ದಾವಣಗೆರೆ | ಅಂಬೇಡ್ಕರ್ ಗಾಂಧಿ ಪೋಟೋ ಇರಿಸದೇ ಕಸಾಪದಿಂದ ಗಣರಾಜ್ಯೋತ್ಸವ ಆಚರಣೆ ಆರೋಪ

Date:

77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧಿ ಭಾವಚಿತ್ರ ಇರಿಸದೇ ಅವಮಾನ ಮಾಡಲಾಗಿದೆ. ಇವರಿಗೆ ಅಂಬೇಡ್ಕರ್, ಗಾಂಧೀ ಎಂದರೆ ತಾತ್ಸಾರ ಮನೋಭಾವ ಯಾಕೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

1003563225

ಜಗಳೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಂಸ್ಕೃತಿಕ ಭವನದ ಮುಂದೆ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ದ್ವಜಾರೋಹಣ ಮಾಡಿದ್ದು ಶ್ಲಾಘನೀಯ. ಆದರೆ ಡಾ. ಬಿಆರ್ ಅಂಬೇಡ್ಕರ್, ಗಾಂಧೀಜಿಯಂತಹ ಮಹನೀಯರ ಪೋಟೋ ಇಡದೇ ಅಗೌರವ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.‌

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಅಧ್ಯಕ್ಷೆ ಶಿಕ್ಷಕಿ ಗೀತಾಮಂಜುರವರಿಗೆ ಸಾಮಾನ್ಯ ಜ್ಘಾನವಿಲ್ಲ‌ವೇ? ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಣದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಭಾವಚಿತ್ರ ಇರಿಸದೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರೇಗಾ ಮರುಜಾರಿಗೆ ಒತ್ತಾಯಿಸಿ ಗ್ರಾಕೂಸ್ ನಿಂದ ಜಗಳೂರು ಶಾಸಕರಿಗೆ ಮನವಿ

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರು ಸಂವಿಧಾನ ರಚಿಸದೇ ಹೋಗಿದ್ದರೆ ಮಹಿಳೆಯರು ಶಿಕ್ಷಣ ಪಡೆಯುತ್ತಿರಲಿಲ್ಲ. ಮತದಾನದ ಹಕ್ಕು ವಂಚಿತವಾಗಿ ಕೇವಲ ಮನುಸ್ಮುತಿ ಹೇರಲ್ಪಟ್ಟ ನಂಬಿಕೆಗಳಿಗೆ ಬಲಿಯಾಗಿ ಅವಮಾನಗಳ ಮಧ್ಯೆ ಕಳೆದು ಹೋಗುತ್ತಿದ್ದರು. ಗಾಂಧೀಜಿಯವರು ರಾಷ್ಟ್ರ ಸ್ವಾತ್ರಂತ್ರ್ಯಕ್ಕಾಗಿ ಹೋರಾಟ ನಡೆಸದೆ ಹೋಗಿದ್ದರೆ ಸ್ವಾತ್ರಂತ್ರ್ಯ ನಮಗೆ ಸುಲಭವಾಗಿ ಸಿಗುತ್ತಿರಲಿಲ್ಲ. ಮಹಿಳೆಯರು ಸ್ವತಂತ್ರವಾಗಿ ಬದುಕಲು ಸಾದ್ಯವಾಗುತ್ತಿರಲಿಲ್ಲ ಎಂಬುದನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಆತ್ಮವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಜಗಳೂರು ತಾಲೂಕಿನ ಪ್ರಗತಿಪರ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ವಿಷಯ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೀತಾ ಮಂಜು “ನಾನು ಬೆಳಗ್ಗೆ ಸಾಂಸ್ಕೃತಿಕ ಭವನಕ್ಕೆ ತೆರಳಿದಾಗ ಬೇರೆ ಯಾವುದೇ ಪದಾಧಿಕಾರಿಗಳು, ನೌಕರರು ಇರಲಿಲ್ಲ. ಭವನದ ಬಾಗಿಲು ತೆರೆದು ಒಳಗೆ ಹೋಗಿ ಫೋಟೋ ತಂದು ಇಡಲು ನನಗೆ ಧೈರ್ಯ ಸಾಲಲಿಲ್ಲ. ಈ ಹಿನ್ನೆಲೆಯಲ್ಲಿ ಈ ತಪ್ಪು ನಡೆದಿದೆ” ಎಂದು ಹೇಳಿದರು. ಆದರೆ ಚಿತ್ರದಲ್ಲಿ ಶೆಟರ್ ತೆರೆದಿರುವ ಚಿತ್ರ ಸ್ಪಷ್ಟವಾಗಿ ಕಾಣುತ್ತಿದೆ‌.

ಈ ವಿಷಯ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೀತಾ ಮಂಜು “ನಾನು ಬೆಳಗ್ಗೆ ಸಾಂಸ್ಕೃತಿಕ ಭವನಕ್ಕೆ ತೆರಳಿದಾಗ ಬೇರೆ ಯಾವುದೇ ಪದಾಧಿಕಾರಿಗಳು, ನೌಕರರು ಇರಲಿಲ್ಲ. ಭವನದ ಬಾಗಿಲು ತೆರೆದು ಒಳಗೆ ಹೋಗಿ ಫೋಟೋ ತಂದು ಇಡಲು ನನಗೆ ಧೈರ್ಯ ಸಾಲಲಿಲ್ಲ. ಈ ಹಿನ್ನೆಲೆಯಲ್ಲಿ ಈ ತಪ್ಪು ನಡೆದಿದೆ” ಎಂದು ಹೇಳಿದರು. ಆದರೆ ಚಿತ್ರದಲ್ಲಿ ಶೆಟರ್ ತೆರೆದಿರುವ ಚಿತ್ರ ಸ್ಪಷ್ಟವಾಗಿ ಕಾಣುತ್ತಿದೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...