ರಾಯಚೂರು | ಬೀಳುವ ಹಂತಕ್ಕೆ ತಲುಪಿದ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ ಕಟ್ಟಡ

Date:

ಆ ಸರ್ಕಾರಿ ಶಾಲೆಗೆ ದಶಮಾನೋತ್ಸವ ಕಳೆದಿದೆ. ಗೋಡೆ ಬಿರುಕು ಬಿಟ್ಟಿದೆ, ಬಾಗಿಲು ಶಿಥಿಲವಾಗಿದೆ. ಕಟ್ಟಿರುವ ಶಾಲೆಯ ಕೊಠಡಿಗಳು ಇಂದೋ-ನಾಳೆಯೋ ಬೀಳುವ ಹಂತಕ್ಕೆ ತಲುಪಿದೆ.

ಹೌದು. ಇದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿರುವ ಗಬ್ಬೂರು ಹೋಬಳಿಯ ಸರ್ಕಾರಿ ಪ್ರೌಢಶಾಲೆಯ ದುಸ್ಥಿತಿ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದಶಮಾನೋತ್ಸವ ಕಳೆದ ಶಾಲೆಗೆ ಈ ಪರಿಸ್ಥಿತಿ ಬಂದೊದಗಿದೆ.

1965ರಲ್ಲಿ ಕಟ್ಟಿದ ಈ ಶಾಲೆಯ ಕಟ್ಟಡವು ಶಿಥಿಲಗೊಂಡು ಇಂದೋ-ನಾಳೆಯೋ ಬೀಳುವ ಹಂತಕ್ಕೆ ಬಂದಿದ್ದು ಮಕ್ಕಳು ,ಶಿಕ್ಷಕರು ಭಯದಲ್ಲಿ ಇರುವಂತಾಗಿದೆ. ಶಾಲೆಯಲ್ಲಿ 16 ಕೊಠಡಿಗಳಿದ್ದು, 08 ಕೊಠಡಿಗಳು ಶಿಥಿಲಗೊಂಡು ಕೊಠಡಿಗಳು ಧರೆಗೆ ಉರುಳುವ ಅಪಾಯದಲ್ಲಿವೆ. ಶಾಲೆಯಲ್ಲಿ ಒಟ್ಟು 687 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಕಟ್ಟಡದ ದುಸ್ಥಿತಿ ಕಂಡು ಪಾಲಕರು ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ ಬಂದರೆ ಗೋಡೆಯಿಂದ ನೀರು ಸೋರಲು ಆರಂಭಿಸುತ್ತದೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಶಾಲೆ ಮಳೆಯಿಂದ ಸೋರುತ್ತಿದ್ದರೂ ಕೂಡ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾಯಕಲ್ಪ ಒದಗಿಸಲು ಮುಂದಾಗಿಲ್ಲ. ದುರಂತ ಎಂದರೆ ಮಳೆ ಬಂದರೆ ತರಗತಿಗಳಲ್ಲಿ ಪಾಠ ನಡೆಯುವುದಿಲ್ಲ. ಕೆಲ ಕೊಠಡಿಗಳಲ್ಲಿ ಮಳೆ ಬಂದು ‌ನೀರು ಸೋರಲು ಆರಂಭವಾದರೆ ಮಕ್ಕಳು ನಿಂತುಕೊಂಡು ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಪೋಷಕರು ತಮ್ಮ ಮಕ್ಕಳ ಕಷ್ಟವನ್ನು ಹೇಳಿಕೊಂಡಿದ್ದಾರೆ.

ಈ ಸಂಬಂಧ ಗ್ರಾಮಸ್ಥ ಶಾಂತಕುಮಾರ ಹೊನ್ನಟಗಿ ಮಾತನಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಕಟ್ಟಡಗಳು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದೆ. ಮಳೆ ಬಂದಾಗ ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಶಾಲೆಯ ಸಮಸ್ಯೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ್ ಅವರನ್ನು ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿಯವರು ತಿಳಿಸಿದ್ದಾರೆ. ಶಾಲೆಯ ಬಗ್ಗೆ ಡಿಡಿಪಿಐ ಅವರನ್ನು ಭೇಟಿಯಾಗಿ ಮನವಿ ಕೂಡ ಸಲ್ಲಿಸಲಾಗಿದೆ. ಶಾಲೆಯ ಸ್ಥಿತಿಗತಿ, ಇಂಗ್ಲಿಷ್ ವಿಷಯಕ್ಕೆ ಶಿಕ್ಷಕರಿಲ್ಲದೆ ಮಕ್ಕಳ ಭವಿಷ್ಯ ಅಂಧಕಾರದಲ್ಲಿ ಮುಳುಗಿದೆ ಎಂದು ಶಾಂತಕುಮಾರ ತಿಳಿಸಿದರು.

WhatsApp Image 2024 09 09 at 00.39.39 edited 1

ಶಾಲೆಯ ಸಂಬಂಧ ಶಾಲಾ ಮುಖ್ಯೋಪಾಧ್ಯಾಯ ವನಕೇರಪ್ಪ ಅವರನ್ನು ಸಂಪರ್ಕಿಸಿದಾಗ, ಶಾಲೆಯಲ್ಲಿ 16 ಕೊಠಡಿಗಳಿದ್ದು, ಅದರಲ್ಲಿ 8 ಹಳೆ ಕೊಠಡಿಗಳು ಪೂರ್ತಿ ಶಿಥಿಲಗೊಂಡಿವೆ. 8 ಮಾತ್ರ ಕೊಠಡಿಗಳು ಸರಿಯಾಗಿವೆ ಎಂದರು.

ಶಾಲೆಯಲ್ಲಿ ಒಟ್ಟು 687 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಹೆಸರಿಗೆ 12 ಶೌಚಾಲಯಗಳಿದ್ದರೂ ಕೂಡ, ಅದರಲ್ಲಿ 4 ಮಾತ್ರ ಸರಿಯಾಗಿವೆ. ಕೆಲವು ಪಾಳು ಬಿದ್ದಿವೆ.

20 ಮಕ್ಕಳಿಗೆ ಒಂದು ಶೌಚಾಲಯ ಇರಬೇಕು ಎಂದು ಸರ್ಕಾರದ ನಿಯಮವಿದೆ. ಕಟ್ಟಡ ಸಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದರು.

WhatsApp Image 2024 09 09 at 00.39.38 edited
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...