ದಾವಣಗೆರೆ | ಭಾರಿ ಸ್ಪೋಟ ಹಿನ್ನೆಲೆ ಭೂಮಿ ಕಂಪಿಸಿದ ಅನುಭವ: ಭಯದಿಂದ ಬೀದಿಯಲ್ಲಿ ನಿಂತ ಜನ

Date:

ಭಾರಿ ಸ್ಫೋಟದೊಂದಿಗೆ ಭೂಮಿ ಕಂಪಿಸಿದ ಅನುಭವದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದು ಭಯದಿಂದ ಬೀದಿಯಲ್ಲಿ ನಿಂತ ಘಟನೆ ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ, ಗೊಲ್ಲರಹಟ್ಟಿ, ತೊರೆಸಾಲು ಮತ್ತು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಭಾಗದಲ್ಲಿ ನಡೆದಿದೆ ತಿಳಿದು ಬಂದಿದೆ.

ಇಂದು ಸಂಜೆ 7: 30ರಿಂದ 8:00 ಗಂಟೆ ನಡುವೆ ದಾವಣಗೆರೆ ಜಿಲ್ಲೆ ಜಗಲೂರು ತಾಲೂಕಿನ ಚಿಕ್ಕಮಲ್ಲನಹೊಳೆ, ಗೊಲ್ಲರಹಟ್ಟಿ, ತೊರೆಸಾಲು ಹಾಗೂ ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ ಗ್ರಾಮಗಳ ಭಾಗದಲ್ಲಿ ದೊಡ್ಡ ಸ್ಫೋಟವೊಂದು ಕೇಳಿಬಂದಿದ್ದು, ಭೂಮಿಯು ಕಂಪಿಸಿದ ಅನುಭವವಾಗಿದೆ. ಇದರಿಂದ ಮನೆಯಿಂದ ವಸ್ತುಗಳು ಅಲುಗಾಡಿದ್ದು, ಭಯಭೀತರಾದ ಜನ ಕೂಡಲೇ ಭಯದಿಂದ ಬೀದಿಗೆ ಬಂದು ನಿಂತಿದ್ದು ಆತಂಕದಿಂದ ಕಾಲ ಕಳೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡ ಸ್ಫೋಟದ ಶಬ್ದ ಮತ್ತು ಕಂಪಿಸಿದ ಅನುಭವಕ್ಕೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಭಾಗದಲ್ಲಿ ಸೋಲಾರ್ ವಿದ್ಯುತ್ ಫಲಕಗಳ ಅಳವಡಿಕೆ, ಪವನ ಯಂತ್ರ ಚಾಲಿತ ವಿದ್ಯುತ್ ಸ್ಥಾವರಗಳ ಅಳವಡಿಕೆ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಆದರೂ ಈ ಶಬ್ದ ಯಾವ ಮೂಲದಿಂದ ಬಂದಿದೆ ಎಂದು ಗೊತ್ತಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮೂರು ನಾಲ್ಕು ದಿನಗಳಿಂದಲೂ ಇದೇ ಸಮಯಕ್ಕೆ ಸಣ್ಣ ಸಣ್ಣ ಬಿರುಸಿನ ಸ್ಫೋಟದ ಶಬ್ದ ಕೇಳಿ ಬರುತ್ತಿತ್ತು. ಇಂದು ಬಹಳ ದೊಡ್ಡದಾದ ಶಬ್ದ ಕೇಳಿ ಬಂದಿದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈ ದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಚಿಕ್ಕಮಲ್ಲನಹೊಳೆ ಗ್ರಾಮದ ಸ್ಥಳೀಯ ಪತ್ರಕರ್ತ ಸಂದೀಪ್ “ಎರಡು ಮೂರು ದಿನದಿಂದ ಪ್ರತಿ ದಿನ ಎಂಟರ ಸಮಯಕ್ಕೆ ಸಣ್ಣ ಸ್ಫೋಟ ಕೇಳಿ ಬರುತ್ತಿತ್ತು ಎಂದು ಚಿಕ್ಕಮಲ್ಲನಹೊಳೆ ಮತ್ತು ಗೊಲ್ಲರಹಟ್ಟಿ ಭಾಗದ ಸ್ಥಳೀಯರು ತಿಳಿಸಿದ್ದಾರೆ. ಆದರೆ ಇಂದು ಬಹುತೇಕ ಜೋರಾದ ಶಬ್ದ ಬಂದಿದ್ದು ಮನೆಯಲ್ಲಿ ವಸ್ತುಗಳು ಅಲುಗಾಡಿದ ಶಬ್ದವಾಗಿದೆ. ಸ್ಪೋಟಕ್ಕೆ ಬೆಚ್ಚಿಬಿದ್ದ ಜನತೆ ಮತ್ತು ನಾವುಗಳು ಬೀದಿಗೆ ಬಂದು ನಿಂತೆವು. ಈ ಸ್ಫೋಟದ ಮೂಲ ಇನ್ನು ಗೊತ್ತಾಗಿಲ್ಲ. ಗೊಲ್ಲರಹಟ್ಟಿ ಗ್ರಾಮದ ಕಡೆಯಿಂದ ಸ್ಪೋಟದ ಶಬ್ದವಾಗಿದ್ದು, ಇದರ ಮೂಲ ಇನ್ನಷ್ಟೇ ಪತ್ತೆ ಮಾಡಬೇಕಿದೆ. ಜನರು ಭಯಭೀತರಾಗಿದ್ದಾರೆ. ಸ್ಥಳೀಯ ತಹಶೀಲ್ದಾರರು, ಅಧಿಕಾರಿಗಳು ಕೂಡಲೇ ಆಗಮಿಸಿ ಜನರಿಗೆ ಧೈರ್ಯ ತುಂಬಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸರ್ಕಾರಿ ಶಾಲೆಗಳ ವಿಲೀನ ಮುಚ್ಚುವ ಪ್ರಕ್ರಿಯೆ ಸಂವಿಧಾನದ ಶಿಕ್ಷಣ ಹಕ್ಕು ಉಲ್ಲಂಘನೆ

ಮಾಹಿತಿಯ ಮೂಲಗಳ ಪ್ರಕಾರ ಜಗಲೂರು ತಹಶೀಲ್ದಾರ್, ಚಿಕ್ಕಮಲ್ಲನಹೊಳೆ ಮತ್ತು ತೊರೆಸಾಲು ಭಾಗಕ್ಕೆ, ಕೂಡ್ಲಿಗಿ ತಹಸಿಲ್ದಾರ್ ಕಲ್ಲಳಿಯ ಭಾಗಕ್ಕೆ ಭೇಟಿ ನೀಡಲು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದ್ದು ಸ್ಪೋಟದ ಕಾರಣವನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...