ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ ಕೋರೆಗಾಂವ್ ಸಂಭ್ರಮಾಚರಣೆ

Date:

ದಾವಣಗೆರೆಯ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ 6ನೇ ವರ್ಷದ ಕೋರೆಗಾಂವ್ ಸಂಭ್ರಮಾಚರಣೆಯನ್ನು 2026ರ ಜನವರಿ 01ರ ಗುರುವಾರ, ಬೆಳಿಗ್ಗೆ 11-30ಕ್ಕೆ ದಾವಣಗೆರೆ ಬೂದಾಳ್ ರಿಂಗ್ ರೋಡ್ ವೃತ್ತದಲ್ಲಿ ಆಚರಿಸಲಾಯಿತು.‌

ಈ ವೇಳೆ ಮಾತನಾಡಿದ ಮುಖಂಡರು “ಕೋರೆಗಾಂವ್ ಯುದ್ಧವು ಭಾರತದಲ್ಲಿರುವ ಜಾತಿವ್ಯವಸ್ಥೆಯಲ್ಲಿ ನಲುಗಿಹೋದ ಶೋಷಿತ ಸಮುದಾಯ ಶೌರ್ಯದಿಂದ ಗೆದ್ದ ಮಹಾನ್ ಹೋರಾಟವೇ ಎನ್ನಬಹುದು. 1818 ಜನವರಿ 1 ರಂದು ನಡೆದ ಆ ಯುದ್ದವು ಇಂದಿಗೂ ಮನುವಾದಿಗಳ ಮತ್ತು ಶೋಷಿತ ಸಮುದಾಯುದ ನಡುವೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿಯು ಕೂಡ ಮುಂದುವರೆಯುತ್ತಲೇ ಇದೆ. ಆದರೆ ಅಂದು ನಡೆದ ಯುದ್ದವು ನಮ್ಮೆಲ್ಲರ ಸ್ವಾಭಿಮಾನ, ಸಮಾನ ಹಕ್ಕುಗಳ ಬದುಕಿಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿ ಶೌರ್ಯದಿಂದ ಮನುವಾದಿಗಳ ಸೊಲ್ಲಡಗಿಸಿದ ಮಹಾರಾಷ್ಟ್ರದ 500 ಮಹರ್ ಸೇನಾನಿಗಳು ಜಾತೀಯತೆ, ವರ್ಣಾಶ್ರಮ ಪದ್ದತಿ, ಅಸಮಾನತೆಯ ಪ್ರತಿಪಾದಕ 2ನೇ ಬಾಜೀರಾವ ಪೇಶ್ವೆಯ 28000 ಸುಸಜ್ಜಿತ ಸೇನೆಯ ನಡುವೆ ನಡೆದ ಯುದ್ದವಾಗಿದೆ” ಎಂದು ಸ್ಮರಿಸಿದರು.

“ಯುದ್ದದ ಹಿರಿಮೆ ಮತ್ತು ಕುರುಹುಗಳನ್ನು ಪೂನಾ ನಗರ ಪಕ್ಕದಲ್ಲಿ ಹರಿಯುವ ಭೀಮಾ ನದಿಯ ದಂಡೆಯ ಮೇಲೆ ನಿರ್ಮಿಸಿರುವ 72 ಅಡಿ ಸ್ತೂಪದ ಮೇಲೆ ಕೆತ್ತಲಾಗಿದೆ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅದರ ಫಲವಾಗಿ ಮುಂದುವರೆದು ಭಾರತದಲ್ಲಿ ಸಾರ್ವತ್ರಿಕ ಶಿಕ್ಷಣ ನೀತಿಯು ಜಾರಿಗೆ ಬಂತು ಕೇವಲ ಸಂಸ್ಕೃತದಲ್ಲಿ ನೀಡುತ್ತಿದ್ದ ಶಿಕ್ಷಣವನ್ನು ಧಿಕ್ಕರಿಸಿ ಮೊದಲ ಬಾರಿಗೆ ಮಹಾತ್ಮ ಜೋತಿ ಬಾ ಪುಲೆಯವರು ಮೆಟ್ರಿಕ್ಯೂಲೇಷನ್ ನಲ್ಲಿ ಉತ್ತೀರ್ಣರಾದ ಮೊದಲಿಗರು. ನಂತರ ಸಾವಿತ್ರಿ ಬಾ ಪುಲೆ ಇವರ ಸಾರಥ್ಯದಲ್ಲಿ ಮಹಿಳೆಯರಿಗೆ ಶಾಲೆ ಪ್ರಾರಂಭಿಸಿದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಬಾಲ್ಯದಲ್ಲಿ ಶಿಕ್ಷಣ ದೊರೆಯಲು ಒಂದು ಪ್ರೇರಣೆ, ಉನ್ನತ ಶಿಕ್ಷಣ ಪಡೆಯಲು ಕಾರಣವಾಯಿತು. ಮತ್ತು ಇಂಗ್ಲೆಂಡ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಗ್ರಂಥಾಲಯದ ಒಂದು ಪುಸ್ತಕದಲ್ಲಿ 1818ರ ಕೋರೆಗಾಂವ್ ಯುದ್ಧದ ಕುರುವು ಸಿಕ್ಕತು. ಅದರ ಇತಿಹಾಸವನ್ನು ಸಂಶೋಧಿಸಿದ ಅಂಬೇಡ್ಕರ್ ಕುರುಹುಗಳ ಮೂಲಕ ಇದನ್ನು ದಾಖಲಿಸಿ, ಆಚರಿಸಿದರು.‌ ಅಂದಿನಿಂದ ಇಂದಿನವರೆಗೂ ಭೀಮಾ ಕೋರೆಗಾಂವ್ ಅವಿಸ್ಮರಣೀಯವಾಗಿದೆ” ಎಂದು ಅಭಿಪ್ರಾಯಪಟ್ಟರು.

1003423784

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ದಲಿತ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಕ್ರಮಕ್ಕೆ ಆಗ್ರಹ

ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಮಿತಿಯ ಆಶ್ಫಾಕ್, ಸತೀಶ್ ಅರವಿಂದ್, ಪವಿತ್ರ, ಆದಿಲ್ ಖಾನ್, ಜಾಫರ್, ಚಂದ್ರು, ಬಸಣ್ಣ ಸಮೀರ್, ಯಲ್ಲಪ್ಪ, ಶಿವು, ಶಿವಕುಮಾರ್, ಹನುಮಂತಪ್ಪ, ರಾಮಾಂಜನೇಯ, ಬಾಷಾ, ಮಲ್ಲಪ್ಪ ಇನ್ನೂ ಮುಂತಾದವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...