ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಬಿಐ ತನಿಖೆಗೆ ದಾವಣಗೆರೆ ದಸಂಸ ಆಗ್ರಹ

Date:

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಜಮಾಯಿಸಿದ ದಸಂಸ ಕಾರ್ಯಕರ್ತರು ತಹಶೀಲ್ದಾ‌ರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಅಂಬೇಡ್ಕ‌ರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರ್ ಸಿದ್ದಪ್ಪ ಮಾತನಾಡಿ, “ದಲಿತ ಕುಟುಂಬದ ಹನುಮಂತಪ್ಪನವರ ಮೂಕಪ್ರಾಣಿಗಳನ್ನು ರಾಮೇಗೌಡನ ಜಮೀನಿನಲ್ಲಿ ಮೇಯಿಸಿದ ಕಾರಣಕ್ಕೆ ಹನುಮಂತಪ್ಪ ಅವರಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಲ್ಲದೆ, ಸಹೋದರ ರೆಡ್ಡೆಪ್ಪ ಅವರ ಮೇಲೆಯೂ ಹಲ್ಲೆ ಮಾಡಿದ್ದಾರೆ. ಜತೆಗೆ ಅವರು ವಾಸವಾಗಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವುದು ಖಂಡನೀಯ. ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ದಲಿತ ವಿರೋಧಿ ನೀತಿ ಕಾಣುತ್ತಿದೆ. ಕೂಡಲೇ ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲ ಹನುಮಂತಪ್ಪ ಮಾತನಾಡಿ, “ದೇಶದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದು, ಮನುವಾದಿಗಳು ಕೋಲಾರ ಜಿಲ್ಲೆಯ ದಲಿತ ಸಮುದಾಯದ ಹನುಮಂತಪ್ಪ ಅವರ ಗುಡಿಸಲಿಗೆ ಬೆಂಕಿ ಹಚ್ಚಿರುವುದು ದೌರ್ಜನ್ಯದ ಪರಮಾವಧಿ. ಪೋಲಿಸರು ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ಆಗಮಿಸದಿದ್ದರೆ ಕಂಬಾಲಪಲ್ಲಿ ಪ್ರಕರಣ ಮರುಕಳಿಸುತ್ತಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹುಚ್ಚು ನಾಯಿಗಳ ಹಾವಳಿಗೆ ಬೇಸತ್ತ ಜನ; ಕ್ರಮ ಕೈಗೊಳ್ಳದ ನಗರಸಭೆಯ ವಿರುದ್ಧ ಆಕ್ರೋಶ

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಕುಬೇಂದ್ರಪ್ರ, ಮುಖಂಡರುಗಳಾದ ವಕೀಲ ಆರ್ ಓಬಳೇಶ್, ಮಾದಿಹಳ್ಳಿ ಮಂಜುನಾಥ್, ಶಿವಣ್ಣ, ರವಿ, ಮೆದಗಿನಕೆರೆ ಹನುಮಂತಪ್ಪ, ಮುನಿಸ್ವಾಮಿ, ಪಲ್ಲಾಗಟ್ಟಿ ರಂಗಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...