ಚಿಕ್ಕಬಳ್ಳಾಪುರ | 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ಸೈಲೆನ್ಸರ್‌ಗಳ ನಾಶ

Date:

ಪೊಲೀಸ್‌ ಇಲಾಖೆ ವಶಪಡಿಸಿಕೊಂಡಿದ್ದ ಸುಮಾರು 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ಬುಲ್ಡೋಜರ್‌ ಮೂಲಕ ನಾಶಗೊಳಿಸಲಾಯಿತು.

ಈ ವೇಳೆ ಮಾತನಾಡಿದ ಎಸ್ಪಿ ಕುಶಾಲ್‌ ಚೌಕ್ಸೆ, ನಗರದಾದ್ಯಂತ ಕರ್ಕಶ ಧ್ವನಿಯ ಮೂಲಕ ಸಾರ್ಚಜನಿಕರಿಗೆ, ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಸುಮಾರು 150 ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಕಳೆದ 15 ದಿನಗಳಿಂದ ವಶಪಡಿಸಿಕೊಂಡಿದ್ದು, ಇಂದು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋಜು, ಮಸ್ತಿ, ರೀಲ್ಸ್‌ಗಳ ಹುಚ್ಚಿನಿಂದ ಯುವಜನತೆ ಈ ರೀತಿಯ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿದ್ದ ಹಿನ್ನೆಲೆ ಇಲಾಖೆ ವತಿಯಿಂದ ಕ್ರಮ ವಹಿಸಲಾಗಿದೆ. ಒಂದೊಂದು ಸೈಲೆನ್ಸರ್‌ಗಳು ದುಬಾರಿ ಬೆಲೆಯದ್ದಾಗಿದ್ದು, 10 ಸಾವಿರದಿಂದ 50 ಸಾವಿರದವರೆಗೆ ಬೆಲೆ ಬಾಳುತ್ತವೆ. ಒಟ್ಟಾರೆಯಾಗಿ ಇಂದು 5 ಲಕ್ಷ ಮೌಲ್ಯದ 150 ಸೈಲೆನ್ಸರ್‌ಗಳನ್ನು ನಾಶಪಡಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಿಷ್ಟೇ ಅಲ್ಲದೆ ಸೈಲೆನ್ಸರ್‌ ತಯಾರಿಸುವ ಗ್ಯಾರೇಜ್‌ ಹಾಗೂ ಅಂಗಡಿ ಮಾಲೀಕರಿಗೂ ಸಹ ಇಲಾಖೆ ವತಿಯಿಂದ ಎಚ್ಚರಿಕೆ ನೀಡಲಾಗಿದೆ. ಜತೆಗೆ ತೀಕ್ಷ್ಣ ಸ್ವರೂಪದ ಎಲ್.ಇ.ಡಿ ಬಲ್ಬ್‌ ಅಳವಡಿಸುವ ಸವಾರರಿಗೂ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು, ಬಳಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಎಲ್.ಇ.ಡಿ ಬಲ್ಬ್‌ಗಳನ್ನೂ ವಶಪಡಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಗಸ್ತು ವಾಹನಗಳನ್ನು ಚಲಾಯಿಸುವ ಮೂಲಕ ಎಸ್ಪಿ ಕುಶಾಲ್‌ ಚೌಕ್ಸೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಈ ವೇಳೆ ಎಎಸ್ಪಿ ರಾಜಾ ಖಾಸೀಂ, ಸಂಚಾರಿ ಪೊಲೀಸ್‌ ಠಾಣೆ ಅಧಿಕಾರಿ ಮಂಜುಳ, ನಗರ ಪೊಲೀಸ್‌ ಇನ್ಸ್ಪೆಕ್ಟರ್‌ ನಂಜುಡಯ್ಯ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...