ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

Date:

ಸ್ಲಂನಲ್ಲಿ ವಾಸಿಸುವ ವಸತಿ ಹೀನರಿಗೆ ನಿವೇಶನಗಳನ್ನು ನೀಡುವಂತೆ ಹಲವು ವರ್ಷಗಳಿಂದ ಸ್ಲಂಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ದಾವಣಗೆರೆ ಜಿಲ್ಲಾ ಸಮಿತಿಯಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನಮ್ಮ ಮನವಿಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಂದಿಸುತ್ತಿಲ್ಲ ಎಂದು ಸಮಿತಿ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂಘಟನೆಯ ಹೋರಾಟಕ್ಕೆ ಸ್ಪಂದಿಸಿದ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಗೌತಮ್ ಬಗಾದಿ ಅವರು ಜಿಎಂಐಟಿ ಬಳಿ 41 ಎಕರೆ ಹಾಗೂ ಬಾತಿ ಸರ್ವೇ ನಂಬರ್‌ನಲ್ಲಿ 20 ಎಕರೆ ಭೂಮಿ ಖರೀದಿಸಿದ್ದು, ಮೊದಲ ಆದ್ಯತೆಯನ್ನು ಸ್ಲಂ ವಸತಿರಹಿತರಿಗೆ ನೀಡುವುದಾಗಿ ಭರವಸೆ ನೀಡಿದ್ದರು. ಅವರ ವರ್ಗಾವಣೆ ನಂತರ ಇಬ್ಬರು, ಮೂವರು ಜಿಲ್ಲಾಧಿಕಾರಿಗಳು ಬಂದರು. ಅವರಿಗೂ ಕೂಡ ಮನವಿ ಸಲ್ಲಿಸಿದರು ಕ್ರಮ ಕೈಗೊಂಡಿಲ್ಲ”
ಎಂದು ಆಕ್ಷೇಪಿಸಿದರು.

“ಈಗಿನ ಜಿಲ್ಲಾಧಿಕಾರಿಗೆ ಜನವರಿ 8ರಂದು ವಸತಿ ರಹಿತರ ಪರವಾಗಿ ಸಂಘಟನೆಯಿಂದ ಮನವಿ ಸಲ್ಲಿಸಲಾಗುವುದು. ಕ್ರಮ ಕೈಗೊಳ್ಳದಿದ್ದಲ್ಲಿ ಜನವರಿ 16ರಿಂದ ನಿವೇಶನ ಸಿಗುವವರೆಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ ಮಾತನಾಡಿ, “ನಮ್ಮ ಸಂಘಟನೆಯಿಂದ ಕಳೆದ 14 ವರ್ಷಗಳಿಂದ ಮೂಲ ಸೌಕರ್ಯಕ್ಕಾಗಿ ಹೋರಾಟ ಮಾಡಿಕೊಂಡು ಬರಲಾಗಿದೆ. ಸ್ಲಂನಿವಾಸಿಗಳ ನಿವೇಶನಕ್ಕಾಗಿ ಹೋರಾಟ ನಡೆಸಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈಗಿನ ಜಿಲ್ಲಾಧಿಕಾರಿಗಳು ನಮ್ಮ ಮನವಿಗೆ ಕ್ರಮ ಕೈಗೊಳ್ಳದಿದ್ದರೆ ಸುಮಾರು 1000ಕ್ಕೂ ಹೆಚ್ಚು ನಿವೇಶನ ರಹಿತ ಮಹಿಳೆಯರು, ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿವೇಶನ ನೀಡುವವರೆಗೂ ನಿರಂತರ ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ಸುದ್ದಿಗೋಷ್ಟಿಯಲ್ಲಿ ಎಂ ಶಬ್ಬಿರ್ ಸಾಬ್, ಮುನ್ನಾ ಸಾಬ್, ಮಂಜುಳ, ಜಂಶಿದಾಬಾನು, ನಯಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...