ದಾವಣಗೆರೆ | ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಖಂಡಿಸಿ ಸಿಪಿಐ ಪ್ರತಿಭಟನೆ

Date:

ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಮಂಡಳಿ ಕರೆಯ ಮೇರೆಗೆ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ದಲಿತ, ಆದಿವಾಸಿ ಮತ್ತು ಮಹಿಳೆಯರ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ದಾವಣಗೆರೆ ಜಿಲ್ಲಾ ಮಂಡಳಿ ಪ್ರತಿಭಟನೆ ನಡೆಸಿತು.

ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಸದಸ್ಯರು ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ದಲಿತರ ಆದಿವಾಸಿಗಳ ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಅಖಿಲ ಭಾರತ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ “ಭಾರತದ ಇತಿಹಾಸದಲ್ಲಿ ಶತಶತಮಾನಗಳಿಂದಲೂ ದಬ್ಬಾಳಿಕೆ ,ಅಸ್ಪೃಶ್ಯತೆ ಮತ್ತು ಶೋಷಣೆಗಳಿಗೆ ಬಲಿಯಾದ ದಲಿತ ,ಆದಿವಾಸಿ ಮತ್ತು ಮಹಿಳಾ ಸಮುದಾಯಗಳು ಇಂದಿಗೂ ಈ ದೌರ್ಜನ್ಯಗಳಿಂದ ಬಿಡುಗಡೆಯಾಗಿಲ್ಲ. ಬದಲಿಗೆ ಇಂದಿಗೂ ಕೂಡ ಅವುಗಳು ಅವ್ಯಾಹತವಾಗಿ ಮುಂದುವರಿಯುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದಲ್ಲಿ ಸನಾತನ ಸಾಮಾಜಿಕ ವ್ಯವಸ್ಥೆಯು ಮನುಸ್ಮೃತಿಯ ಆಧಾರದಲ್ಲಿ ಅಂದರೆ, ವರ್ಣಾಶ್ರಮ ಪದ್ಧತಿಯನ್ನು ಸ್ಥಿರಗೊಳಿಸಿ ಮನುಷ್ಯರನ್ನು ಶ್ರೇಷ್ಠ ಮತ್ತು ಕನಿಷ್ಠ ಎಂದು ವಿಭಜಿಸಿದೆ, ಆಳುವ ಸರ್ಕಾರಗಳು ಪರೋಕ್ಷವಾಗಿ ಇಂತಹ ಘಟನೆಗಳಿಗೆ ಬೆಂಬಲ ನೀಡುತ್ತಿದ್ದು, ಇದನ್ನು ಆಳುವ ಸರ್ಕಾರಗಳು ಕೈ ಬಿಟ್ಟು ಸಂವಿಧಾನಬದ್ಧವಾಗಿ ಎಲ್ಲರಿಗೂ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಮುಖಂಡರುಗಳಾದ ಪಿ ಷಣ್ಮುಖ ಸ್ವಾಮಿ, ಐರಣಿ ಚಂದ್ರು, ಕೆ ಬಾನಪ್ಪ, ಸಿದ್ದಲಿಂಗೇಶ್, ಶೇಖರ ನಾಯಕ, ನರೇಗಾ ರಂಗನಾಥ್, ಕೆರನಹಳ್ಳಿ ರಾಜು, ಬೆಳಗೆರೆ ರುದ್ರಮ್ಮ, ಏ ತಿಪ್ಪೇಶ್, ಜಿ ಎಲ್ಲಪ್ಪ, ಸರೋಜಾ, ಕೆ ಜಿ ಶಿವಮೂರ್ತಿ, ಚಿನ್ನಪ್ಪ, ರಮೇಶ್ ಸಿ ದಾಸರ್, ಹರ್ಷ, ಗದಿಗೇಶ ಪಾಳೇದ, ಹೆಚ್ಎಸ್ ಚಂದ್ರು, ಜಯಪ್ಪ, ಮಹೇಶ್, ನಾಗಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...