ದಾವಣಗೆರೆ | ಅಜಾತಶತ್ರು ಶಾಮನೂರು ಶಂಕರಜ್ಜ; ಅಂತಿಮ ದರ್ಶನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ

Date:

ರಾಜಕೀಯದ ಅಜಾತಶತ್ರು ಎಂದೆನಿಸಿದ್ದ, ಬೆಂಗಳೂರಿನಲ್ಲಿ ನಿಧನರಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ, ದೇಶದ ಅತ್ಯಂತ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯ, ವಿಧಿ ವಿಧಾನಗಳೊಂದಿಗೆ ಇಂದು ಸಂಜೆ 4.30ರ ಸಮಯಕ್ಕೆ ಆನೆಕೊಂಡ ಬಳಿಯ ಕಲ್ಲೇಶ್ವರ ಅಕ್ಕಿ ಗಿರಣಿ ಆವರಣದಲ್ಲಿ ಧರ್ಮಪತ್ನಿ ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕರ ಪಾರ್ಥಿವ ಶರೀರವನ್ನು ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭೆಯ ಕಛೇರಿಯಿಂದ ಸೋಮವಾರ ಬೆಳಗಿನ ವೇಳೆ ಹಿರಿಯ ಪುತ್ರ ಬಕ್ಕೇಶ್ ಅವರ ಮನೆಗೆ ತರಲಾಯಿತು.

1003307009
ಅಂತಿಮ ಯಾತ್ರೆಯಲ್ಲಿ ಜನಸ್ತೋಮ, ಬಿಗಿ ಪೊಲೀಸ್ ಬಂದೋಬಸ್ತ್

ನಂತರ ಪುತ್ರರಾದ ಗಣೇಶ್, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಮನೆಯಲ್ಲಿ ಪೂಜೆ ನಡೆಸಿ ಅಂತಿಮ ದರ್ಶನಕ್ಕೆ ಮನೆ ಆವರಣದಲ್ಲಿ ಇರಿಸಲಾಗಿತ್ತು . ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರವನ್ನು ನಗರದ ಹೈಸ್ಕೂಲ್ ಆವರಣಕ್ಕೆ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯ ಕರ್ನಾಟಕದ ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರಾಜಕೀಯ ನಾಯಕರು, ಜನರು ಆಗಮಿಸುವ ಹಿನ್ನೆಲೆಯಲ್ಲಿ ನಗರದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಬಸ್ ಗಳನ್ನು ಹೊರಭಾಗದಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಜನಸಂದಣಿ ಹೆಚ್ಚುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಎಂಸಿಸಿ ಬ್ಲಾಕ್ ನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಂಬಂಧಿಕರು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈಗಾಗಲೇ ವಿರಕ್ತ ಮಠದ ಬಸವಪ್ರಭು ಶ್ರೀ, ಮುರುಘಾ ಶರಣರು ಸೇರಿದಂತೆ ವಿವಿಧ ಮಠಾಧೀಶರು, ದಾವಣಗೆರೆ ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಿಂದ ಆಗಮಿಸಿ ಸಂಜೆ ನಾಲ್ಕು ಗಂಟೆಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಎಂಬಂತಿದ್ದ ಶಾಮನೂರು ಶಿವಶಂಕರಪ್ಪ ನಿಧನ

‘ಎಸ್ಎಸ್, ಶಂಕರಜ್ಜ’ ಎಂದೇ ಜನಪ್ರಿಯರಾಗಿದ್ದ ಶಾಮನೂರು ಸದಾ ಲವಲವಿಕೆಯಿಂದಿರುತ್ತಿದ್ದರು. ಮಹಾನ್ ದೈವಭಕ್ತ ಹಾಗೂ ಜನಾನುರಾಗಿಯಾಗಿದ್ದು, ಜನಸಾಮಾನ್ಯರ ಸಂಕಷ್ಟಕ್ಕೆ ಸದಾ ಸ್ಪಂದಿಸುವ ದಾನಿಯಾಗಿದ್ದರು ಎಂದು ಬಹುತೇಕರು ನೆನಪಿಸಿಕೊಳ್ಳುತ್ತಾರೆ. ಜನಸಾಮಾನ್ಯನಾಗಿ ಹುಟ್ಟಿ, ಅಕ್ಕಿ ವ್ಯಾಪಾರದ ಮೂಲಕ ಪ್ರಾರಂಭಿಸಿ, ಅನೇಕ ಉದ್ಯಮ, ಶಿಕ್ಷಣ, ವೈದ್ಯಕೀಯ ಸೇವೆ ಸೇರಿದಂತೆ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಅಸಾಮಾನ್ಯರಾಗಿ ಜೀವಿಸಿದ್ದರು. ನೇರ ನುಡಿಗೆ ಹೆಸರಾಗಿದ್ದರೂ ಯಾರೊಂದಿಗೂ ದ್ವೇಷವಿಲ್ಲದೇ ಅಜಾತಶತ್ರು ಎನಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...