ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಬಸ್ ಕಂಡಕ್ಟರ್ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಅಂಚೇಸುಗೂರು ಬಳಿ ಬೆಳಿಗ್ಗೆ ನಡೆದಿದೆ.
ಅಂಜುಳ ಗ್ರಾಮದಿಂದ ದೇವದುರ್ಗಕ್ಕೆ ಮರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆನಾಲ್ ಸೇತುವೆ ದಾಟುವಾಗಲೇ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ಆದೇಶ ರದ್ದುಗೊಳಿಸಲು ಪ್ರತಿಭಟನೆ
ಬಸ್ ನಲ್ಲಿ ಸುಮಾರು ಕೂಲಿ ಕೆಲಸ ಮಾಡುವವರು ಇದ್ದರು ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರ ಸಹಾಯದಿಂದ ಬಸ್ನ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನೆಲ್ಲಾ ಹೊರತೆಗೆದಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ.




