು ಇದ್ದರು.




