ದಾವಣಗೆರೆ | ಗೌತಮ ಬುದ್ಧನ ತತ್ವ, ಚಿಂತನೆಗಳ ಸ್ಮರಣೆಯೊಂದಿಗೆ ಬುದ್ಧ ಪೂರ್ಣಿಮೆ ಆಚರಣೆ.

Date:

ಬುದ್ಧ ಪೂರ್ಣಿಮಾ ಅಂಗವಾಗಿ ದಾವಣಗೆರೆಯ ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘದ ಕಚೇರಿಯಲ್ಲಿ ಗೌತಮ ಬುದ್ಧನ ತತ್ವ ಚಿಂತನೆಗಳ ಸ್ಮರಣೆಯೊಂದಿಗೆ ಅಳವಡಿಸಿಕೊಳ್ಳುವ ಚಿಂತನೆಯೊಂದಿಗೆ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‌ ಕುಮಾ‌ರ್ “ಗೌತಮ ಬುದ್ಧರ ವ್ಯಕ್ತಿತ್ವ ಹಾಗೂ ವಿಚಾರಧಾರೆಗಳು ಕಾಲಾತೀತ ಮತ್ತು ಸೀಮಾತೀತವಾಗಿದ್ದು, ಇಂದಿನ ಕಾಲಕ್ಕೂ ಪ್ರಸ್ತುತವಾಗಿವೆ” ಎಂದು ಅಭಿಪ್ರಾಯಪಟ್ಟರು.

“ಮಾನವನ ಉನ್ನತಿ ಹಾಗೂ ಅವನತಿಗೆ ಆತನು ಮಾಡುವ ಒಳ್ಳೆಯ ಅಥವಾ ಕೆಡುಕಿನ ಕೆಲಸವೇ ಕಾರಣವೆಂದು ಗೌತಮ ಬುದ್ಧರು ಪ್ರತಿಪಾದಿಸಿದರು. ಮನಸ್ಸನ್ನು ಸದಾ ಸ್ವಚ್ಛವಾಗಿಟ್ಟುಕೊಂಡರೆ ವ್ಯಕ್ತಿಯ ಜೊತೆಗೆ ವ್ಯಕ್ತಿತ್ವವು ಬೆಳಗುತ್ತದೆ ಎಂದು ಮನದ ಸೌಂದರ್ಯಕ್ಕಾಗಿ ಬುದ್ಧನು ಧ್ಯಾನವನ್ನು ಆಚರಣೆಗೆ ತಂದರು. ದ್ವೇಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ, ಪ್ರೀತಿಯಿಂದ ದ್ವೇಷವನ್ನು ಗೆಲ್ಲಬಹುದು. ಕೆಡುಕುಗಳನ್ನು ನಿರಾಕರಿಸಿ ಜೀವನವನ್ನು ಪ್ರೀತಿಸಬೇಕೆಂದು ಬೌದ್ಧ ಧರ್ಮದ ಮೂಲ ತತ್ವಗಳಾದ ಶಾಂತಿ, ಕರುಣೆ ಮತ್ತು ಜ್ಞಾನೋದಯದ ಶಾಂತಿ ತತ್ವಗಳನ್ನು ಪ್ರತಿಪಾದಿಸಿದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಹಿರಿಯ ವಕೀಲರು ಮತ್ತು ಚಿಂತಕರಾದ ಬಿ.ಎಂ.ಹನುಮಂತಪ್ಪ ಮಾತನಾಡಿ, “ಮನುಕುಲದ ನೆಮ್ಮದಿಗೆ ಬುದ್ದನ ತತ್ವಸಿದ್ಧಾಂತಗಳನ್ನು ಪಾಲಿಸುವುದು ಅವಶ್ಯಕವಾಗಿದೆ, ಅಶಾಂತಿಯ ಕಾರ್ಮೋಡದ ವಾತಾವರಣದಲ್ಲಿ ಬುದ್ಧನ ಆದರ್ಶಗಳನ್ನು ಪಾಲಿಸುವುದು ಮುಖ್ಯವಾಗಿದೆ. ಬುದ್ದರು ನಡೆದ ದಾರಿ ನಮ್ಮ ಪಥವಾಗಬೇಕಾಗಿದೆ” ಎಂದು ಪ್ರತಿಪಾದಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ ಸುಶಿಕ್ಷಿತರಾಗಿಸಿ; ಪೊಲೀಸ್ ಉಪಾಧೀಕ್ಷಕ ದಿನಕರ್.

ಕಾರ್ಯಕ್ರಮದಲ್ಲಿ ಮಾತನಾಡಿದ ಬಯಲಾಟ ಅಕಾಡೆಮಿಯ ಮಾಜಿ ಸದಸ್ಯರಾದ ಡಾ॥ ಕೆ. ರುದ್ರಪ್ಪ “ಬುದ್ಧನ ಉಪದೇಶಗಳು ಸಾರ್ವಕಾಲಿಕವಾಗಿ ಅವರ ಸಿದ್ಧಾಂತಗಳನ್ನು ಆಚರಣೆಯಲ್ಲಿ ತರುವ ಮೂಲಕ ಮನುಷ್ಯರಲ್ಲಿ ಅರಿವು ಮೂಡಿಸಬೇಕಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾಗತಿಕ ಲಿಂಗಾಯಿತ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷರಾದ ವನಜಾ ಮಹಾಲಿಂಗಯ್ಯ “ಗೌತಮ ಬುದ್ಧರು ಸಮಾಜದಲ್ಲಿನ ಕಂದಾಚಾರ, ಮೌಡ್ಯ ಅಜ್ಞಾನಗಳ ನಿವಾರಣೆಗೆ ಪ್ರಾಯೋಗಿಕವಾದ ಅರ್ಥಪೂರ್ಣ ಸಿದ್ಧಾಂತಗಳನ್ನು ತಿಳಿಸುವ ಮೂಲಕ ಜಗತ್ತಿನ ಬೆಳಕಾಗಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ಎನ್.ಎಸ್. ರಾಜು,ರಂಗಭೂಮಿ ನಟ ವಿನಾಯಕ ನಾಕೋಡ್, ರಂಗಕರ್ಮಿಗಳಾದ ಬಸವನಗೌಡ್ರು, ಬಿ. ಮಂಜುನಾಥ್, ಎಂ.ಪಿ.ನಾಗೇಂದ್ರಯ್ಯ, ಪಕ್ಕೀರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...