ದಾವಣಗೆರೆ | ಕಟ್ಟಡ ಕಾರ್ಮಿಕರ ಅಗತ್ಯತೆ ಈಡೇರಿಸುವಂತೆ ಆಗ್ರಹ

Date:

ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮದುವೆ, ನಿವೃತ್ತಿ ವೇತನ, ಮಕ್ಕಳ ವಿದ್ಯಾಭ್ಯಾಸ, ವೈದ್ಯಕೀಯ ಚಿಕಿತ್ಸೆ ಮತ್ತು ಅಂತಿಮ ಸಂಸ್ಕಾರ ಸೇರಿದಂತೆ ಹಲವು ಸಹಾಯಧನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕಟ್ಟಡ ಕಾರ್ಮಿಕರು ಮತ್ತು ಕಲ್ಲು ಕ್ವಾರಿ ಕಾರ್ಮಿಕರು ಆರೋಪಿಸಿದರು.

ಕಟ್ಟಡ ಕಾರ್ಮಿಕರು ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕ ಮುಖಂಡರ ನಿಯೋಗವು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಶಾಸಕ ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದ್ದು, “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಕೂಡಲೇ ಸಹಾಯಧನ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಆಗ್ರಹಿಸಿದರು.

ಸಂಘದ ರಾಜ್ಯಾಧ್ಯಕ್ಷ ಎಚ್ ಜಿ ಉಮೇಶ್ ಮಾತನಾಡಿ, “ಹಿಂದಿನ ಬಿಜೆಪಿ ಸರ್ಕಾರದಲ್ಲಿದ್ದ ಮಂತ್ರಿಗಳು, ಕಾರ್ಮಿಕರಿಗೆ ಹಲವು ರೀತಿಯ ಕಿಟ್ಟುಗಳನ್ನು ನೀಡುವ ನೆಪದಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ದುರುಪಯೋಗ ಮಾಡಿದ್ದಾರೆ. ಸಾಲದೆಂಬಂತೆ ಆರೋಗ್ಯ ತಪಾಸಣೆಯ ನೆಪದಲ್ಲಿ ಒಂದು ಜಿಲ್ಲೆಗೆ 10 ಕೋಟಿ ರೂ.ಗಳಂತೆ ಬಿಡುಗಡೆ ಮಾಡಿ, ಅದರಲ್ಲಿ ಶೇ.40 ರಿಂದ ಶೇ.45ರಷ್ಟು ಕಮಿಷನ್ ಪಡೆದು ಭ್ರಷ್ಟಾಚಾರ ನಡೆಸಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿರುವ ಕಾರ್ಮಿಕ ಮಂತ್ರಿಗಳೂ ಹಿಂದಿನ ಬಿಜೆಪಿ ಸರ್ಕಾರದ ಚಾಳಿಯನ್ನೇ ಅನುಸರಿಸುತ್ತಿದ್ದು, 31 ಜಿಲ್ಲೆಗಳಿಗೆ 310 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಮೂಲಕ ಕಮಿಷನ್ ಕಬಳಿಸಲು ಹುನ್ನಾರ ನಡೆಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

“ಕಳೆದ ಮೂರು ವರ್ಷಗಳಿಂದ ನೈಜ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ನಿವೃತ್ತಿ ವೇತನ, ಮಕ್ಕಳ ಮದುವೆಗೆ ಸಹಾಯಧನ, ಆಸ್ಪತ್ರೆ ವೆಚ್ಚದಂತಹ ಯಾವುದೇ ಸಹಾಯಧನಗಳೂ ಬಿಡುಗಡೆಯಾಗುತ್ತಿಲ್ಲ. ಅಲ್ಲದೆ ಖಾಸಗಿ ಆರೋಗ್ಯ ಸಂಸ್ಥೆಗಳೊಂದಿಗೆ ಶಾಮಿಲಾಗಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡುವ ಹೊಂದಾಣಿಕೆಯ ಯೋಜನೆ ನಡೆಸಿದೆ. ಇದನ್ನು ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

“ಕಾಂಗ್ರೆಸ್ ಸರ್ಕಾರಕ್ಕೆ ಕಟ್ಟಡ ಕಾರ್ಮಿಕರ ಮೇಲೆ ಒಂದು ವೇಳೆ ಕಾಳಜಿ ಇದ್ದರೆ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿನ ಇಎಸ್‌ಐ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಹೋಬಳಿ ಮಟ್ಟದಲ್ಲಿರುವ ಪಿಎಚ್‌ಸಿಗಳನ್ನು ಹೊಂದಾಣಿಕೆ ಮಾಡಿಕೊಂಡು ನಗದುರಹಿತ ಚಿಕಿತ್ಸೆ ನೀಡಲು ನಿರ್ದೇಶನ ನೀಡಬೇಕು” ಎಂದು ಆಗ್ರಹಿಸಿದರು.

“ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ದುರುಪಯೋಗ ತಡೆಯಲು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಸರ್ಕಾರಕ್ಕೆ ಮಸಿ ಬಳಿಯುವಂತಹ ಈ ಕಾರ್ಯಕ್ರಮವನ್ನು ಕೂಡಲೇ ತಡೆಹಿಡಿಯಬೇಕು” ಎಂದು ಮನವಿ ಮಾಡಿದರು.

“ರಾಜ್ಯದಲ್ಲಿ ಮಾಹಿತಿಯ ಪ್ರಕಾರ 15 ರಿಂದ 20 ಲಕ್ಷ ಮಂದಿ ಕಟ್ಟಡ ಕಾರ್ಮಿಕರು ಇದ್ದಾರೆ. ಕಾರ್ಮಿಕ ಇಲಾಖೆಯ ಈಗಿನ ಮಾಹಿತಿ ಪ್ರಕಾರ 48 ಲಕ್ಷ ಮಂದಿ ಕಟ್ಟಡ ಕಾರ್ಮಿಕರು ನೋಂದಣಿ ಆಗಿದ್ದಾರೆ. ಹಾಗಾಗಿ ಕೂಡಲೇ ಬೋಗಸ್ ಕಾರ್ಡುದಾರರನ್ನು ತಡೆಹಿಡಿಯುವ ಜತೆಗೆ ನಕಲಿ ಗುರುತಿನ ಚೀಟಿ ನೀಡಿದ ಸಂಸ್ಥೆಗಳು, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿಶ್ವ ಶಾಂತಿಗಾಗಿ ಅಂತಾರಾಷ್ಟ್ರೀಯ ಸಂಘರ್ಷ ದಿನ ಆಚರಣೆ: ಎಐಯುಟಿಯುಸಿ

“ಕಟ್ಟಡ ಕಾರ್ಮಿಕರಿಗೆ ಅವಶ್ಯಕವೇ ಅಲ್ಲದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯಲ್ಲಿ ಇರುವ ಹಣವನ್ನು ಖಾಲಿ ಮಾಡಿ ಶಾಶ್ವತವಾಗಿ ಮಂಡಳಿಯನ್ನು ಮುಚ್ಚಲು ಹುನ್ನಾರ ನಡೆಸಲಾಗುತ್ತಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆದು ಚರ್ಚಿಸಬೇಕು. ಈ ವಿಚಾರವಾಗಿ ವಿಳಂಬ ಮಾಡಿದರೆ ಕರ್ನಾಟಕ ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಬೀದಿಗೆ ಇಳಿದು ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ವಿ ಲಕ್ಷ್ಮಣ್, ಎಂ ಹನುಮಂತಪ್ಪ, ಮುರುಗೇಶ್, ತಿಪ್ಪೇಶ್, ನೇತ್ರಾವತಿ, ಸುರೇಶ್‌, ಮುದಹದಡಿ ಸುರೇಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...