ದಾವಣಗೆರೆ | ಭತ್ತ ಮೆಕ್ಕೆಜೋಳ ಬೆಂಬಲ ಬೆಲೆ, ಕಟಾವು ಯಂತ್ರಕ್ಕೆ ದರ ನಿಗದಿಗೆ ಒತ್ತಾಯಿಸಿ ಎಐಕೆಕೆಎಂಎಸ್ ಆಗ್ರಹ

Date:

ರೈತರು ಬೆಳೆದ ಭತ್ತಕ್ಕೆ ರೂ.3500, ಮೆಕ್ಕೆಜೋಳಕ್ಕೆ ರೂ 3,000 ಬೆಂಬಲ ಬೆಲೆ ನೀಡಿ, ಸರ್ಕಾರ ಬೆಳೆ ಖರೀದಿಗಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಬೆಳೆ ಕಟಾವು ಮಾಡುವ ಯಂತ್ರಗಳಿಂದ ಮಾಲೀಕರು ಏಜೆಂಟರು ರೈತರಿಂದ ದುಬಾರಿ ಬೆಲೆ ಪಡೆಯುತ್ತಿದ್ದು, ರೈತರ ಸುಲಿಗೆ ತಡೆಯಲು ಬೆಲೆ ನಿಗದಿಗೆ ಒತ್ತಾಯಿಸಿ, (ಎಐಕೆಕೆಎಂಎಸ್) ಅಖಿಲ ಭಾರತ ರೈತರು ಕೃಷಿ ಕಾರ್ಮಿಕರ ಸಂಘಟನೆಯ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ‌ ದಾವಣಗೆರೆ ಉಪವಿಭಾಗಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿದರು.

5533

ಈ ವೇಳೆ ಮಾತನಾಡಿದ ಮುಖಂಡರು “ದಾವಣಗೆರೆ ಸೇರಿದಂತೆ ಮದ್ಯ ಕರ್ನಾಟಕ ಮತ್ತು ಇತರೆಡೆಗಳಲ್ಲಿ ಭತ್ತ ಮತ್ತು ಮೆಕ್ಕೆಜೋಳ ಹೆಚ್ಚು ಹೆಚ್ಚಾಗಿ ಬೆಳೆಯುತ್ತಿದ್ದಾರೆ.‌ ಮುಂಗಾರಿನ ಪ್ರಾರಂಭದ ಹಂತದಲ್ಲಿ ಮೆಕ್ಕೆಜೋಳಕ್ಕೆ ಉತ್ತಮವಾಗಿದ್ದ ಬೆಲೆ ಈಗ ಬಹಳಷ್ಟು ಕುಸಿದಿದೆ. ಮತ್ತು ಭತ್ತದ ಬೆಲೆಯೂ ಸಹ ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ. ಜೊತೆಗೆ ಇಂದು ರೈತರ ಉತ್ಪಾದನಾ ವೆಚ್ಚವೂ ಸಹ ಬಹಳಷ್ಟು ಹೆಚ್ಚಾಗಿದ್ದು, ರೈತರು ಇಂದು ಸಂಕಷ್ಟಮಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಇಂತಹ ಸಂದರ್ಭದಲ್ಲಿ ಸರ್ಕಾರ ನೀಡುವ ಬೆಂಬಲ ಬೆಲೆ ರೈತರನ್ನು ಸ್ವಲ್ಪ ಸಂಕಷ್ಟಗಳಿಂದ ಪಾರು ಮಾಡುವಂತಿತ್ತು. ಆದರೆ ಸರ್ಕಾರದ ವತಿಯಿಂದ ನಡೆಯುವ ಬೆಳೆ ಖರೀದಿಯು ಸಹ ಇಂದು ಸರಿಯಾದ ಸಮಯಕ್ಕೆ ನಡೆಯದೆ, ಸರ್ಕಾರ ಕೂಡ ಖಾಸಗಿ ವ್ಯಾಪಾರಸ್ಥರಿಗೆ ನೇರವಾಗಿ ಅನುಕೂಲ ಮಾಡಿಕೊಟ್ಟಂತಿದೆ. ಹಾಗಾಗಿ ಕೂಡಲೇ ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸುವುದು ರೈತರಿಗೆ ಅಗತ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
5506

“ಇತ್ತೀಚೆಗೆ ಸುರಿದಿದ್ದ ನಿರಂತರವಾದ ಮಳೆಯಿಂದಾಗಿ ಭತ್ತ ಹಾಗೂ ಮೆಕ್ಕೆಜೋಳ ಬೆಳೆಗಳು ಸಾಕಷ್ಟು ನಷ್ಟವಾಗಿದೆ. ಮತ್ತು ಮಳೆಗೆ ಭತ್ತದ ಬೆಳೆಯು ನೆಲಕ್ಕುರುಳಿದೆ, ಹಾಗೂ ಮೆಕ್ಕೆಜೋಳದ ಇಳುವರಿ ಕೂಡ ಕಡಿಮೆಯಾಗಿದೆ. ಪರಿಸ್ಥಿತಿ ಹೀಗಿದ್ದಾಗ, ಭತ್ತ ಕಟಾವು ಮಾಡುವ ಯಂತ್ರಗಳ ಮಾಲೀಕರು, ಏಜೆಂಟರು ರೈತರ ಇಂತಹ ಸಂಕಷ್ಟಮಯ ಪರಿಸ್ಥಿತಿಯನ್ನು ಬಳಸಿಕೊಂಡು ಭತ್ತ ಕಟಾವಿಗೆ ಒಂದು ಗಂಟೆಗೆ ಅತೀ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿದ್ದಾರೆ, ಭತ್ತ ಕಟಾವು ಯಂತ್ರಗಳಿಗೆ ಒಂದು ಗಂಟೆಗೆ 2000 ರೂ ಗಳಿಗಿಂತ ಹೆಚ್ಚಿನ ಬೆಲೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿ ಯವರು ಅದೇಶಹೊರಡಿಸಿ ಮತ್ತು ಹೆಚ್ಚಿನ ಬೆಲೆ ತೆಗೆದುಕೊಂಡಲ್ಲಿ ಅಂತಹ ಯಂತ್ರಗಳ ಮಾಲೀಕರ ಮೇಲೆ ಗ್ರಾಮ ಪಂಚಾಯತಿ ವತಿಯಿಂದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ಆದೇಶಿಸಬೇಕು” ಎಂದು ಒತ್ತಾಯಿಸಿದರು.

5530

“ರಾಜ್ಯಾದ್ಯಂತ ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಭತ್ತ,ಮೆಕ್ಕೆಜೋಳ ಸೇರಿ ಬೆಳೆನಷ್ಟವಾಗುವ ಎಲ್ಲಾ ಸನ್ನಿವೇಶಗಳು ಸೃಷ್ಟಿಯಾಗಿವೆ. ಇಂತಹ ಕಷ್ಟಕರ ಸಂದರ್ಭದಲ್ಲಿ ರೈತರ ಹಿತ ಕಾಯುವುದು ತಮ್ಮ ಮೊದಲ ಜವಾಬ್ದಾರಿಯಾಗಿದೆ, ಆದ್ದರಿಂದ ಪ್ರತಿ ಹಳ್ಳಿಯಲ್ಲಿಯೂ ಸಹ ಸಮೀಕ್ಷೆ ಮಾಡಿ, ಎಲ್ಲೆಲ್ಲಿ ನಷ್ಟವಾಗಿದೆಯೋ ಅಲ್ಲಿ ಪ್ರತಿಯೊಬ್ಬ ರೈತರಿಗೂ ನಷ್ಟ ಪರಿಹಾರ ಒದಗಿಸಬೇಕು ಎಂದು ಎಐಕೆಕೆಎಂಎಸ್ ಜಿಲ್ಲಾ ಸಮಿತಿಯು ಮನವಿ ಮಾಡುತ್ತದೆ” ಎಂದು ತಿಳಿಸಿದರು.

“ಬೇಡಿಕೆಗಳಾದ ಖರೀದಿ ಕೇಂದ್ರವನ್ನು ಕೂಡಲೇ ಪ್ರಾರಂಭಿಸಿ, ಭತ್ತಕ್ಕೆ 3,500 ರೂ , ಮೆಕ್ಕೆಜೋಳ ಬೆಳೆಗೆ 3,000 ರೂ ಬೆಂಬಲ ಬೆಲೆ ನೀಡಿ, ಸರ್ಕಾರವೇ ಖರಿಧಿಸಬೇಕು. ಮೆಕ್ಕೆಜೋಳ ಬೆಳೆಯನ್ನು ಖರೀದಿ ಕೇಂದ್ರದ ಮೂಲಕ ಖರೀದಿಸಬೇಕು. ಮಳೆಯಿಂದಾಗಿ ನಷ್ಟಕ್ಕೀಡಾದ ಬೆಳೆಗೆ ಬೆಲೆ ನಷ್ಟ ಪರಿಹಾರ ಘೋಷಿಸಬೇಕು. ಭತ್ತ & ಮೆಕ್ಕೆಜೋಳವನ್ನು ಖರೀದಿ ಮಾಡಲು ಸರ್ಕಾರ ಒಂದು ಆವರ್ತನಿಧಿಯನ್ನು ಸ್ಥಾಪಿಸಬೇಕು ಎನ್ನುವ ರೈತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತ ಕಾರ್ಮಿಕ ಜನವಿರೋಧಿ ನೀತಿ ಬದಲಾಯಿಸಲು ಫ್ರೀಡಂ ಪಾರ್ಕಿನಲ್ಲಿ ಹೋರಾಟ

ಜಿಲ್ಲಾ ಅಧ್ಯಕ್ಷ ಮಧು ತೊಗಲೇರಿ, ಜಿಲ್ಲಾ ಕಾರ್ಯದರ್ಶಿ ನಾಗಸ್ಮಿತ,ಜಿಲ್ಲಾ ಉಪಾಧ್ಯಕ್ಷ ಬಸವರಾಜಪ್ಪ ನೀರ್ಥಡಿ, ಸಹಕಾರ್ಯದರ್ಶಿ ನಾಗರಾಜ್ ರಾಮಗೊಂಡನಹಳ್ಳಿ, ಮುಖಂಡರಾದ ರಾಜು, ಸತೀಶ್ ಕೈದಾಳೆ, ಎಂದು ಎಲ್ಲಪ್ಪ ದ್ಯಾಮೇನಹಳ್ಳಿ , ಲೋಕೇಶ್ ನೀರ್ಥಡಿ , ಬೀರ್ ಲಿಂಗಪ್ಪ , ಜಂಪಣ್ಣ ಗುಡಾಲ್ , ತಿಪ್ಪೇಶ್,, ರಾಜಪ್ಪ ನಲ್ಕುಂದ , ಜಯಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ...

ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ...

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...