ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಪ್ರತಿಭಟನೆ

Date:

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಛಲವಾದಿ ಸಮುದಾಯದ ಮುಖಂಡರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ ಬಿ ದೇವೇಂದ್ರಪ್ಪ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಮಾದಿಗ ಸಮುದಾಯದ ಹಿರಿಯ ಮುಖಂಡ ಶಂಭುಲಿಂಗಪ್ಪ, “ದಶಕಗಳಿಂದ ಹೊರಾಟ ನಡೆಸುತ್ತಾ ಬಂದಿದ್ದರೂ ನ್ಯಾ.ಸದಾಶಿವ ಆಯೋಗ ವರದಿಯನ್ನು ಸರ್ಕಾರಗಳು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯಗಳು ಅಸ್ಪೃಶ್ಯತೆ ಅನುಭವಿಸುತ್ತಿವೆ. ಸಮುದಾಯಗಳ ಜನರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವಕಾಶ ವಂಚಿತರಾಗುತ್ತಿದ್ದಾರೆ. ಸಾಮಾಜಿಕ ನ್ಯಾಯದಡಿ ಸರ್ಕಾರಿ ಸೌಲಭ್ಯಗಳು ಸಿಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಹಿಂದ ವರ್ಗದ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸದಾಶಿವ ಆಯೋಗ ಶಿಫಾರಸ್ಸು ಮಾಡಿರುವ ಒಳಮೀಸಲಾತಿಯನ್ನು ಜಾರಿಗೆ ತರಬೇಕು. ಅದಕ್ಕಾಗಿ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಒತ್ತಡ ತರಬೇಕು” ಎಂದು ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಿ.ದೇವೇಂದ್ರಪ್ಪ, “ನಾವು ಕೂಡ ಎಸ್‌ಟಿ ಮೀಸಲಾತಿ ಹೆಚ್ಚಳಕ್ಕಾಗಿ ಹೊರಾಟ ನಡೆಸುತ್ತಿದ್ದೇವೆ. ಡಾ.ಬಿ.ಆರ್ .ಅಂಬೇಡ್ಕ‌ರ್ ಅವರ ಸಂವಿಧಾನದಡಿ ಮೀಸಲಾತಿ ಪ್ರತಿಯೊಬ್ಬರ ಹಕ್ಕು. ಮಾದಿಗ ಮತ್ತು ಛಲವಾದಿ ಸಮುದಾಯಗಳ ನೋವು, ಜೀವನ ಸ್ಥಿತಿಗತಿಗಳನ್ನು ನಾನು ಹತ್ತಿರದಿಂದ ಮನಗಂಡಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿ ತಮ್ಮ ಮನವಿಯನ್ನು ಮುಂದಿಟ್ಟು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಛಲವಾದಿ ಸಮಾಜದ ಮುಖಂಡ ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕರಾದ ಬಿ.ಮಹೇಶ್ವ ರಪ್ಪ ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯ ಕ್ಷ ಶಂಶಿರ್ ಅಹಮದ್.ಚಲವಾದಿ ಸಮಾಜದ ಮುಖಂಡ ರಾದ ಸಿ.ತಿಪ್ಪೇಸ್ವಾಮಿ, – ಮಾದಿಗ ಸಮಾಜದ ಮುಖಂಡರಾದ ಹಟ್ಟಿ ತಿಪ್ಪೇ ಸ್ವಾಮಿ,ಭಾರತ ಗ್ಯಾಸ್ ಮಾಲೀಕ ಓಬಣ್ಣ, ಸಿದ್ದಮ್ಮನಹಳ್ಳಿ ವೆಂಕ ಟೇಶ್. ಮಾಜಿ ಪ.ಪಂ.ಅಧ್ಯಕ್ಷ ಮಂಜುನಾಥ್, ಪೂಜಾರಿ ಸಿದ್ದಪ್ಪ. ಪಲ್ಲಾಗಟ್ಟೆ ಶೇಖರಪ್ಪ .ಅಣಬೂರು ರಾಜಶೇಖ‌ರ್,ತಾಯಿಟೋನಿ ಬಾಬು ರಾಜೇಂದ್ರ ಪ್ರಸಾದ್.ಗೌರಿಪುರ ಕುಬೇರಪ್ಪ, ಅಣಬೂರು ರೇಣು ಕೇಶ್.ಪಾಪಯ್ಯ,ಕುಬೇಂದ್ರಪ್ಪ, ದುರ್ಗಪ್ಪ. ಬಿಳಿಚೋಡ ಹಾಲೇಶ್. ಸತೀಶ್ ಮಲೆ ಮಾಚಿಕೆರೆ,ಧನ್ಯ ಕುಮಾರ್ ಮಾದಿಹಳ್ಳಿ ಮಂಜು ನಾಥ್,ಬಸವರಾಜ್,ಸಿದ್ದಮ್ಮನಹ ಳ್ಳಿ ವೆಂಕಟೇಶ್,ಮಾರುತಿ ಜಗಳೂರಯ್ಯ.ಹನುಮಂತಪುರ ರಾಜು. ಹಿರೇಮಲ್ಲನಹಳ್ಳಿ ಲೋಕೇಶ್, ಸಾವಿತ್ರಮ್ಮ ಸತ್ಯಮೂರ್ತಿ.ಅಹ್ಮದ್ ಅಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...