ದಾವಣಗೆರೆ | ಹೊರಗುತ್ತಿಗೆ ಕಾರ್ಮಿಕರನ್ನು ನಿರುದ್ಯೋಗಿಗಳಾಗಿ ಮಾಡುವ ಹುನ್ನಾರ; ಆರೋಪ

Date:

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿ ಮಾಡಲು ಹೊರಟ ಹರಿಹರದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಡಾ ಎಂ ವಿ ವೆಂಕಟೇಶ್‌ ಅವರಿಗೆ ಮನವಿ ಸಲ್ಲಿಸಿದರು.

“ರಾಯಚೂರಿನ ದೀಕ್ಷಾ ಕನ್ಸಲ್ಟೆನ್ಸಿ ಹೆಸರಿನ ಮ್ಯಾನ್ ಪವರ್ ಏಜೆನ್ಸಿಯಡಿ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಕೆಲಸಕ್ಕೆ ಕುತ್ತು ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೊರಗುತ್ತಿಗೆ ನೌಕರರು ಆಗ್ರಹಿಸಿದರು.

“ರಾಯಚೂರು ಮೂಲದ ದೀಕ್ಷಾ ಕನ್ಸಲ್ಟೆನ್ಸಿ ಸಂಸ್ಥೆ ಯಾವುದೇ ತಾರತಮ್ಯವಿಲ್ಲದೇ ಪಾರದರ್ಶಕವಾಗಿ ಕಾರ್ಮಿಕ ಸಿಬ್ಬಂದಿಗಳಾದ ತಮಗೆ ಪ್ರತಿ ತಿಂಗಳು ವೇತನ ನೀಡುತ್ತಿದ್ದಾರೆ. ಸಕಾಲಕ್ಕೆ ಇಎಸ್‌ಐ ಕಟ್ಟುತ್ತಿದ್ದಾರೆ. ಸಮವಸ್ತ್ರ, ಬ್ಯಾಡ್ಜ್ ಸೇರಿದಂತೆ ಎಲ್ಲ ಸೌಲಭ್ಯ ನೀಡುತ್ತಿದ್ದಾರೆ. ಈವರೆಗೆ ತಮಗೆ ಯಾರಿಗೂ ಯಾವುದೇ ರೀತಿಯಲ್ಲೂ ತೊಂದರೆಯಾಗಿಲ್ಲ. ಸಂಸ್ಥೆಯವರು ಯಾವುದೇ ಲೋಪವನ್ನೂ ಎಸಗಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹರಿಹರದ ಆಶ್ರಯ ಕಾಲನಿಯ ಡಾ. ಬಿ ಆರ್ ಅಂಬೇಡ್ಕರ್ ರಾಜ್ಯ ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ನೌಕರರ ಹಾಗೂ ಇತರೆ ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರ ಹೆಸರಿನಲ್ಲಿ ಮತ್ತು ಬೇರೆ ಬೇರೆ ಸಂಘಟನೆಗಳ ಹೆಸರಿನಲ್ಲಿ ರಾಯಚೂರು ಮೂಲದ ಏಜೆನ್ಸಿ ಹಾಗೂ ಸಿಬ್ಬಂದಿಗಳ ವಿರುದ್ಧ ದುರುದ್ದೇಶದಿಂದ ಟೆಂಡ‌ರ್ ರದ್ದುಪಡಿಸಿ, ಬೇರೆಯವರಿಗೆ ಅವಕಾಶ ಮಾಡಿಕೊಡುವ ಹುನ್ನಾರ ನಡೆದಿದೆ” ಎಂದು ಆರೋಪಿಸಿದರು.

“ತಾವ್ಯಾರೂ ಯಾವುದೇ ದೂರು ಪತ್ರಕ್ಕೆ ಸಹಿ ಹಾಕದಿದ್ದರೂ, ತಮ್ಮ ಸಹಿಗಳನ್ನು ಸೃಷ್ಟಿಸಿಕೊಂಡು, ಮೆ.ದೀಕ್ಷಾ ಕನ್ಸಲ್ವೆನ್ಸಿ ಸಂಸ್ಥೆ ವಿರುದ್ಧ ಮತ್ತು ದಾವಣಗೆರೆ ಶಾಖೆಯ ಸಿಬ್ಬಂದಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಬೇರೆ ಸಂಘಟನೆಗಳಿಂದಲೂ ಇದೇ ರೀತಿ ದೂರು ಸಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವೆಲ್ಲರೂ ಹೊಟ್ಟೆಪಾಡಿಗಾಗಿ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್, ನಾನ್ ಕ್ಲಿನಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಇದರಿಂದ ಬರುವ ತಿಂಗಳ ಸಂಬಳದಲ್ಲೇ ಜೀವನ ನಿರ್ವಹಿಸಬೇಕಾಗಿದೆ” ಎಂದು ತಿಳಿಸಿದರು.

“ಒಂದು ವೇಳೆ ಯಾವುದೇ ಸಂಘಟನೆಯಿಂದ ಬರುವ ದುರುದ್ದೇಶಪೂರಿತ ದೂರಿನ ವಿಷಯಗಳು ಅಥವಾ ಸಂಗತಿಗಳನ್ನು ಜಿಲ್ಲಾಡಳಿತ, ಸರ್ಕಾರ ಮಾನ್ಯ ಮಾಡಿದರೆ ನಮಗೆಲ್ಲರಿಗೂ ಏನಾದರೂ ತೊಂದರೆಯಾಗಿ, ನಿರುದ್ಯೋಗಿಗಳಾದರೆ ಕುಟುಂಬ ಸಮೇತ ತೀವ್ರ ಸಂಕಷ್ಟಕ್ಕೆ ಸಿಲುಕುತ್ತೇವೆ. ಈಗ ನಮ್ಮ ಪಾಡಿಗೆ ನಾವು ಕೆಲಸ ಮಾಡಿಕೊಂಡು ಒಂದು ಹೊತ್ತಿನ ಊಟಕ್ಕಾಗಿ ಹಗಲಿರುಳು ದುಡಿಯುತ್ತಿದ್ದೇವೆ. ಕಾರ್ಮಿಕರ ಅನ್ನವನ್ನು ಕಸಿಯುವ ಕೆಲಸ ಮಾಡುತ್ತಿರುವ ಹಾಗೂ ನಮ್ಮೆಲ್ಲರ ಹೆಸರನ್ನು ದುರುಪಯೋಗಪಡಿಸಿಕೊಂಡು ನಮ್ಮ ಕೆಲಸಕ್ಕೆ ತೊಂದರೆ ಉಂಟುಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾಸ್ಪತ್ರೆ ಗುತ್ತಿಗೆ ನೌಕರರುಗಳಾದ ತಿಪ್ಪೇಸ್ವಾಮಿ, ನಿರ್ಮಲಮ್ಮ, ಲಲಿತಮ್ಮ, ಸುರೇಶ, ಸುಧಾ, ರತ್ನಮ್ಮ, ಎಚ್ ಡಿ ಸುರೇಂದ್ರ, ಉಮೇಶ, ರತ್ನಮ್ಮ, ನಿಂಗರಾಜ, ಪಿ.ನವೀನ, ಎಚ್ ದೇವರಾಜ, ಮಣಿಕಂಠ, ಎಚ್‌ ರೇಣುಕಮ್ಮ, ಸಿ ವೀರೇಶ, ಕರಿಬಸಪ್ಪ, ಅನುಕುಮಾರ, ಜಯಮ್ಮ, ಆರ್ ತಿಪ್ಪೇಶ ನಾಯ್ಕ, ಎ ರೂಪಾ, ಶಕುಂತಲಮ್ಮ, ಎಚ್ ರುದ್ರಪ, ಆರ್ ಮಧು, ಬಿ ಸೋಮೇಶ್ವರ, ಟಿ ಪರಮೇಶ, ಬಿ ಶಂಕರ, ಬಿ ನವೀನ, ಅರುಣ, ದುರುಗಮ್ಮ, ಕೆ ಜಿ ವಿಶಾಲ, ಡಿ ರತ್ನಮ್ಮ, ಎನ್ ಎಚ್ ಮಂಜುಳಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...