ದಾವಣಗೆರೆ | ಅಕ್ಷರದವ್ವ ಸಾವಿತ್ರಿ ಭಾಪುಲೆ ಹಾಗೂ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನಾಚರಣೆ

Date:

ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ-ಮುಸ್ಲಿಂ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ನಗರದ ಶಿವನಗರ 4ನೇ ತಿರುವಿನಲ್ಲಿ ಅಕ್ಷರದವ್ವ ಸಾವಿತ್ರಬಾಯಿ ಪುಲೆ, ಫಾತಿಮಾ ಶೇಕ್‌ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ದಾವಣಗೆರೆ ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎಲ್.ಹೆಚ್. ಅರುಣಕುಮಾ‌ರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮಾತನಾಡಿ “ಸಾವಿತ್ರಿ ಬಾಯಿ ಫುಲೆ ಮತ್ತು ಫಾತಿಮಾ ಶೇಕ್ ಜಾತಿ ಭೇದ ಅಸಮಾನತೆಗಳ ವಿರುದ್ಧ ಹೋರಾಡಿ ಶಿಕ್ಷಣವೇ ಶೋಷಣೆ ವಿರುದ್ಧದ ಶಕ್ತಿ ಎಂದು ಸಾರಿದರು. ಸಮಾಜದ ವಿರೋಧ, ಕಲ್ಲೆಸೆತಗಳ ನಡುವೆಯೂ ಮೊಟ್ಟೆ ಸಗಣಿಯನ್ನು ಅಕ್ಷರಗಳ ಹೂವಾಗಿ ಸ್ವೀಕರಿಸಿ ಮಹಿಳೆಯರ ಶಿಕ್ಷಣ ಕ್ರಾಂತಿಗೆ ಕಾರಣರಾದರು. ವಿಧವಾ ಮಹಿಳೆಯರಿಗೆ ಹೆರಿಗೆ ಗೃಹ, ಬಾಲಹತ್ಯೆ ಪ್ರತಿಬಂಧಕ ಗೃಹಗಳನ್ನು ಸ್ಥಾಪಿಸಿದರು. ಶಿಕ್ಷಣದ ಮೂಲಕ ಸಮಾಜ ಪರಿವರ್ತನೆ ಸಾಧ್ಯ ಎಂದು ನಂಬಿ ಅಕ್ಷರ ಜ್ಞಾನದ ಮೂಲಕ ಮಹಿಳೆಯರಿಗೆ ಘನತೆಯ ಬದುಕು ನೀಡಿದರು” ಎಂದು ಸ್ಮರಿಸಿದರು.

1003471314

ಮುಖ್ಯಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಬಿ.ಎಂ. ಹನುಮಂತಪ್ಪ ಮಾತನಾಡಿ, “ಫಾತಿಮಾ ಶೇಕ್ ಅವರು ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಮತ್ತು ಸಮಾಜ ಸುಧಾರಕರಾಗಿದ್ದಾರೆ. ಅವರ ಕೊಡುಗೆ ಭಾರತದ ಮಹಿಳಾ ಮತ್ತು ಶಿಕ್ಷಣದ ಇತಿಹಾಸದಲ್ಲಿ ಅಳಿಸಲಾರದ ಛಾಪು ಮೂಡಿಸಿವೆ. ಸಾವಿತ್ರಿ ಭಾಪುಲೆ ಮತ್ತು ಫಾತಿಮಾ ಅವರ ಶಿಕ್ಷಣ ಕುರಿತ ಮೌಲ್ಯಗಳು ಸಂವಿಧಾನ ರಚನೆಯಲ್ಲೂ ಸಹಕಾರಿಯಾದವು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಎಸ್‌ಪಿ ರವಿನಾರಾಯಣ್ ಮಾತನಾಡಿ, “ಶಿಕ್ಷಣ ವಂಚಿತರಾದ ಮಹಿಳೆಯರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಮೂಲಕ ಸಾವಿತ್ರಿ ಬಾಯಿ ಫುಲೆ ಮತ್ತು ಫಾತಿಮಾ ಶೇಕ್ ಅವರಿಗೆ ಗೌರವ ನೀಡಬೇಕು” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಲಿತ ಮುಸ್ಲಿಂ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಬೀನಾ ಖಾನಂ ಮಾತನಾಡಿ, “ಸಾವಿತ್ರಿ ಬಾಯಿ ಫುಲೆ ಮತ್ತು ಫಾತಿಮಾ ಶೇಕ್ ಅವರು ಅವಮಾನ ಮತ್ತು ಪುರುಷ ಪ್ರಧಾನ ಸಮಾಜದ ಕೆಂಗಣ್ಣಿಗೆ ಒಳಗಾಗಿ ನೋವುಗಳನ್ನು ಮತ್ತು ಅವಮಾನಗಳನ್ನು ಅನುಭವಿಸಿದರೂ ಸಹ ಅಕ್ಷರ ಬಿತ್ತಿ ಅಕ್ಷರ ದಾಸೋಹಿಗಳಾಗಿದ್ದಾರೆ. ಇತಿಹಾಸದಲ್ಲಿ ಇಂಥ ಹಲವು ಮಹನೀಯರು ಮರೆಯಾಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಿಜವಾದ ಆಚರಣೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 80 ಸಾವಿರ ಜನಸಂಖ್ಯೆಯ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ ಅವಕಾಶ ಕೊಡಿ: ಎಂಎಲ್ಸಿ ಅಬ್ದುಲ್ ಜಬ್ಬಾರ್

ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಅಬ್ದುಲ್ ಘನಿ ತಾಹೀರ್, ವಕೀಲರಾದ ರಿಜ್ವಿ ಖಾನ್, ಲಿಂಗರಾಜ್ ಗಾಂಧಿನಗರ, ಪರಿಸರ ಸಂರಕ್ಷಣ ವೇದಿಕೆ ರಾಜ್ಯ ಕಾರ್ಯದರ್ಶಿ ತಂಜೀಮ್ ಕಮಿಟಿ ಸದಸ್ಯರಾದ ಇಮ್ರಾನ್ ರಜ್ಜಾ, ನೆರಳು ಬೀಡಿ ಕಾಮಿಕರ ಯೂನಿಯನ್‌ನ ಕಾರ್ಯಕಾರಿ ಸಮಿತಿ ಸದಸ್ಯರಾದ ಫಾತಿಮಾ ಬಾನು, ದಲಿತ ಮುಸ್ಲಿಂ ಮಹಿಳಾ ಒಕ್ಕೂಟದ ಸದಸ್ಯರಾದ ಫಜೂನ್, ಮೆಹನತ್, ಸಬೀನಾ ತಾಜ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...