ದಾವಣಗೆರೆ | ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು: ಎಐಟಿಯುಸಿ ಜಿಲ್ಲಾಧ್ಯಕ್ಷ

Date:

ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಮತ್ತು ಕ್ವಾರಿ ಕಾರ್ಮಿಕರ ಸಂಘವು ಶ್ರಮಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದುದು. ಸಹಕಾರ ಸಂಘದ ಸೌಲಭ್ಯಗಳನ್ನು ಬಳಸಿಕೊಂಡು ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ ರಾಘವೇಂದ್ರ ನಾಯರಿ ಕರೆ ನೀಡಿದರು.

ನಗರದ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘದ 8ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ದಿನಮಾನದಲ್ಲಿ ಹಣಕಾಸು ಸಂಸ್ಥೆ ನಡೆಸುವುದು ತುಂಬಾ ಕಷ್ಟಕರವಾಗಿರುವಾಗ ಕಾರ್ಮಿಕ ಸಂಘವೊಂದು ತನ್ನ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸಹಕಾರ ಸಂಘವನ್ನು ಮುನ್ನೆಡೆಸಿಕೊಂಡು ಬರುತ್ತಿರುವುದು ಸಂತೋಷದ ವಿಷಯ. ಕಾರ್ಮಿಕರು ತಮ್ಮ ಕಷ್ಟಾರ್ಜಿತದ ಉಳಿತಾಯದ ಹಣವನ್ನು ಈ ಸಹಕಾರ ಸಂಘದಲ್ಲಿ ಠೇವಣಿ ಇಡುವುದರ ಮೂಲಕ, ದಿನವಹಿ ಪಿಗ್ಮಿ ಕಟ್ಟುವುದರ ಮೂಲಕ ಹೆಚ್ಚಿನ ವ್ಯವಹಾರವನ್ನು ಮಾಡಬೇಕು. ಜೊತೆಗೆ ತಮ್ಮ ಕಷ್ಟ ಕಾಲದಲ್ಲಿ ಸಹಕಾರ ಸಂಘದಿಂದ ಸಾಲವನ್ನು ಪಡೆದು ಸರಿಯಾದ ಸಮಯದಲ್ಲಿ ಅದರ ಮರುಪಾವತಿ ಮಾಡಬೇಕು. ಹಾಗಾದಲ್ಲಿ ಮಾತ್ರ ಸಹಕಾರ ಸಂಘಗಳು ಉಳಿಯಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಮುಖಂಡ ಹಾಗೂ ಸಹಕಾರ ಸಂಘದ ಅಧ್ಯಕ್ಷ ಎಚ್ ಜಿ ಉಮೇಶ್ ಅವರಗೆರೆ ಮಾತನಾಡಿ, “ಕಾರ್ಮಿಕರಿಗಾಗಿ ಈ ಸಹಕಾರ ಸಂಘವನ್ನು ಸ್ಥಾಪಿಸಿದ್ದೇವೆ. ಸಹಕಾರ ಸಂಘ ಸ್ಥಾಪನೆಯಾಗಿ 8 ವರ್ಷದ ಬಳಿಕ 2022-23 ರ ಸಾಲಿನಲ್ಲಿ ಲಾಭ ದಾಖಲಿಸುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘವನ್ನು ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶೋಷಿತರಿಗೆ ಭೂಮಿ, ಮೂಲ ಸೌಕರ್ಯ ಪೂರೈಕೆಗೆ ದಸಂಸ ಆಗ್ರಹ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಕಾರ್ಮಿಕ ಮುಖಂಡರುಗಳಾದ ಆನಂದರಾಜ್, ಮೊಹಮದ್ ಭಾಷಾ, ಗುಡಿಹಳ್ಳಿ ಹಾಲೇಶ್, ಸಹಕಾರ ಸಂಘದ ಉಪಾಧ್ಯಕ್ಷ ಪಿ ಕೆ ಲಿಂಗರಾಜ್, ನಿರ್ದೇಶಕರುಗಳಾದ ವಿ ಲಕ್ಷ್ಮಣ್, ಟಿ ಭೀಮಾ ರೆಡ್ಡಿ, ಡಿ ಷಣ್ಮುಗಂ, ಜಿ ಆರ್ ನಾಗರಾಜ್, ಸೈಯದ್ ಗೌಸ್‌ಪೀರ್, ಶಿವಕುಮಾರ್ ಡಿ ಶೆಟ್ಟರ್, ಹಾಲಮ್ಮ, ಮುರುಗೇಶ್ ಎಸ್, ಸಿದ್ದಲಿಂಗಪ್ಪ್ ಎಸ್.ಎಂ., ಎಂ.ಮುತ್ತೇಶ್, ಫಯಾಜ್ ಅಹ್ಮದ್ ಹಾಗೂ ಕಾರ್ಯದರ್ಶಿ ಕೆ ಆಶಾ, ಸಿಬ್ಬಂದಿಗಳಾದ ಯು.ವಿಶಾಲಾಕ್ಷಿ, ಎಸ್.ಕವಿತಾ ಹಾಗೂ ಬಿ.ಸಿ.ಹರೀಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...