ದಾವಣಗೆರೆ | ಖಾಸಗೀಕರಣ ನೀತಿಯ ವಿರುದ್ಧ, ಖಾಸಗಿ ಬ್ಯಾಂಕ್ ರಾಷ್ಟ್ರೀಕರಣಕ್ಕೆ ಬ್ಯಾಂಕ್ ನೌಕರರ ಹೋರಾಟ

Date:

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ
ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ದಾವಣಗೆರೆ ಪಿ.ಬಿ.ರಸ್ತೆಯಲ್ಲಿರುವ ಕರ್ಣಾಟಕ ಬ್ಯಾಂಕಿನ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ಖಾಸಗೀಕರಣ ನೀತಿಯ ವಿರುದ್ಧ, ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲು, ಎಐಬಿಇಎ ಸಂಯೋಜಿತ ಖಾಸಗಿ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

1003084721

ಈ ವೇಳೆ ಮಾತನಾಡಿದ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, “ಸಾರ್ವಜನಿಕರ ಹಣಕ್ಕೆ ಭದ್ರತೆಯನ್ನು ನೀಡುವುದಕ್ಕಾಗಿ ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಬೇಕು, ಅಗತ್ಯ ಪ್ರಮಾಣದ ನೇಮಕಾತಿ ಮಾಡಬೇಕು, ಫೆಡರಲ್ ಬ್ಯಾಂಕಿನ ನೌಕರರ ಶೋಷಣೆಯನ್ನು ನಿಲ್ಲಿಸಬೇಕು, ಕೆಥೋಲಿಕ್ ಸಿರಿಯನ್ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು, ಖಾಸಗಿ ಬ್ಯಾಂಕುಗಳ ನಿವೃತ್ತ ನೌಕರರಿಗೆ ಸೌಲಭ್ಯಗಳನ್ನು ವಿಸ್ತರಿಸಬೇಕು, ನೈನಿತಾಲ್ ಬ್ಯಾಂಕನ್ನು ಮಾರಾಟ ಮಾಡಬಾರದು, ತಮಿಳುನಾಡು ಮರ್ಕಂಟೈಲ್ ಬ್ಯಾಂಕಿನ ನೌಕರರ ನಿವೃತ್ತಿ ವಯಸ್ಸನ್ನು 60 ಕ್ಕೆ ಹೆಚ್ಚಿಸಬೇಕು, ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎನ್ನುವ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ – ಎಐಬಿಇಎ ಸದಸ್ಯರು ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಬ್ಬು ಬೆಳೆಗಾರರ ಸಮಸ್ಯೆಗೆ ಅಧ್ಯಯನ ಸಮಿತಿ ರಚಸಿ: ರೈತ ಮುಖಂಡ ವಾಸುದೇವ ಮೇಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಖಜಾಂಚಿ ಕೆ.ವಿಶ್ವನಾಥ ಬಿಲ್ಲವ, ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ, ಆರ್.ಆಂಜನೇಯ, ಎಂ.ಡಿ.ವಿದ್ಯಾಸಾಗರ, ಆರ್.ಮಂಜಪ್ಪ, ಹೆಚ್.ಜೆ.ಆಶಾ, ರಾಜೇಶ್, ಕೆ.ಆರ್.ಹರ್ಷ, ಡಿ.ಹರ್ಷದ್, ಎಸ್.ಪ್ರಶಾಂತ್, ಸೈಯದ್ ಚಾಂದಬಾಷಾ, ಎಸ್.ಗಜೇಂದ್ರ, ಎಲ್.ಲತಾ, ಕೆ.ಹೆಚ್.ರೇಖಾ, ಹೆಚ್.ಎಸ್.ಶ್ರೀನಿಧಿ, ಪ್ರಸನ್ನ ಭಟ್, ಎಂ.ಕೆ.ನಾಗರಾಜ್ ಹಾಗೂ ನಿವೃತ್ತ ಬ್ಯಾಂಕ್ ನೌಕರರ ಸಂಘದ ಹೆಚ್.ಸುಗುರಪ್ಪ, ಕೆ.ಎಂ.ಮಹೇಶ್ವರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...