ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಆರೋಪಿಗಳ ಗಡಿಪಾರಿಗೆ ಆಗ್ರಹ

Date:

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ದೇಶದ್ರೋಹ ಪ್ರಕರಣದಡಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದೆ.

ಯಾದಗಿರಿಯ ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮರೆಪ್ಪ ಚಟ್ಟೇರಕರ್, “ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ಸಮಾಜದ ಸ್ವಾಸ್ಥ್ಯ ಕೆಡಿಸಿ, ಅರಾಜಕತೆ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶಕ್ಕೆ ಸಂವಿಧಾನ ಕೊಟ್ಟ ಜ್ಞಾನಿಗೆ ಇಲ್ಲಿನ ಅಜ್ಞಾನಿಗಳು ಅವಮಾನ ಮಾಡಿದ್ದಾರೆ. ಘಟನೆಯ ಅಕ್ಷಮ್ಯವಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಘಟನೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚನೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ದೇಶದಲ್ಲಿ ಇಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ರಾಜ್ಯದಲ್ಲಿರುವ ಎಲ್ಲ ಅಂಬೇಡ್ಕರ್ ಪ್ರತಿಮೆಗಳ ಬಳಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪೊಲೀಸರನ್ನು ನಿಯೋಜನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಪ್ರಭು ಬುಕ್ಕಲ್,ಭೀಮಾಶಂಕರ ಯರಗೋಳ,ಮಲ್ಲಪ್ಪ ಎಸ್.ಕೆ. ಚಾಮನಳ್ಳಿ,ಗೋಪಾಲ ತೆಳಗೇರಿ,ಸೈದಪ್ಪ ಕೂಲೂರು,ಲಾಲಪ್ಪ ತಲಾರಿ,ತಾಯಪ್ಪ ಭಂಡಾರಿ,ಮಾನಪ್ಪ ಕಟ್ಟಿಮನಿ,ಕಾಶಿನಾಥ ನಾಟೇಕಾರ,ರಾಹೊಲ್ ಕೊಲ್ಲೂರಕರ್,ಚಂದ್ರಕಾಂತ ಮುನಿಯಷ್ಟೂರ,ಪರಶುರಾಮ್ ಒಡೆಯರ್,ಮಲ್ಲಿನಾಥ ಸುಂಗಲಕರ್,ಹಣಮಂತ್ರಾಯ,ಮಲ್ಲಿಕಾರ್ಜುನ ಕುರಕುಂದಿ,ಮರುಳಸಿದ್ದ ನಾಯ್ಕಲ್, ಚಂದಪ್ಪ ಮುನಿಯಪ್ಪನೋರ,ನಿಂಗಣ್ಣ ಬೀರನಾಳ, ಸಂಪತ್ ಚಿನ್ನಾಕಾರ,ಮಾನಪ್ಪ ಎನ್. ಚಲುವಾದಿ, ಗೌತಮ ಅರಿಕೇರ, ಭೀಮಶಂಕರ್ ಈಟೇ, ಚಂದ್ರಕಾಂತ್ ಚಲವಾದಿ, ವಸಂತ, ಮಲ್ಲಪ್ಪ, ಶರಣಪ್ಪ,ಪ್ರೋ. ಮಾನುಗುರಿಕಾರ್, ಅಜೀಬ್ ಸಾಬ್ ಐಕೂರ್, ಮಲ್ಲಿಕಾರ್ಜುನ ಗುರುಸುಣಿಗಿ, ತಿಮ್ಮಣ್ಣ ರಾಯಚೂರಕರ್, ಬಸವರಾಜ್ ಗೋನಾಲ್ ಅರುಣುಕುಮಾರ್ ರಾಸನಕೇರಿ, ಸೈಬಣ್ಣ ನಟೇಕಾರ, ಸೈದಪ್ಪ ಕಣಜಿಕರ್, ಶಿವು ಖಾನಾಪುರ, ಭೀಮಣ್ಣ ಸುಂಗಲಕರ್, ಗ್ಯಾನಪ್ಪ ಬಿ. ಕಾಂಬಳೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...